top of page

antibiotics ಸೂಕ್ತ ಬಳಕೆ,​ ನಿಯಂತ್ರಣಕ್ಕೆ ನೀತಿ ಅಗತ್ಯ: ಸಂಸದ ಡಾ.ಸಿ .ಎನ್​.ಮಂಜುನಾಥ್​

  • Apr 8
  • 1 min read

ಸಣ್ಣಪುಟ್ಟ ಕಾಯಿಲೆಗಳಿಗೂ ಆ್ಯಂಟಿಬಯೋಟಿಕ್‌ಗಳ ಬಳಕೆ ಮಾಡಲಾಗುತ್ತಿದೆ. ಇವುಗಳ ದುರುಪಯೋಗ ಹೆಚ್ಚಾಗುತ್ತಿದ್ದು, ಆ್ಯಂಟಿಮೈಕ್ರೊಬಿಯಲ್ ಪ್ರತಿರೋಧ ಹೆಚ್ಚುತ್ತಿದೆ, ಹೀಗಾಗಿ ಅಂಟಿಬಯೋಟಿಕ್​ ಸೂಕ್ತ ಬಳಕೆ ಮತ್ತು ನಿಯಂತ್ರಣಕ್ಕೆ ಹೊಸ ನೀತಿಯ ಅಗತ್ಯವಿದೆ.

ree









ಬೆಂಗಳೂರು: ಆ್ಯಂಟಿಬಯೋಟಿಕ್​ ಸೂಕ್ತ ಬಳಕೆ ಮತ್ತು ನಿಯಂತ್ರಣಕ್ಕೆ ಹೊಸ ನೀತಿಯ ಅಗತ್ಯವಿದೆ ಎಂದು ಸಂಸದ ಡಾ.ಸಿ .ಎನ್​.ಮಂಜುನಾಥ್​ ಅವರು ಭಾನುವಾರ ಹೇಳಿದರು.

ನಗರದಲ್ಲಿ ಆಯೋಜಿಸಲಾಗಿದ್ದ 7ನೇ ರಾಷ್ಟ್ರೀಯ ಮಟ್ಟದ ಫೀವರ್​ಕಾನ್​-2024 ಸಮಾವೇಶದಲ್ಲಿ ಮಾತನಾಡಿದ ಅವರು, ಸಣ್ಣಪುಟ್ಟ ಕಾಯಿಲೆಗಳಿಗೂ ಆ್ಯಂಟಿಬಯೋಟಿಕ್‌ಗಳ ಬಳಕೆ ಮಾಡಲಾಗುತ್ತಿದೆ. ಇವುಗಳ ದುರುಪಯೋಗ ಹೆಚ್ಚಾಗುತ್ತಿದ್ದು, ಆ್ಯಂಟಿಮೈಕ್ರೊಬಿಯಲ್ ಪ್ರತಿರೋಧ ಹೆಚ್ಚುತ್ತಿದೆ, ಹೀಗಾಗಿ ಆ್ಯಂಟಿಬಯೋಟಿಕ್​ ಸೂಕ್ತ ಬಳಕೆ ಮತ್ತು ನಿಯಂತ್ರಣಕ್ಕೆ ಹೊಸ ನೀತಿಯ ಅಗತ್ಯವಿದೆ ಎಂದು ಹೇಳಿದರು.


ಹಲವು ಆರೋಗ್ಯ ಸಮಸ್ಯೆಗಳ ಮೊದಲ ಲಕ್ಷಣವೆಂದರೆ ಜ್ವರ, ಇದರ ರೋಗನಿರ್ಣಯವು ಪ್ರಮುಖ ಅಂಶವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ರೋಗಗಳನ್ನು ತ್ವರಿತವಾಗಿ ಗುಣಪಡಿಸುವ ಆತುರದಲ್ಲಿ ಆ್ಯಂಟಿಬಯೋಟಿಕ್‌ಗಳನ್ನು ಅತಿಯಾದ ಬಳಕೆ ಮಾಡಲಾಗುತ್ತಿದೆ. ಕೇವಲ ಆರೋಗ್ಯ ರಕ್ಷಣೆಯಲ್ಲಿ ಮಾತ್ರವಲ್ಲದೆ ಕೃಷಿಯಲ್ಲಿಯೂ ವ್ಯಾಪಕವಾಗಿದೆ. ಪ್ರತಿಜೀವಕಗಳು ಒಂದು ವರವಾಗಿದ್ದರೂ, ಅತಿಯಾದ ಬಳಕೆಯು ಆ್ಯಂಟಿಮೈಕ್ರೊಬಿಯಲ್ ಪ್ರತಿರೋಧದ ಹೆಚ್ಚಳಕ್ಕೆ ಕಾರಣವಾಗುತ್ತಿದೆ. ಆ್ಯಂಟಿಬಯೋಟಿಕ್ ಅಮೃತವೂ ಹೌದು. ಅತಿಯಾದರೆ ವಿಷವೂ ಹೌದು. ಹೀಗಾಗಿ ಇದನ್ನು ಅತಿಯಾಗಿ ​ಬಳಸಬಾರದು. ಈ ಬಗ್ಗೆ ತಕ್ಷಣ ಗಮನ ಹರಿಸಿ, ನಿಯಂತ್ರಿಸಬೇಕಿದೆ ಎಂದು ಹೇಳಿದರು.

ಇದೇ ವೇಳೆ ರೋಗಿಗಳ ಆರೈಕೆಯ ಅಗತ್ಯವನ್ನು ಒತ್ತಿ ಹೇಳಿದ ಅವರು, ಬಹಳಷ್ಟು ಅರೋಗ್ಯ ಸಮಸ್ಯೆಗಳ ಪ್ರಥಮ ಲಕ್ಷಣ ಜ್ವರ. ಇದನ್ನ ಸೂಕ್ತವಾಗಿ ಪರಿಶೀಲನೆ ಮಾಡುವುದು ಅಗತ್ಯ. ತಂತ್ರಜ್ಞಾನ ಮುಂದುವರೆದಂತೆ ವೈದ್ಯರು, ರೋಗಿಗಳ ಮಾಹಿತಿ ಪರಿಶೀಲಿಸಿ ಚಿಕಿತ್ಸೆ ಪ್ರಾರಂಭಿಸುತ್ತಾರೆ. ರೋಗಿಯನ್ನು ಮುಟ್ಟಿ ಆರೋಗ್ಯ ಪರಿಶೀಲಿಸಿದರೆ ಬಹಳಷ್ಟು ವಿಷಯ ತಿಳಿಯಬಹುದು. ಆದರೆ, ಇದೀಗ ಚಿಕಿತ್ಸಾ ವಿಧಾನವೇ ಬದಲಾಗುತ್ತಿದೆ ಎಂದು ತಿಳಿಸಿದರು.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page