top of page

BIG NEWS : ಸ್ನೇಹಮಯಿ ಕೃಷ್ಣ ಸುಳ್ಳು ಆರೋಪ ಮಾಡುತ್ತಿದ್ದಾರೆ : ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

  • Apr 8
  • 1 min read

ಹುಬ್ಬಳ್ಳಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ವಿಚಾರದಲ್ಲಿ ತಹಶೀಲ್ದಾರ್ ಹಣ ಪಾವತಿಸಿದ್ದಾರೆ. ಮುದ್ರಾಂಕ ಶುಲ್ಕವನ್ನು ತಹಶೀಲ್ದಾರ್ ಅವರೇ ಪಾವತಿ ಮಾಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬರಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.


ree










ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ನೇಹಮಯಿ ಕೃಷ್ಣ ಸುಳ್ಳು ಆರೋಪ ಮಾಡುತ್ತಿದ್ದಾರೆ. ಸೈಟ್ ನೋಂದಣಿಗೆ ಚೆಕ್ ಮೂಲಕ ಹಣ ಕೊಟ್ಟಿದ್ದಾರ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ದಾನ ಪತ್ರ ಮಾಡೋಕೆ ನನ್ನ ಭಾಮೈದ ನೋಂದಣಿ ಶುಲ್ಕ ಪಾವತಿಸಿದ್ದ.ತಹಶೀಲ್ದಾರ್ ಉಪ ವಿಭಾಗಾಧಿಕಾರಿ ಯಾಕೆ ಶುಲ್ಕ ಪಾವತಿಸುತ್ತಾರೆ ಸುಮ್ಮನೆ ಏನೋ ಹೇಳುತ್ತಾರೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ಸ್ನೇಹಮಯಿ ಕೃಷ್ಣ ಆರೋಪವೇನು?

ಸ್ನೇಹಮಯಿ ಕೃಷ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, ಮುಡಾ ಪ್ರಕರಣದಲ್ಲಿ ತಮ್ಮ ಪ್ರಭಾವ ಬೀರಿಲ್ಲ ಎಂದು ಹೇಳುವ ಸಿದ್ದರಾಮಯ್ಯನವರಿಗೆ, ನಿಮ್ಮ ಪ್ರಭಾವ ಬೀರಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಕೊಡುತ್ತಿದ್ದೇನೆ ! ಕ್ರಯಪತ್ರ ನೊಂದಣಿ ಮಾಡಿಸಿಕೊಳ್ಳುವವರು ನೊಂದಣಿಗೆ ಸಂಬಂಧಿಸಿದ ಶುಲ್ಕಗಳನ್ನು ಪಾವತಿ ಮಾಡಬೇಕು, ಅದೇ ರೀತಿ ಎನ್.ಮಂಜುನಾಥ್ ರವರು ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ.

ಆದರೆ ಸಿದ್ದರಾಮಯ್ಯನವರ ಪತ್ನಿ ಶ್ರೀಮತಿ ಪಾರ್ವತಿರವರ ಕ್ರಯಪತ್ರ ಗಮನಿಸಿ, ಮುಡಾದ ವಿಶೇಷ ತಹಸೀಲ್ದಾರ್ ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ ಎಂಬುದು ಖಚಿತವಾಗಿ ತಿಳಿದುಬರುತ್ತದೆ ! ನನ್ನ ಆರೋಪಕ್ಕೆ ಇದಕ್ಕಿಂತ ಸಾಕ್ಷಿ ಬೇಕ ? ಸಿದ್ದರಾಮಯ್ಯ ರಾಜ್ಯದ ಜನತೆಗೆ ಉತ್ತರಿಸುವರೆ? ಎಂದು ಪ್ರಶ್ನಿಸಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page