top of page

ಬೆಂಗಳೂರು: ರೌಡಿಶೀಟರ್ ಕೊಲೆ ಪ್ರಕರಣ; ಶಿವಮೊಗ್ಗದ 4 ಮಂದಿ ಸೇರಿದಂತೆ ಏಳು ಆರೋಪಿಗಳ ಬಂಧನ

  • Apr 8
  • 1 min read

ಬಂಧಿತರ ಪೈಕಿ ನಾಲ್ವರು ಶಿವಮೊಗ್ಗ ಹಾಗೂ ಮೂವರು ಆನೆಪಾಳ್ಯ, ಬೈಯಪ್ಪನಹಳ್ಳಿಯ ನಿವಾಸಿಗಳು. ಬಂಧಿತರ ಪೈಕಿ ಮೂವರು ರೌಡಿಶೀಟರ್‌ಗಳು ಆಗಿದ್ದಾರೆ.

ree

ಬೆಂಗಳೂರು: ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗರುಡಾ ಮಾಲ್ ಬಳಿ ರೌಡಿಶೀಟರ್ ಹೈದರ್ ಅಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಲಾಗಿದೆ. ಕೊಲೆಗೆ ಹಳೆಯ ದ್ವೇಷವೇ ಕಾರಣ ಎಂದು ಹೇಳಲಾಗುತ್ತಿದೆ.

ಬಂಧಿತರ ಪೈಕಿ ನಾಲ್ವರು ಶಿವಮೊಗ್ಗ ಹಾಗೂ ಮೂವರು ಆನೆಪಾಳ್ಯ, ಬೈಯಪ್ಪನಹಳ್ಳಿಯ ನಿವಾಸಿಗಳು. ಬಂಧಿತರ ಪೈಕಿ ಮೂವರು ರೌಡಿಶೀಟರ್‌ಗಳು ಆಗಿದ್ದಾರೆ. ನಯಾಜ್‌ ಪಾಷಾ, ನಾಜುದ್ದೀನ್‌, ರಿಜ್ವಾನ್‌, ಮತೀನ್‌, ಸದ್ದಾಂ, ದರ್ಶನ್‌ ಅಲಿಯಾಸ್ ಶಿವದರ್ಶನ್‌, ರಾಹಿದ್, ವಸೀಂ ಬಂಧಿತ ಆರೋಪಿಗಳು. ನಯಾಜ್‌ ಪಾಷಾ ವಿರುದ್ಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ 8 ಪ್ರಕರಣಗಳು ದಾಖಲಾಗಿವೆ.

ಪ್ರಾಥಮಿಕ ತನಿಖೆಯ ಪ್ರಕಾರ, ಪ್ರಕರಣದ ಪ್ರಮುಖ ಆರೋಪಿ ಪಾಷಾ ತನ್ನ ಗ್ಯಾಂಗ್‌ನೊಂದಿಗೆ ಅಲಿಯನ್ನು ಕೊಲ್ಲಲು ಸಂಚು ರೂಪಿಸಿದ್ದ. ಪಾಷಾ ಮತ್ತು ಅಲಿ ನಡುವೆ ದೀರ್ಘಕಾಲದ ದ್ವೇಷವಿತ್ತು, ಇಬ್ಬರೂ ವರ್ಷಗಳಿಂದ ಪರಸ್ಪರ ಕೊಲ್ಲಲು ಹಲವು ಬಾರಿ ಪ್ರಯತ್ನಿಸಿದ್ದರು. ಈ ಹಿಂದೆ ಎದುರಾಳಿ ಗ್ಯಾಂಗ್‌ಗಳಿಂದ ಇಬ್ಬರ ಮೇಲೂ ಎರಡು ಬಾರಿ ದಾಳಿ ನಡೆದಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಜಿಮ್‌ ಮಾಲೀಕನೂ ಆಗಿರುವ ಸ್ನೇಹಿತನ ಜತೆಗೆ ಶುಕ್ರವಾರ ಮಧ್ಯರಾತ್ರಿವರೆಗೂ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಬ್‌ವೊಂದರಲ್ಲಿ ಹೈದರ್‌ ಅಲಿ ಪಾರ್ಟಿ ನಡೆಸಿದ್ದ. ಹೊರಗೆ ಬರುವುದನ್ನೇ ಆರೋಪಿಗಳು ಕಾದಿದ್ದರು. ಹೊರಗೆ ಬರುತ್ತಿದ್ದಂತೆಯೇ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಹೋಗಿ ಫುಟ್‌ಬಾಲ್‌ ಮೈದಾನ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ, ಕೊಲೆ ಮಾಡಿ ಪರಾರಿ ಆಗಿದ್ದರು. ಅದೇ ವೇಳೆ ಕಾರಿನಲ್ಲಿ ಬಂದಿದ್ದ ಇನ್ನೂ ಕೆಲವು ಆರೋಪಿಗಳು ಮೈದಾನ ಬಳಿ ಕಾದಿದ್ದರು. , ಪ್ರಕರಣದ ತನಿಖೆಗಾಗಿ ಕಬ್ಬನ್ ಪಾರ್ಕ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಅಡಿಯಲ್ಲಿ ವಿಶೇಷ ತಂಡವನ್ನು ರಚಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page