top of page

ಕುರ್ಚಿ ಉಳಿಸಿಕೊಳ್ಳಲು ಯತ್ನ: ಜಾತಿಗಣತಿ ವರದಿ ವಿವಾದದಿಂದ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ..!

Updated: Apr 24

ಜಾತಿಗಣತಿ ವರದಿಯನ್ನು ಹೊರತರಲು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಒತ್ತಾಯವೇ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.


ree






ಮುಂಬೈ: ಭಾರತೀಯ ಷೇರುಮಾರುಕಟ್ಟೆ ಸತತ 5ನೇ ದಿನವೂ ಸಕಾರಾತ್ಮಕ ವಹಿವಾಟು ನಡೆಸಿದ್ದು, ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಭಾರಿ ಏರಿಕೆಯಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿವೆ.

ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ.0.98 ರಿಂದ ಶೇ.1.00ರಷ್ಟು ಏರಿಕೆ ಕಂಡಿದ್ದು, ಸೆನ್ಸೆಕ್ಸ್ 809.53 ಅಂಕಗಳ ಏರಿಕೆಯೊಂದಿಗೆ 81,765.86 ಅಂಕಗಳಿಗೆ ಏರಿಕೆಯಾಗಿದೆ.

ಅಂತೆಯೇ ನಿಫ್ಟಿ ಕೂಡ 240.95 ಅಂಕಗಳ ಅಲ್ಪ ಏರಿಕೆಯೊಂದಿಗೆ 24,708.40 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ. ಇಂದಿನ ವಹಿವಾಟಿನಲ್ಲಿ ನಿಫ್ಟಿ ತನ್ನ ಹಿಂದಿನ ಗರಿಷ್ಠ ವಹಿವಾಟು ಮಟ್ಟಕ್ಕೆ ತಲುಪಿದ್ದು, ಹೂಡಿಕೆದಾರರ ವಿಶ್ವಾಸ ಹೆಚ್ಚಿಸಿದೆ.


ಮಾರುಕಟ್ಟೆ ಮೇಲೆ ಆರ್ ಬಿಐ ಪಾತ್ರ

ಇದೇ ವಾರ ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ವಿತ್ತೀಯ ನೀತಿಗಳ ಪರಿಷ್ಕರಣೆ ಕುರಿತು ಸಭೆ ಸೇರುತ್ತಿದ್ದು, ಹೀಗಾಗಿ ಇದೀಗ ಎಲ್ಲ ಹೂಡಿಕೆದಾರರ ಚಿತ್ತ ಆರ್ ಬಿಐ ಮೇಲೆ ನೆಟ್ಟಿದೆ. ಹಾಲಿ ಮಾರುಕಟ್ಟೆ ಪರಿಸ್ಥಿತಿಗಳ ಅವಲೋಕನದ ಮೇರೆಗೆ ಆರ್ ಬಿಐ ಪ್ರಸ್ತುತ ಬಡ್ಡಿದರ ಪರಿಷ್ಕರಣೆಗೆ ಮುಂದಾಗುವುದಿಲ್ಲ ಎಂದು ಹೇಳಲಾಗಿದೆ.

ಅದಾಗ್ಯೂ ಇತರೆ ನೀತಿಗಳ ಕುರಿತು ಆರ್ ಬಿಐ ಕೈಗೊಳ್ಳಬಹುದಾದ ನಿರ್ಣಯಗಳ ಕುರಿತು ಹೂಡಿಕೆದಾರರು ಗಮನ ಕೇಂದ್ರೀಕರಿಸಿದ್ದಾರೆ. ಆರ್‌ಬಿಐನ ಹಣಕಾಸು ನೀತಿಯ ನಿರೀಕ್ಷೆಯಲ್ಲಿ ಭಾರತೀಯ ಮಾರುಕಟ್ಟೆ ಕಳೆದೆರಡು ದಿನಗಳಿಂದ ಧನಾತ್ಮಕ ಪ್ರತಿಕ್ರಿಯೆ ಪಡೆಯುತ್ತಿದ್ದು, ಇದಕ್ಕೆ ಎಫ್‌ಐಐಗಳ ಚೇತೋಹಾರಿ ವಹಿವಾಟು ಕೂಡ ಕಾರಣ ಎಂದು ಹೇಳಲಾಗಿದೆ.

ಇದಲ್ಲದೆ, ಹಣದುಬ್ಬರದ ಏರಿಕೆಯ ಹೊರತಾಗಿಯೂ ನವೆಂಬರ್ ನಲ್ಲಿ ಸೇವಾ PMI ಡೇಟಾದಲ್ಲಿನ ಸ್ಥಿರತೆ ಇದ್ದು, ಇದು ದೇಶದಲ್ಲಿನ ವ್ಯಾಪಾರ ಚಟುವಟಿಕೆಯಲ್ಲಿ ಸ್ಥಿರತೆಯನ್ನು ತೋರಿಸುತ್ತದೆ. ಇದೂ ಕೂಡ ಷೇರುಮಾರುಕಟ್ಟೆ ಸ್ಥಿರ ವಹಿವಾಟಿಗೆ ಕಾರಣ ಎಂದು ಹೇಳಲಾಗಿದೆ.

ಇನ್ನು ಇಂದಿನ ವಹಿವಾಟಿನಲ್ಲಿ ಐಟಿ ವಲಯದ ಷೇರುಗಳ ಮೌಲ್ಯ ಏರಿಕೆಯಾಗಿದ್ದು, ಪ್ರಮುಖವಾಗಿ ಟ್ರೆಂಟ್, ಇನ್ಫೋಸಿಸ್ ಮತ್ತು ಟಿಸಿಎಸ್ ಸಂಸ್ಥೆಗಳ ಷೇರುಗಳ ಮೌಲ್ಯ ಏರಿಕೆಯಾಗಿದೆ.

ಯಾರಿಗೆ ಲಾಭ? ಯಾರಿಗೆ ನಷ್ಟ?

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ 30 ಸಂಸ್ಥೆಗಳ ಪೈಕಿ 27 ಸಂಸ್ಥೆಗಳು ಲಾಭಾಂಶ ಕಂಡಿದ್ದು, 3 ಸಂಸ್ಥೆಗಳು ಮಾತ್ರ ನಷ್ಟ ಅನುಭವಿಸಿವೆ. ಇನ್ಫೋಸಿಸ್, ಐಸಿಐಸಿಐ ಬ್ಯಾಂಕ್, ಟಿಸಿಎಸ್ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಷೇರುಗಳು ಹೆಚ್ಚಿನ ಲಾಭಾಂಶ ಗಳಿಸಿದರೆ, ಎನ್ ಟಿಪಿಸಿ, ಏಷ್ಯನ್ ಪೇಂಟ್ಸ್ ಮತ್ತು ಇಂಡಸ್ ಇಂಡ್ ಬ್ಯಾಂಕ್ ಸಂಸ್ಥೆಯ ಷೇರುಗಳು ನಷ್ಟ ಅನುಭವಿಸಿವೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page