top of page

Ranji Trophy: ಶತಕ ಗಳಿಸಿದರೂ ರೋಹಿತ್‌ಗಾಗಿ ಮುಂಬೈ ತಂಡದಲ್ಲಿ ಸ್ಥಾನ ಬಿಟ್ಟುಕೊಟ್ಟ 17 ವರ್ಷದ ಬ್ಯಾಟರ್ ಹೇಳಿದ್ದೇನು?

  • Jan 25
  • 1 min read

ಜಮ್ಮು ಮತ್ತು ಕಾಶ್ಮೀರ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ರೋಹಿತ್ ಮತ್ತೊಮ್ಮೆ ವೈಫಲ್ಯ ಕಂಡಿದ್ದು, ಮುಂಬೈ ತಂಡದಲ್ಲಿ ಮ್ಹಾತ್ರೆ ಅವರನ್ನು ಬೆಂಚ್‌ನಲ್ಲಿ ಕೂರಿಸಿದ್ದಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ

ree

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಸೋಲಿನ ಬಳಿಕ ಟೀಂ ಇಂಡಿಯಾದ ಸ್ಟಾರ್ ಆಟಗಾರರು ಬಿಸಿಸಿಐ ಕಟ್ಟಪ್ಪಣೆ ಮೇರೆಗೆ ರಣಜಿ ಟ್ರೋಫಿ ಪಂದ್ಯವನ್ನು ಆಡುತ್ತಿದ್ದು, ನಾಯಕ ರೋಹಿತ್ ಶರ್ಮಾ ಕೂಡ ಮುಂಬೈ ತಂಡದಲ್ಲಿ ಆಡುತ್ತಿದ್ದಾರೆ. ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಲ್ವಾಲ್ ಅವರಂತಹ ಭಾರತೀಯ ಕ್ರಿಕೆಟ್ ತಾರೆಗಳು ರಣಜಿ ಟ್ರೋಫಿಗೆ ಮರಳಿದ್ದರಿಂದ ಕಳೆದ ಪಂದ್ಯದಲ್ಲಿ ಶತಕ ಗಳಿಸಿದ್ದ 17 ವರ್ಷದ ಆಯುಷ್ ಮ್ಹಾತ್ರೆ ಪ್ಲೇಯಿಂಗ್ ಇಲೆವೆನ್‌ನಿಂದ ಬೆಂಚ್‌ನಲ್ಲಿ ಕುಳಿತುಕೊಳ್ಳುವಂತಾಯಿತು.

ಮ್ಹಾತ್ರೆ ತಾವು ಆಡಿರುವ 6 ಪಂದ್ಯಗಳಲ್ಲಿ 40.09 ಸರಾಸರಿಯಲ್ಲಿ 441 ರನ್ ಗಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ರೋಹಿತ್ ಮತ್ತೊಮ್ಮೆ ವೈಫಲ್ಯ ಕಂಡಿದ್ದು, ಮುಂಬೈ ತಂಡದಲ್ಲಿ ಮ್ಹಾತ್ರೆ ಅವರನ್ನು ಬೆಂಚ್‌ನಲ್ಲಿ ಕೂರಿಸಿದ್ದಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ. ಆದರೆ, ಯುವ ಬ್ಯಾಟರ್ ಮ್ಹಾತ್ರೆ ಕೂಡ ರೋಹಿತ್ ಬಗ್ಗೆ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

'ನಾನು ಆರಾಧಿಸುವ ವ್ಯಕ್ತಿಯೊಂದಿಗೆ ಡ್ರೆಸ್ಸಿಂಗ್ ರೂಂ ಅನ್ನು ಹಂಚಿಕೊಳ್ಳುತ್ತಿರುವುದು ನಂಬಲು ಅಸಾಧ್ಯವಾದಂತ ಕ್ಷಣವಾಗಿದೆ. ದೂರದರ್ಶನದಲ್ಲಿ ಅವರು ಬ್ಯಾಟ್ ಮಾಡುವುದನ್ನು ನೋಡುತ್ತಾ ಬೆಳೆದು ನಾನು ಕ್ರಿಕೆಟ್ ಆಡಲು ಪ್ರಾರಂಭಿಸಿದೆ. ಮುಂದೆ ಕಲಿಯುವುದು ಬಹಳಷ್ಟು ಇದೆ' ಎಂದು ಹಿಟ್‌ಮ್ಯಾನ್‌ನೊಂದಿಗೆ ತೆಗೆಸಿಕೊಂಡಿರುವ ಚಿತ್ರವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಮ್ಹಾತ್ರೆ ಬರೆದಿದ್ದಾರೆ.

ಮುಂಬೈನ ಕೊನೆಯ ರಣಜಿ ಟ್ರೋಫಿ ಪಂದ್ಯದಲ್ಲಿ, ಸರ್ವಿಸಸ್ ವಿರುದ್ಧ ಮ್ಹಾತ್ರೆ 116 ರನ್ ಗಳಿಸಿದ್ದರು. ಅವರು ವೈಟ್-ಬಾಲ್ ಕ್ರಿಕೆಟ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡುತ್ತಿದ್ದು, ತಮ್ಮ ಲಿಸ್ಟ್ ಎ ಚೊಚ್ಚಲ ಪಂದ್ಯದಲ್ಲಿ 65.42 ಸರಾಸರಿಯಲ್ಲಿ 458 ರನ್ ಗಳಿಸಿದ್ದಾರೆ.


Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page