top of page

AICC ಅಧ್ಯಕ್ಷರಿಗೆ ಇದೆಂಥ ದು:ಸ್ಥಿತಿ: ಪ್ರಿಯಾಂಕಾ ನಾಮಪತ್ರ ಸಲ್ಲಿಕೆ ವೇಳೆ ಬಾಗಿಲ ಹೊರಗೆ ನಿಂತು ಇಣುಕಿ ನೋಡಿದ ಖರ್ಗೆ?, ವಿಡಿಯೋ ವೈರಲ್!

  • Apr 4
  • 1 min read

ಇಂದು ಪ್ರಿಯಾಂಕಾ ವಾದ್ರಾ ಕುಟುಂಬ ಸಮೇತ ವಯನಾಡಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಉಪಸ್ಥಿತರಿದ್ದರು.


ree









ವಯನಾಡು(ಕೇರಳ): ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಜಿನಾಮೆಯಿಂದ ತೆರವಾಗಿದ್ದು ವಯನಾಡು ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ಕಾಂಗ್ರೆಸ್ ನಿಂದ ಪ್ರಿಯಾಂಕಾ ವಾದ್ರಾ ಸ್ಪರ್ಧಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಪ್ರಿಯಾಂಕಾ ವಾದ್ರಾ ಕುಟುಂಬ ಸಮೇತ ವಯನಾಡಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಉಪಸ್ಥಿತರಿದ್ದರು. ಆದರೆ ಇದೀಗ ವಿಡಿಯೋವೊಂದು ವೈರಲ್ ಆಗಿದ್ದು ಆ ವಿಡಿಯೋದಲ್ಲಿ ಪ್ರಿಯಾಂಕಾ ವಾದ್ರಾ ನಾಮಪತ್ರ ಸಲ್ಲಿಕೆ ವೇಳೆ ಬಾಗಿಲ ಹೊರಗೆ ನಿಂತು ಖರ್ಗೆ ಇಣುಕಿ ನೋಡುತ್ತಿರುವುದನ್ನು ಕಾಣಬಹುದು.


ಹೌದು... ಬಿಜೆಪಿ ಹಿರಿಯ ಮುಖಂಡ ರಾಜೀವ್ ಚಂದ್ರಶೇಖರ್ ಅವರು, ಈ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಅಲ್ಲದೆ, ನೀವು ಎಲ್ಲಿದ್ದಿರಿ ಮಲ್ಲಿಕಾರ್ಜುನ ಖರ್ಗೆ ಸಾಹೇಬರೇ? ಮೊದಲ ಕುಟುಂಬದ ವಯನಾಡ್‌ಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ವಾದ್ರಾ ಅವರು ನಾಮಪತ್ರ ಸಲ್ಲಿಸುತ್ತಿದ್ದಾಗ ನಿಮ್ಮನ್ನು ಹೊರಗೆ ಇರಿಸಲಾಗಿದೆ. ಕಾರಣ ನೀವು ಅವರ ಕುಟುಂಬವಲ್ಲ. ಕುಟುಂಬಕ್ಕೆ ಮೊದಲ ಆದ್ಯತೆ ಎಂದು ಬರೆದಿದ್ದಾರೆ.


ವಯನಾಡು ಉಪ ಚುನಾವಣೆ: ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ, ರಾಹುಲ್ ಜೊತೆ ಭರ್ಜರಿ ರೋಡ್ ಶೋ

ಅಷ್ಟೇ ಅಲ್ಲದೆ, ಸೋನಿಯಾ ಕುಟುಂಬದ ಅಹಂಕಾರ ಮತ್ತು ಅರ್ಹತೆಯ ಬಲಿಪೀಠದಲ್ಲಿ ಆತ್ಮಗೌರವ ಮತ್ತು ಘನತೆಯನ್ನು ತ್ಯಾಗ ಮಾಡಲಾಗಿದೆ. ಅವರು ಹಿರಿಯ ದಲಿತ ನಾಯಕ ಮತ್ತು ಪಕ್ಷದ ಅಧ್ಯಕ್ಷರನ್ನು ಈ ರೀತಿ ನಡೆಸಿಕೊಂಡರೆ, ಅವರು ವಯನಾಡಿನ ಜನರನ್ನು ಹೇಗೆ ನಡೆಸಿಕೊಳ್ಳುತ್ತಾರೆ ಎಂಬುದನ್ನು ಊಹಿಸಿ ಎಂದು ಬರೆದುಕೊಂಡಿದ್ದಾರೆ.

ಈ ವಿಡಿಯೋ ಇದೀಗ ವೈರಲ್ ಆಗಿದೆ. ಅಲ್ಲದೆ ವ್ಯತಿರಿಕ್ತ ಕಮೆಂಟ್ ಗಳು ವ್ಯಕ್ತವಾಗುತ್ತಿದೆ. ಕೆಲವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದೆಂಥ ದು:ಸ್ಥಿತಿ ಎಂದು ಬರೆದರೆ, ಕೆಲವರು ಇದು ನಕಲಿ ವಿಡಿಯೋ ಎಂದು ಕಮೆಂಟ್ ಮಾಡುತ್ತಿದ್ದಾರೆ. ಆದರೆ ಈ ವಿಡಿಯೋ ಅಸಲಿಯತ್ತೇನು ಎಂಬುದು ಇನ್ನು ಪತ್ತೆಯಾಗಿಲ್ಲ.


Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page