top of page

CONGRESS GUARANTEE : ಶಕ್ತಿ ಯೋಜನೆ ಕಳ್ಳಾಟಕ್ಕೆ ಬ್ರೇಕ್ - ಸ್ಮಾರ್ಟ್ ಟಚ್ ನೀಡಲು ಮುಂದಾದ ಸರ್ಕಾರ !

  • Apr 8
  • 1 min read

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಓಡಾಟ ಕಲ್ಪಿಸಿರುವ ಶಕ್ತಿ ಯೋಜನೆಗೆ ಸಂಬಂಧಪಟ್ಟಂತೆ ಮರು ಪರಿಶೀಲನೆ ನಡೆಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಗ್ಯಾರಂಟಿಗಳ ವಿಚಾರ ದೇಶದಾದ್ಯಾಂತ ಭಾರೀ ಚರ್ಚೆಗೆ ಕಾರಣವಾಗಿತ್ತು.ಹೀಗಾಗಿ ತಕ್ಷಣ ಅಲರ್ಟ್ ಆದ ಸರ್ಕಾರ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿತ್ತು.


ree











ಸಿಎಂಸಿದ್ದರಾಮಯ್ಯ,ಡಿಸಿಎಂ ಡಿಕೆ ಶಿವಕುಮಾರ್ ಹಾದಿಯಾಗಿ ಕಾಂಗ್ರೆಸ್ ನಾಯಕರು ಈ ಬಗ್ಗೆ ಸಾಲು ಸಾಲು ಸ್ಪಷ್ಟನೆಗಳನ್ನು ನೀಡಿ, ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲಿಸುವುದಿಲ್ಲ ಎಂದಿದ್ದರು.

ಆದ್ರೆ ಈಗ ಶಕ್ತಿ ಯೋಜನೆಯ ಬಗ್ಗೆ ಮತ್ತೊಂದು ಚರ್ಚೆ ಶುರುವಾಗಿದ್ದು, ಯೋಜನೆಯ ದುರುಪಯೋಗವಾಗುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಸರ್ಕಾರ ಚಿಂತನೆ ನಡೆಸಿದಂತೆ. ಹೀಗಾಗಿ ಶಕ್ತಿ ಯೋಜನೆ ಕಳ್ಳಾಟಕ್ಕೆ ಬ್ರೇಕ್ ಹಾಕಲು ಯೋಜನೆಗೆ ಸ್ಮಾರ್ಟ್ ಟಚ್ ನೀಡಲು ಸರ್ಕಾರ ಮುಂದಾಗಿದೆ. ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆಯಲ್ಲಿ ಟಿಕೆಟ್ ಕಳ್ಳಾಟ ಹೆಚ್ಚಾಗಿದ್ದು, ಇದನ್ನು ತಪ್ಪಿಸಲು ತಂತ್ರಜ್ಞಾನದ ಮೊರೆಹೋಗಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆ ಮೂಲಕ ಟಿಕೆಟ್ ಬದಲಿಗೆ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತಂದು ಬಸ್ ನಲ್ಲಿ ಉಚಿತ ಸಂಚಾರ ಮಾಡಲು ಅವಕಾಶ ಮಾಡಿಕೊಡಲು ಸರ್ಕಾರ ಪ್ಲಾನ್ ಮಾಡಿದೆ.

ಈ ಮೊದಲಿನಿಂದಲೂ ಮಹಿಳೆಯರ ಫ್ರೀ ಬಸ್ ಟಿಕೆಟ್ ನಲ್ಲಿ ಬಹಳಷ್ಟು ಗೋಲ್ ಮಾಲ್ ನಡೆಯುತ್ತಿದ್ದು, ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದವು. ಕೆಲವೊಮ್ಮೆ ಮಹಿಳಾ ಪ್ರಯಾಣಿಕರು ಇಲ್ಲದಿದ್ದರು ಕೂಡ ಕಂಡಕ್ಟರ್ ಹೆಚ್ಚಿನ ಟಿಕೆಟ್ ಲೆಕ್ಕ ನೀಡ್ತಿದ್ದಾರೆ ಅನ್ನೋ ಆರೋಪವಿದೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page