top of page

ಮಾರಿಷಸ್‌ಗೆ ಆಗಮಿಸಿದ ಪ್ರಧಾನಿ ಮೋದಿ; ಬಿಹಾರಿ ಸಾಂಪ್ರದಾಯಿಕ ಗೀತ್ ಗವಾಯಿ ಸ್ವಾಗತ

  • Mar 11
  • 1 min read

ಇಂದು ಮಾರಿಷಸ್‌ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಭಾರತೀಯ ಸಮುದಾಯದ ಮಹಿಳೆಯರು ಬಿಹಾರಿ ಸಾಂಪ್ರದಾಯಿಕ ಗೀತ್ ಗವಾಯಿಯೊಂದಿಗೆ ಸ್ವಾಗತಿಸಲಾಯಿತು.

ree

ಪೋರ್ಟ್ ಲೂಯಿಸ್: ಎರಡು ದಿನಗಳ ಭೇಟಿಗಾಗಿ ಮಾರಿಷಸ್‌ಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಂಗಳವಾರ ಮಾರಿಷಸ್‌ನಲ್ಲಿರುವ ಭಾರತೀಯ ವಲಸಿಗರು ಆತ್ಮೀಯ ಸ್ವಾಗತ ನೀಡಿದರು.

ಇಂದು ಮಾರಿಷಸ್‌ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಭಾರತೀಯ ಸಮುದಾಯದ ಮಹಿಳೆಯರು ಬಿಹಾರಿ ಸಾಂಪ್ರದಾಯಿಕ ಗೀತ್ ಗವಾಯಿಯೊಂದಿಗೆ ಸ್ವಾಗತಿಸಲಾಯಿತು. ಈ ವೇಳೆ ಹಾಡುಗಳನ್ನು ಹಾಡುತ್ತಿರುವವರೊಂದಿಗೆ ಪ್ರಧಾನಿ ಮೋದಿ ಚಪ್ಪಾಳೆ ತಟ್ಟುತ್ತಾ ಆನಂದಿಸಿದರು.

ಗೀತ್ ಗವಾಯಿ ಎಂಬುದು ಭಾರತದ ಭೋಜ್‌ಪುರಿ ಪಟ್ಟಿಯ ಮಹಿಳೆಯರು ಮಾರಿಷಸ್‌ಗೆ ತಂದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಾಕಾರಗೊಳಿಸುವ ಸಾಂಪ್ರದಾಯಿಕ ಭೋಜ್‌ಪುರಿ ಸಂಗೀತ ಮೇಳವಾಗಿದೆ.

"ಮಾರಿಷಸ್‌ನಲ್ಲಿರುವ ಭಾರತೀಯ ಸಮುದಾಯದಿಂದ ಬಂದ ಆತ್ಮೀಯ ಸ್ವಾಗತದಿಂದ ನಾನು ತುಂಬಾ ಭಾವುಕನಾಗಿದ್ದೇನೆ. ಭಾರತೀಯ ಪರಂಪರೆ, ಸಂಸ್ಕೃತಿ ಮತ್ತು ಮೌಲ್ಯಗಳಿಗೆ ಅವರ ಬಲವಾದ ನಂಟು ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ" ಎಂದು ಪ್ರಧಾನಿ ಮೋದಿ X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಾರಿಷಸ್‌ಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಸರ್ ಸೀವೂಸಾಗುರ್ ರಾಮ್‌ಗೂಲಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾರಿಷಸ್‌ ಪ್ರಧಾನಿ ನವೀನ್‌ಚಂದ್ರ ರಾಮ್‌ಗೂಲಂ ಅವರು ಹಾರ ಹಾಕಿ ಸ್ವಾಗತಿಸಿದರು.

ಇದಕ್ಕು ಮುನ್ನ "ಹಿಂದೂ ಮಹಾಸಾಗರದ ಪ್ರಮುಖ ಪಾಲುದಾರ ಮತ್ತು ಆಫ್ರಿಕನ್ ಖಂಡದ ಹೆಬ್ಬಾಗಿಲು ಮಾರಿಷಸ್​​ನ ತಮ್ಮ ಭೇಟಿಯ ಸಮಯದಲ್ಲಿ ಅಲ್ಲಿನ ಪ್ರಧಾನಿ ಜೊತೆ ಮಾತುಕತೆಗೆ ಎದುರು ನೋಡುತ್ತಿರುವುದಾಗಿ" ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು

ಮಾರ್ಚ್ 12ರಂದು ನಡೆಯುವ ಮಾರಿಷಸ್‌ನ ರಾಷ್ಟ್ರೀಯ ದಿನಾಚರಣೆಯಲ್ಲಿ ಭಾರತೀಯ ರಕ್ಷಣಾ ಪಡೆಗಳ ತುಕಡಿ ಮತ್ತು ಭಾರತೀಯ ನೌಕಾಪಡೆಯ ಒಂದು ಹಡಗು ಭಾಗವಹಿಸಲಿದೆ. ಪ್ರಧಾನಿ ಮೋದಿ ಅವರು ಕೊನೆಯದಾಗಿ 2015ರಲ್ಲಿ ಮಾರಿಷಸ್‌ಗೆ ಭೇಟಿ ನೀಡಿದ್ದರು.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page