top of page

Sam Konstas vs Virat Kohli: ಭುಜಕ್ಕೆ ಢಿಕ್ಕಿ, ಮೈದಾನದಲ್ಲೇ ಸಂಘರ್ಷ, ಅಮಾನತಿನಿಂದ ಕೊಹ್ಲಿ ಪಾರು, ಆದರೂ ದಂಡದ ಶಿಕ್ಷೆ !

  • Apr 8
  • 1 min read

ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿರುವ ಆಸ್ಟ್ರೇಲಿಯಾದ ಯುವ ಆರಂಭಿಕ ಬ್ಯಾಟರ್ ಸ್ಯಾಮ್ ಕೊನ್‌ಸ್ಟಸ್ ಅವರಿಗೆ ಭುಜದಿಂದ ಡಿಕ್ಕಿ ಹೊಡೆದ ಕಾರಣಕ್ಕೆ ವಿರಾಟ್ ಕೊಹ್ಲಿಗೆ ಐಸಿಸಿ ದಂಡ ಹೇರಿದೆ.

ree

ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ 4ನೇ ಪಂದ್ಯದಲ್ಲೂ ಆಟಗಾರರ ನಡುವಿನ ಕದನ ಮುಂದುವರೆದಿದ್ದು, ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ವಿರಾಟ್ ಕೊಹ್ಲಿಗೆ ದಂಡ ಹೇರಲಾಗಿದೆ.

ಹೌದು..ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿರುವ ಆಸ್ಟ್ರೇಲಿಯಾದ ಯುವ ಆರಂಭಿಕ ಬ್ಯಾಟರ್ ಸ್ಯಾಮ್ ಕೊನ್‌ಸ್ಟಸ್ ಅವರಿಗೆ ಭುಜದಿಂದ ಡಿಕ್ಕಿ ಹೊಡೆದ ಕಾರಣಕ್ಕೆ ವಿರಾಟ್ ಕೊಹ್ಲಿಗೆ ಐಸಿಸಿ ದಂಡ ಹೇರಿದೆ.

ಐಸಿಸಿ ನಿಯಮ ಉಲ್ಲಂಘನೆ ಮಾಡಿರುವ ವಿರಾಟ್ ಕೊಹ್ಲಿ ಅವರಿಗೆ ಪಂದ್ಯ ಶುಲ್ಕದ ಶೇ 20ರಷ್ಟು ದಂಡ ವಿಧಿಸಲಾಗಿದ್ದು, ಹಾಗೆಯೇ ಅನುಚಿತ ವರ್ತನೆಗಾಗಿ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ ಎಂದು ತಿಳಿದುಬಂದಿದೆ.


ಅಮಾನತಿನಿಂದ ಪಾರಾದ ಕೊಹ್ಲಿ

ಇನ್ನು ಈ ಪಂದ್ಯದಲ್ಲಿ ಕೊಹ್ಲಿ ಅಮಾನತು ಶಿಕ್ಷೆಯಿಂದ ಪಾರಾಗಿದ್ದು, ಒಂದು ಡಿಮೆರಿಟ್ ಪಾಯಿಂಟ್ ಅಂಕ ನೀಡಿದ್ದರಿಂದ ಕೊಹ್ಲಿ ಅಮಾನತು ಶಿಕ್ಷೆಯಿಂದ ಪಾರಾಗಿದ್ದಾರೆ. ನಾಲ್ಕು ಡಿಮೆರಿಟ್ ಪಾಯಿಂಟ್‌ಗೆ ಒಳಗಾದರೆ ಕನಿಷ್ಠ ಒಂದು ಪಂದ್ಯದ ನಿಷೇಧ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ.


ಯುವ ಆಟಗಾರನ ವಿರುದ್ಧ ಕೊಹ್ಲಿ ಅನುಚಿತ ವರ್ತನೆ

ಇನಿಂಗ್ಸ್‌ನ 10ನೇ ಓವರ್‌ ವೇಳೆ ಪಿಚ್‌ನಲ್ಲಿ ಎದುರುಬದುರಾಗಿ ನಡೆದು ಹೋಗುತ್ತಿದ್ದಾಗ ಕೊಹ್ಲಿ ಮತ್ತು ಕೋನ್‌ಸ್ಟಾಸ್‌ ಅವರು ಭುಜಕ್ಕೆ ಭುಜ ತಾಗಿಸಿದ್ದರು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಪಂದ್ಯದ ಓವರ್‌ಗಳ ಮಧ್ಯೆ ಏಕಾಏಕಿ ಕೊನ್‌ಸ್ಟಸ್ ಬಳಿ ತೆರಳಿದ್ದ ಕೊಹ್ಲಿ ಭುಜದಿಂದ ಡಿಕ್ಕಿ ಹೊಡೆದಿದ್ದರು. ಬಳಿಕ ಇಬ್ಬರ ನಡುವೆ ಕಾವೇರಿದ ವಾತಾವರಣ ಸೃಷ್ಟಿಯಾಗಿತ್ತು.

ಕೊಹ್ಲಿ ವರ್ತನೆಯನ್ನು ಮಾಜಿ ನಾಯಕರು ಸೇರಿದಂತೆ ಕ್ರಿಕೆಟ್ ತಜ್ಞರು ಟೀಕೆ ಮಾಡಿದ್ದರು. ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್, ಇಂಗ್ಲೆಂಡ್‌ನ ಮಾಜಿ ಕಪ್ತಾನ ಮೈಕಲ್ ವಾನ್, ಕೊಹ್ಲಿ ಮೇಲೆ ಶಿಸ್ತು ಕ್ರಮಕ್ಕೆ ಬಯಸಿದ್ದರು.

ಈ ಬೆಳವಣಿಗೆ ಬೆನ್ನಲ್ಲೇ ಐಸಿಸಿ ವಿರಾಟ್ ಕೊಹ್ಲಿಗೆ ದಂಡ ಹೇರಿದೆ.

תגובות


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page