top of page

ವಿವಾದಕ್ಕೆ ಕಾರಣವಾಯಿತು ಚಾಂಪಿಯನ್ಸ್ ಟ್ರೋಫಿ ಪ್ರದಾನ ಸಮಾರಂಭದಲ್ಲಿ PCB ಗೈರು!

  • Mar 10
  • 1 min read

ಮಾಜಿ ವೇಗಿ ಶೋಯೆಬ್ ಅಖ್ತರ್ ಅವರು ಪಂದ್ಯಾವಳಿಯ ಫೈನಲ್ ಪಂದ್ಯದ ನಂತರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಿಸಿಬಿ ಅಧಿಕಾರಿಗಳ ಅನುಪಸ್ಥಿತಿಯನ್ನು ಪ್ರಶ್ನಿಸಿದ್ದಾರೆ.

ree

ಕರಾಚಿ: ದುಬೈನಲ್ಲಿ ಭಾನುವಾರ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್​ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಮ್​ ಇಂಡಿಯಾ ಭರ್ಜರಿ ಗೆಲುವು ದಾಖಲಿಸುವ ಮೂಲಕ ಟ್ರೋಫಿ ಎತ್ತಿಹಿಡಿದು ಇತಿಹಾಸ ಬರೆದಿದೆ.

ಈ ಮಧ್ಯೆ ಚಾಂಪಿಯನ್ಸ್ ಟ್ರೋಫಿ ಪ್ರದಾನ ಸಮಾರಂಭಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಯ ಅಧಿಕಾರಿಯನ್ನು ವೇದಿಕೆಗೆ ಆಹ್ವಾನಿಸಲು ಐಸಿಸಿ ವಿಫಲವಾಗಿದ್ದು, ವಿವಾದಕ್ಕೆ ಕಾರಣವಾಗಿದೆ.

ಪಿಸಿಬಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಪಂದ್ಯಾವಳಿಯ ನಿರ್ದೇಶಕ ಸುಮೈರ್ ಅಹ್ಮದ್ ಸ್ಥಳದಲ್ಲಿದ್ದರೂ ಅವರನ್ನು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನಿಸಲಾಗಿಲ್ಲ ಎಂದು ಮೂಲವೊಂದು ತಿಳಿಸಿದೆ.

"ಪೂರ್ವ ನಿಯೋಜಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಫೆಡರಲ್ ಆಂತರಿಕ ಸಚಿವರಾಗಿರುವ, ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರು ದುಬೈಗೆ ಹೋಗಿರಲಿಲ್ಲ. ಆದರೆ ಫೈನಲ್ ಪಂದ್ಯ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸಲು ಪಿಸಿಬಿ ಸಿಇಒ ಅವರನ್ನು ಕಳುಹಿಸಲಾಗಿತ್ತು" ಎಂದು ಮೂಲಗಳು ತಿಳಿಸಿವೆ.

ಕೆಲವು ಕಾರಣ ಅಥವಾ ತಪ್ಪು ತಿಳುವಳಿಕೆಯಿಂದಾಗಿ, ಪಿಸಿಬಿ ಅಧಿಕಾರಿಯನ್ನು ವೇದಿಕೆಗೆ ಕರೆಯಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ಐಸಿಸಿ ಅಧ್ಯಕ್ಷ ಜಯ್ ಶಾ, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಕ್ರಿಕೆಟ್ ಆಟಗಾರರಿಗೆ ಪದಕಗಳು, ಟ್ರೋಫಿಗಳು ಮತ್ತು ಜಾಕೆಟ್‌ಗಳನ್ನು ವಿತರಿಸಿದರು.

ಅಂತಿಮ ಸಮಾರಂಭವನ್ನು ಆಯೋಜಿಸುವ ಜವಾಬ್ದಾರಿ ಹೊಂದಿರುವ ಐಸಿಸಿಗೆ, ಪಿಸಿಬಿ ಸಿಇಒ ಜತೆ ಸರಿಯಾಗಿ ಸಂವಹನ ನಡೆಸಲು ಸಾಧ್ಯವಾಗದಿರಬಹುದು. ಹೀಗಾಗಿ ಅವರನ್ನು ಹೊರಗಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತನ್ನ ಸಿಇಒ ಅವರನ್ನು ವೇದಿಕೆಗೆ ಏಕೆ ಆಹ್ವಾನಿಸಲಿಲ್ಲ ಎಂಬುದರ ಕುರಿತು ಪಿಸಿಬಿ ಐಸಿಸಿಯೊಂದಿಗೆ ಚರ್ಚಿಸುವ ನಿರೀಕ್ಷೆಯಿದೆ.

ಏತನ್ಮಧ್ಯೆ, ಮಾಜಿ ವೇಗಿ ಶೋಯೆಬ್ ಅಖ್ತರ್ ಅವರು ಪಂದ್ಯಾವಳಿಯ ಫೈನಲ್ ಪಂದ್ಯದ ನಂತರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಿಸಿಬಿ ಅಧಿಕಾರಿಗಳ ಅನುಪಸ್ಥಿತಿಯನ್ನು ಪ್ರಶ್ನಿಸಿದ್ದಾರೆ.

"ಭಾರತ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದೆ. ಆದರೆ “ಫೈನಲ್ ಪಂದ್ಯದ ನಂತರ ನಡೆದ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಒಬ್ಬೇ ಒಬ್ಬ ಪಿಸಿಬಿ ಅಧಿಕಾರಿ ಇರಲಿಲ್ಲ. ಅದೊಂದು ವಿಶ್ವಮಟ್ಟದ ಕಾರ್ಯಕ್ರಮ. ಅಲ್ಲಿ ಪಿಸಿಬಿ ಅಧಿಕಾರಿಗಳು ಇರಬೇಕಿತ್ತು. ಆದರೂ ಅವರು ಅಲ್ಲಿ ಇರದೇ ಇದ್ದಿದ್ದು ಯಾಕೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ಪಿಸಿಬಿ ಇದಕ್ಕೆ ಸಮಜಾಯಿಷಿ ನೀಡಬೇಕು’’ ಎಂದು ಅಖ್ತರ್ ಬೇಸರ ವ್ಯಕ್ತಪಡಿಸಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page