top of page

72ನೇ ವಸಂತಕ್ಕೆ ಕಾಲಿಟ್ಟ ಸ್ಟಾಲಿನ್; 'ಹಿಂದಿ ಹೇರಿಕೆ'ಗೆ ವಿರೋಧ ನನ್ನ ಹುಟ್ಟುಹಬ್ಬದ ಸಂದೇಶ!

  • Apr 8
  • 1 min read

ಸಿಎಂ ಸ್ಟಾಲಿನ್ ಅವರು ಇಂದು ತಮ್ಮ ಕುಟುಂಬ ಸದಸ್ಯರು ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡರು.

ree

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ 72 ವರ್ಷಗಳನ್ನು ಪೂರೈಸಿದರು ಮತ್ತು ಡಿಎಂಕೆ ಅಧ್ಯಕ್ಷರು ತಮ್ಮ ಹುಟ್ಟುಹಬ್ಬದ ಸಂದೇಶವಾಗಿ ರಾಜ್ಯ ಸ್ವಾಯತ್ತತೆ, ದ್ವಿಭಾಷಾ ನೀತಿ ಮತ್ತು ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಒತ್ತಿ ಹೇಳಿದರು.

ಇಂದು ತಮ್ಮ ಕುಟುಂಬ ಸದಸ್ಯರು ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡ ಸ್ಟಾಲಿನ್, ಕಾರ್ಯಕರ್ತರಿಗೆ "ಒಂದು ಗುರಿ"ಯ ಪ್ರಮಾಣವಚನ ಬೋಧಿಸಿದರು, ಅದು ತಮಿಳುನಾಡಿನ ಹಿತಾಸಕ್ತಿಗಳನ್ನು ರಕ್ಷಿಸುವುದು ಮತ್ತು ಮುಂಬರುವ ಎಲ್ಲಾ ಸಮಯದಲ್ಲೂ ಹಿಂದಿ ಹೇರಿಕೆಯನ್ನು ವಿರೋಧಿಸುವುದು.

"ತಮಿಳುನಾಡು ಪೊರಡಮ್, ತಮಿಳುನಾಡು ವೆಲ್ಲಮ್"(ತಮಿಳುನಾಡು ಹೋರಾಡುತ್ತದೆ, ತಮಿಳುನಾಡು ಗೆಲ್ಲುತ್ತದೆ) ಎಂದು ಸ್ಟಾಲಿನ್ ಹೇಳಿದರು. ಇದನ್ನು ಪಕ್ಷದ ಎಲ್ಲಾ ಕಾರ್ಯಕರ್ತರು ಪುನರಾವರ್ತಿಸಿದರು.


ಡಿಎಂಕೆ ಪ್ರಧಾನ ಕಚೇರಿ "ಅಣ್ಣಾ ಅರಿವಲಯಂ"ನಲ್ಲಿ ಇಂದು ಹಬ್ಬದ ವಾತಾವರಣವಿತ್ತು. ಪಕ್ಷದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ತಮ್ಮ ಪಕ್ಷದ ಮುಖ್ಯಸ್ಥರನ್ನು ಸ್ವಾಗತಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.

ದ್ರಾವಿಡ ಪಕ್ಷದ ಮುಖ್ಯಸ್ಥರು ತಮ್ಮ ಹುಟ್ಟುಹಬ್ಬದ ಸಂದೇಶವಾಗಿ ರಾಜ್ಯ ಸ್ವಾಯತ್ತತೆಯ ತತ್ವಗಳು, ಹಿಂದಿ ಹೇರಿಕೆಗೆ ವಿರೋಧ ಮತ್ತು ದ್ವಿಭಾಷಾ ನೀತಿಗೆ ಬದ್ಧತೆಯನ್ನು ಒತ್ತಿ ಹೇಳಿದರು. ತಮಿಳನ್ನು ರಕ್ಷಿಸುವುದಾಗಿ ಮತ್ತು ತಮಿಳುನಾಡಿನ ಹಕ್ಕುಗಳನ್ನು ಎತ್ತಿಹಿಡಿಯುವುದಾಗಿ ಪುನರುಚ್ಚರಿಸಿದರು.

1971 ರಲ್ಲಿ ಕೇವಲ 18 ವರ್ಷದವನಿದ್ದಾಗ ಪಕ್ಷದ ಸಮ್ಮೇಳನದಲ್ಲಿ ಹಿಂದಿ ಹೇರಿಕೆಯನ್ನು ತೀವ್ರವಾಗಿ ವಿರೋಧಿಸಿದ್ದೆ. ಈಗಲೂ ಅದೇ ಹುರುಪಿನಿಂದ ಹಿಂದಿ ಹೇರಿಕೆಯನ್ನು ವಿರೋಧಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಹೇಳಿದರು.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page