top of page

Airtel network down: ಏರ್ಟೆಲ್​ ಬ್ರಾಡ್​ಬ್ಯಾಂಡ್​, ಮೊಬೈಲ್ ನೆಟ್​ವರ್ಕ್​​ ಬಗ್ಗೆ ಗ್ರಾಹಕರ ದೂರು!

ದೇಶದ ಎರಡನೇ ಅತಿದೊಡ್ಡ ಟೆಲಿಕಾಂ ಸೇವಾ ಪೂರೈಕೆದಾರ ಏರ್‌ಟೆಲ್ ಇಂದು ನೆಟವರ್ಕ್​ ಸಮಸ್ಯೆ ಎದುರಿಸಿದ್ದು, ಲಕ್ಷಾಂತರ ಏರ್‌ಟೆಲ್ ಬಳಕೆದಾರರು ಸೇವೆ ವ್ಯತ್ಯಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ದೂರುತ್ತಿದ್ದಾರೆ.

ree

ನವದೆಹಲಿ: ದೇಶದ ಎರಡನೇ ಅತಿದೊಡ್ಡ ಟೆಲಿಕಾಂ ಸೇವಾ ಪೂರೈಕೆದಾರ ಸಂಸ್ಥೆ ಏರ್ಟೆಲ್ ಸೇವೆಗಳಲ್ಲಿ ವ್ಯತ್ಯಯವಾಗಿದ್ದು, ನೆಟ್ವರ್ಕ್ ಸಮಸ್ಯೆಯಿಂದಾಗಿ ಗ್ರಾಹಕರು ಪರದಾಡುವಂತಾಗಿದೆ.

ಹೌದು.. ದೇಶದ ಎರಡನೇ ಅತಿದೊಡ್ಡ ಟೆಲಿಕಾಂ ಸೇವಾ ಪೂರೈಕೆದಾರ ಏರ್‌ಟೆಲ್ ಇಂದು ನೆಟವರ್ಕ್​ ಸಮಸ್ಯೆ ಎದುರಿಸಿದ್ದು, ಇದರಿಂದಾಗಿ ಲಕ್ಷಾಂತರ ಏರ್‌ಟೆಲ್ ಬಳಕೆದಾರರು ಸೇವೆ ವ್ಯತ್ಯಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ದೂರುತ್ತಿದ್ದಾರೆ.

ಗ್ರಾಹಕರು ಸಂಪರ್ಕ ಸಮಸ್ಯೆಗಳ ಬಗ್ಗೆ ತೊಂದರೆ ಅನುಭವಿಸುತ್ತಿದ್ದು, ಸುಮಾರು 3000ಕ್ಕೂ ಅಧಿಕ ಏರ್‌ಟೆಲ್ ಬಳಕೆದಾರರು ಈ ಬಗ್ಗೆ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.


ಈ ಪೈಕಿ ಶೇ.40ರಷ್ಟು ಮಂದಿ ಮೊಬೈಲ್ ಇಂಟರ್‌ನೆಟ್ ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರಿದ್ದರೆ, ಶೇ.30 ರಷ್ಟು ಒಟ್ಟಾರೆ ಏರ್ಟೆಲ್ ಸೇವೆಗಳೇ ಸಿಗುತ್ತಿಲ್ಲ ಎಂದು ದೂರಿದ್ದಾರೆ. ಅಂತೆಯೇ ಶೇ.23 ರಷ್ಟು ಬಳಕೆದಾರರು ಮೊಬೈಲ್ ಸಿಗ್ನಲ್ ಬಗ್ಗೆ ದೂರು ನೀಡಿದ್ದು, ಕಾಲ್ ಕನೆಕ್ಟಿವಿಟಿ ಬಗ್ಗೆ ದೂರುತ್ತಿದ್ದಾರೆ.

ಏರ್ಟೆಲ್ ಸ್ಪಷ್ಟನೆ

ಇನ್ನು ಸೇವೆಗಳಲ್ಲಿ ವ್ಯತ್ಯಯದ ಕುರಿತು ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಏರ್ಟೆಲ್, ಅಡಚಣೆಗಾಗಿ ವಿಷಾಧಿಸುತ್ತೇವೆ. ನಮ್ಮ ಸೇವೆಗಳನ್ನು ಸುಧಾರಿಸಲು ನಮ್ಮ ಗ್ರಾಹಕರ ಪ್ರತಿಕ್ರಿಯೆಯನ್ನು ನಾವು ಗೌರವಿಸುತ್ತೇವೆ. ಈ ಘಟನೆ ಪುನರಾವರ್ತನೆಯಾಗದಂತೆ ನಾವು ಖಚಿತಪಡಿಸಿಕೊಳ್ಳುತ್ತೇವೆ. ನಿಮ್ಮ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಿದ್ದು, ಇಂದು ಮಧ್ಯಾಹ್ನ 2:22:06 ರೊಳಗೆ ಅದನ್ನು ಪರಿಹರಿಸಲಾಗುವುದು ಎಂದು ಹೇಳಿದೆ.


ವಿದ್ಯುತ್ ವತ್ಯಯವೇ ಕಾರಣ

ಇನ್ನು ದೇಶದ ಬಹುತೇಕ ಭಾಗಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಿದ್ದು, ಇದೇ ಏರ್ಟೆಲ್ ಸೇವೆಗಳಲ್ಲಿ ವ್ಯತ್ಯಯಕ್ಕೆ ಕಾರಣ ಎಂದು ಹೇಳಲಾಗಿದೆ. ಏರ್ಟೆಲ್ ಟವರ್ ಗಳಿರುವ ಸ್ಥಳಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೂ ವಿದ್ಯುತ್ ವ್ಯತ್ಯಯವಾಗಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸ್ಥೆ, 'ಚಿಂತಿಸಬೇಡಿ, ಅದನ್ನು ಸರಿಪಡಿಸಲು ನಾವು ಇಲ್ಲಿದ್ದೇವೆ! ದಯವಿಟ್ಟು ನಿಮ್ಮ ಏರ್‌ಟೆಲ್ ವಿವರಗಳನ್ನು ನಮಗೆ ಡಿಎಂ ಮಾಡಿ, ಇದರಿಂದ ನಾವು ನಿಮಗಾಗಿ ವಿಷಯಗಳನ್ನು ಸುಗಮಗೊಳಿಸಬಹುದು ಎಂದು ಹೇಳಿದೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page