top of page

BGT 2024: ರವಿಚಂದ್ರನ್ ಅಶ್ವಿನ್ ಬದಲಿಗೆ ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟ 26ರ ಯುವ ಆಟಗಾರ!

  • Apr 8
  • 1 min read

ಕೋಟ್ಯಾನ್ ಮಂಗಳವಾರ ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ. ಆಫ್ ಸ್ಪಿನ್ ಬೌಲರ್ ಆಗಿರುವ ಕೋಟ್ಯಾನ್ ಬಲಗೈ ಬ್ಯಾಟರ್. ಅಹಮದಾಬಾದ್‌ನಲ್ಲಿ ಮುಂಬೈ ವಿಜಯ್ ಹಜಾರೆ ಟ್ರೋಫಿ ತಂಡದೊಂದಿಗೆ ಇದ್ದರು.

ree

ನವದೆಹಲಿ: ಬಾರ್ಡರ್ ಗವಾಸ್ಕರ್ ಟ್ರೋಫಿ ನಡುವೆ ಟೀಂ ಇಂಡಿಯಾ ಬದಲಾವಣೆಯ ಸುದ್ದಿ ಇದೆ. ಸ್ಪಿನ್ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಬದಲಿಗೆ ಮುಂಬೈನ ಬಲಿಷ್ಠ ಸ್ಪಿನ್ ಬೌಲಿಂಗ್ ಆಲ್ ರೌಂಡರ್ ತನುಷ್ ಕೋಟ್ಯಾನ್ ಅವರನ್ನು ಮೆಲ್ಬೋರ್ನ್‌ನಲ್ಲಿ ಭಾರತ ತಂಡಕ್ಕೆ ಸೇರಲು ಕರೆ ನೀಡಲಾಗಿದೆ. ಕೋಟ್ಯಾನ್ ಪ್ರಸ್ತುತ ವಿಜಯ್ ಹಜಾರೆ ಟ್ರೋಫಿ ODI ಪಂದ್ಯಾವಳಿಯಲ್ಲಿ ಶ್ರೇಯಸ್ ಅಯ್ಯರ್ ಮತ್ತು ಸೂರ್ಯಕುಮಾರ್ ಯಾದವ್ ಅವರೊಂದಿಗೆ ಮುಂಬೈ ಪರ ಆಡುತ್ತಿದ್ದರು.

ಕೋಟ್ಯಾನ್ ಮಂಗಳವಾರ ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ. ಆಫ್ ಸ್ಪಿನ್ ಬೌಲರ್ ಆಗಿರುವ ಕೋಟ್ಯಾನ್ ಬಲಗೈ ಬ್ಯಾಟರ್. ಅಹಮದಾಬಾದ್‌ನಲ್ಲಿ ಮುಂಬೈ ವಿಜಯ್ ಹಜಾರೆ ಟ್ರೋಫಿ ತಂಡದೊಂದಿಗೆ ಇದ್ದರು. ಹಿರಿಯ ಆಟಗಾರ ರವಿಚಂದ್ರನ್ ಅಶ್ವಿನ್ ಅವರ ಹಠಾತ್ ನಿವೃತ್ತಿಯಿಂದಾಗಿ ಭಾರತೀಯ ಪಾಳಯ ತಂಡದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಅನಿವಾರ್ಯತೆ ಬಿಸಿಸಿಐ ಸಿಲುಕಿತ್ತು.

ಕಳೆದ ವಾರ ಗಬ್ಬಾ ಟೆಸ್ಟ್ ಡ್ರಾಗೊಂಡ ನಂತರ ನಿವೃತ್ತರಾದ ಆರ್ ಅಶ್ವಿನ್ ಬದಲಿಗೆ 26 ವರ್ಷದ ತನುಷ್ ಕೋಟ್ಯಾನ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಕೋಟ್ಯಾನ್ ಭಾರತೀಯ ದೇಶೀಯ ಸರ್ಕ್ಯೂಟ್‌ನಲ್ಲಿ ಅತ್ಯುತ್ತಮ ಆಫ್ ಸ್ಪಿನ್ನಿಂಗ್ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿದ್ದಾರೆ. ಅವರು ಈ ಹಿಂದೆ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಮೊದಲು ಆಸ್ಟ್ರೇಲಿಯಾ ಪ್ರವಾಸ ಕೈಗೊಂಡ ಭಾರತ ಎ ತಂಡದ ಭಾಗವಾಗಿದ್ದರು.


ಮುಂಬೈನ ತನುಷ್ ಕೋಟ್ಯಾನ್ ಅವರ ಪ್ರಥಮ ದರ್ಜೆ ಕ್ರಿಕೆಟ್ ವೃತ್ತಿಜೀವನವು ಇಲ್ಲಿಯವರೆಗೆ ಅದ್ಭುತವಾಗಿದೆ. ಅವರು 33 ಪಂದ್ಯಗಳಲ್ಲಿ 101 ವಿಕೆಟ್ ಪಡೆದಿದ್ದಾರೆ. ಕೋಟ್ಯಾನ್ ಇದುವರೆಗೆ ಬ್ಯಾಟ್ ಮೂಲಕ ಉತ್ತಮ ಪ್ರದರ್ಶನ ತೋರಿದ್ದಾರೆ. 2 ಶತಕ ಮತ್ತು 13 ಅರ್ಧ ಶತಕಗಳೊಂದಿಗೆ 1525 ರನ್ ಗಳಿಸಿದ್ದಾರೆ. ತನುಷ್ ಆಡಿದ 20 ಲಿಸ್ಟ್ ಎ ಪಂದ್ಯಗಳಲ್ಲಿ 20 ವಿಕೆಟ್ ಮತ್ತು 90 ರನ್ ಗಳಿಸಿದ್ದಾರೆ. 33 ಟಿ20ಗಳಲ್ಲಿ 6.39 ಎಕಾನಮಿಯಲ್ಲಿ ಬೌಲಿಂಗ್ ಮಾಡಿದ್ದು 33 ವಿಕೆಟ್ ಮತ್ತು 87 ರನ್ ಗಳಿಸಿದ್ದಾರೆ.


ತನುಷ್ ಕೋಟ್ಯಾನ್ ಇಂಡಿಯನ್ ಪ್ರೀಮಿಯರ್ ಲೀಗ್ 2024ರಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುವ ಮೂಲಕ ಐಪಿಎಲ್‌ಗೆ ಪಾದಾರ್ಪಣೆ ಮಾಡಿದರು. ಆದಾಗ್ಯೂ, ಅವರು ಕೇವಲ ಒಂದು ಪಂದ್ಯವನ್ನು ಆಡುವ ಅವಕಾಶವನ್ನು ಪಡೆದರು. ಅದರಲ್ಲಿ ಅವರು 24 ರನ್ ಗಳಿಸಿದರು. ಕೋಟ್ಯಾನ್ ಗೆ ಬೌಲಿಂಗ್ ಮಾಡುವ ಅವಕಾಶ ಸಿಗಲಿಲ್ಲ. ಆದಾಗ್ಯೂ, ತನುಷ್ ಕೋಟ್ಯಾನ್ ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಮಾರಾಟವಾಗದೆ ಉಳಿದರು.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page