top of page

RG Kar rape-murder case: ಶಿಕ್ಷೆ ಪ್ರಮಾಣ ಪ್ರಕಟವಾಗುತ್ತಿದ್ದಂತೆಯೇ, ಪ್ರಶ್ನೆಗಳಿಗೆ ಉತ್ತರಿಸಲಾಗದೇ ಮನೆಯ ಒಳಗಿನಿಂದ ಲಾಕ್ ಮಾಡಿಕೊಂಡ ಅಪರಾಧಿಯ ತಾಯಿ!

  • Apr 8
  • 1 min read

ಶಿಕ್ಷೆಯ ಪ್ರಮಾಣದ ಬಗ್ಗೆ ವರದಿಗಾರರ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಮನೆಯ ಬಾಗಿಲನ್ನು ಒಳಗಡೆಯಿಂದ ಬಂದ್ ಮಾಡಿಕೊಂಡಿದ್ದಾರೆ.

ree

ನವದೆಹಲಿ: ಆರ್ ಜಿ ಕರ್ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಅಪರಾಧಿಗೆ ಶಿಕ್ಷೆಯ ಪ್ರಮಾಣ ಪ್ರಕಟಿಸುತ್ತಿದ್ದಂತೆಯೇ ಅಪರಾಧಿಯ ತಾಯಿ ಮನೆಯ ಒಳಗಿನಿಂದ ಲಾಕ್ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಶಿಕ್ಷೆಯ ಪ್ರಮಾಣದ ಬಗ್ಗೆ ವರದಿಗಾರರ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಮನೆಯ ಬಾಗಿಲನ್ನು ಒಳಗಡೆಯಿಂದ ಬಂದ್ ಮಾಡಿಕೊಂಡಿದ್ದಾರೆ.

ಇದಕ್ಕೂ ಮುನ್ನ, ಕೋಲ್ಕತ್ತಾದಲ್ಲಿರುವ ತಮ್ಮ ಸಾಧಾರಣ ನಿವಾಸದ ಮುಂದೆ ಮಾಧ್ಯಮದ ಸದಸ್ಯರು ಜಮಾಯಿಸಲು ಪ್ರಾರಂಭಿಸಿದಾಗ, 75 ವರ್ಷದ ಮಹಿಳೆ ಎಲ್ಲದರ ಬಗ್ಗೆಯೂ ನಾಚಿಕೆಪಡುತ್ತಾಳೆ ಮತ್ತು ತಮ್ಮನ್ನು ಒಂಟಿಯಾಗಿ ಬಿಡುವಂತೆ ಹೇಳಿದರು.


ಇದಕ್ಕೂ ಮುನ್ನ, ಕೋಲ್ಕತ್ತಾದಲ್ಲಿರುವ ತಮ್ಮ ನಿವಾಸದ ಮುಂದೆ ಮಾಧ್ಯಮದ ಸದಸ್ಯರು ಜಮಾಯಿಸಲು ಪ್ರಾರಂಭಿಸಿದಾಗ, 75 ವರ್ಷದ ಮಹಿಳೆ ತಮ್ಮನ್ನು ಒಂಟಿಯಾಗಿ ಬಿಡುವಂತೆ ಹೇಳಿದರು.

ರಾಯ್ ಅವರ ತಾಯಿ ಮಾಲತಿ ಭಾನುವಾರ, ಮೂವರು ಹೆಣ್ಣುಮಕ್ಕಳ ತಾಯಿಯಾಗಿ, ಮೃತ ವೈದ್ಯರ ಪೋಷಕರ ನೋವನ್ನು ಅನುಭವಿಸಬಲ್ಲೆ ಮತ್ತು ಮಗನಿಗೆ ಯಾವುದೇ ಶಿಕ್ಷೆ ವಿಧಿಸಿದರೂ ಅದನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದರು.


"ನ್ಯಾಯಾಲಯ ಆತನನ್ನು ಗಲ್ಲಿಗೇರಿಸಲು ನಿರ್ಧರಿಸಿದರೆ, ಆತನ ಅಪರಾಧ ಕಾನೂನಿನ ದೃಷ್ಟಿಯಲ್ಲಿ ಸಾಬೀತಾಗಿರುವುದರಿಂದ ನನ್ನ ಯಾವುದೇ ಆಕ್ಷೇಪಣೆ ಇಲ್ಲ. ನಾನು ಒಬ್ಬಂಟಿಯಾಗಿ ಅಳುತ್ತೇನೆ ಆದರೆ ಅದನ್ನು ವಿಧಿಯ ವಿಪರ್ಯಾಸವೆಂದು, ವಿಧಿಯ ಇಚ್ಛಾನುಸಾರವಾಗಿ ಸ್ವೀಕರಿಸುತ್ತೇನೆ" ಎಂದು ಅಪರಾಧಿಯ ತಾಯಿ ಹೇಳಿದ್ದರು.

ಸೋಮವಾರ, ನ್ಯಾಯಾಧೀಶರು ರಾಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೆಲವೇ ನಿಮಿಷಗಳ ನಂತರ, ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದ ಅಪರಾಧಿಯ ತಾಯಿ, "ನಾನು ಏನನ್ನೂ ಹೇಳಲು ಬಯಸುವುದಿಲ್ಲ. ನನಗೆ ಎಲ್ಲದಕ್ಕೂ ನಾಚಿಕೆಯಾಗುತ್ತಿದೆ. ನೀವು ದಯವಿಟ್ಟು ಹೊರಟು ಹೋಗಿ." ಎಂದಷ್ಟೇ ಹೇಳಿದ್ದಾರೆ.

コメント


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page