top of page

ಭಾರತದ ಚುನಾವಣೆಗೆ ಅಮೆರಿಕದ ಹಣ: 'ಕಿಕ್ ಬ್ಯಾಕ್ ಸ್ಕೀಮ್ ' ಎಂದ ಡೊನಾಲ್ಡ್ ಟ್ರಂಪ್! ತನಿಖೆಗೆ ಬಿಜೆಪಿ ಒತ್ತಾಯ

  • Apr 8
  • 1 min read
ree

ವಾಷಿಂಗ್ಟನ್: ಭಾರತದ ಚುನಾವಣೆಗೆ 21 ಮಿಲಿಯನ್ ಡಾಲರ್ ಅಮೆರಿಕ ಸರ್ಕಾರದ ನೆರವನ್ನು ಮತ್ತೆ ಪ್ರಶ್ನಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅದನ್ನು ಕಿಕ್ ಬ್ಯಾಕ್ ಯೋಜನೆ ಎಂದು ಕರೆದಿದ್ದಾರೆ. ಬಾಂಗ್ಲಾದೇಶದಲ್ಲಿ ರಾಜಕೀಯ ಸ್ಥಿರತೆ ಬಲವರ್ಧನೆಗಾಗಿ ರೂ.21 ಮಿಲಿಯನ್ ಡಾಲರ್ ಮತ್ತು ನೇಪಾಳಕ್ಕೆ ಜೀವ ವೈವಿಧ್ಯತೆಗಾಗಿ ರೂ.19 ಮಿಲಿಯನ್ ಡಾಲರ್ ನೆರವಿನ ಬಗ್ಗೆಯೂ ಮಾತನಾಡಿದ್ದಾರೆ.

ರಿಪಬ್ಲಿಕನ್ ಗವರ್ನರ್ಸ್ ಅಸೋಸಿಯೇಷನ್ ​​(RGA) ಸಭೆಯನ್ನುದ್ದೇಶಿಸಿ ಮಾತನಾಡಿದ ಟ್ರಂಪ್, ಭಾರತದಲ್ಲಿ ಚುನಾವಣೆಗಾಗಿ ರೂ. 21 ಮಿಲಿಯನ್ ಡಾಲರ್ ಕಳುಹಿಸಲಾಗಿದೆ. ಭಾರತದಲ್ಲಿನ ಚುನಾವಣೆ ಬಗ್ಗೆ ನಾವೇಕೆ ತಲೆಕೆಡಿಸಿಕೊಳ್ಳಬೇಕು. ನಮ್ಮಲ್ಲಿಯೇ ಸಾಕಷ್ಟು ಸಮಸ್ಯೆಯಿದೆ. ನಮಗೆ ನಮ್ಮದೇ ಮತದಾನ ಬೇಕು ಅಲ್ಲವೇ? ಇಷ್ಟೆಲ್ಲಾ ಹಣ ಭಾರತಕ್ಕೆ ಹೋಗಿದೆ ಎಂಬುದನ್ನು ನೀವು ಊಹಿಸಬಲ್ಲಿರಾ? ಅದನ್ನು ಪಡೆದಾಗ ಅವರು ಯಾವ ರೀತಿ ಯೋಚಿಸುತ್ತಾರೆ ಎಂಬುದು ನನಗೆ ಆಶ್ಚರ್ಯವನ್ನುಂಟು ಮಾಡಿತು. ಈಗ ಇದು ಕಿಕ್‌ಬ್ಯಾಕ್ ಯೋಜನೆಯಾಗಿದೆ. ಅದನ್ನು ಅವರು ಪಡೆದು ಖರ್ಚು ಮಾಡುವುದಿಲ್ಲ. ಅದನ್ನು ಜನರಿಗೆ ಕಳುಹಿಸಿದ್ದಾರೆ ಎಂದರು.

ಅನೇಕ ಸಂದರ್ಭಗಳಲ್ಲಿ ಈ ಪ್ರಕರಣ ಕುರಿತು ಹೇಳಿದ್ದೇನೆ. ಎಲ್ಲಾ ವೇಳೆಯಲ್ಲಿಯೂ ನಾವು ಏನು ಮಾತನಾಡುತ್ತಿದ್ದೇವೆ ಎಂಬುದರ ಬಗ್ಗೆ ಗೊತ್ತಿರುವುದಿಲ್ಲ. ಅಂದರೆ ಭಾರತದಲ್ಲಿ ಏನಾಗುತ್ತಿದೆ ಎಂದು ಯಾರಿಗೂ ತಿಳಿದಿಲ್ಲ. ಏಕೆಂದರೆ ಅಲ್ಲಿ ಕಿಕ್‌ಬ್ಯಾಕ್ ಪಡೆಯಲಾಗಿದೆ ಎಂದು ಆರೋಪಿಸಿದ ಟ್ರಂಪ್, ಬಾಂಗ್ಲಾದೇಶದಲ್ಲಿ ರಾಜಕೀಯ ಸ್ಥಿರತೆ ಬಲವರ್ಧನೆಗಾಗಿ 29 ಮಿಲಿಯನ್ ಕೊಡುತ್ತಾರೆ ಅಂದ್ರೆ ಏನರ್ಥ? ಎಂದು ಕಿಡಿಕಾರಿದರು.ನೇಪಾಳಕ್ಕೆ ಜೀವ ವೈವಿಧ್ಯತೆಗಾಗಿ $19 ಮಿಲಿಯನ್, ಏಷ್ಯಾದಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸಲು $47 ಮಿಲಿಯನ್ ನೀಡಲಾಗಿದೆ. ನಮ್ಮಲ್ಲಿಯೇ ಸಾಕಷ್ಟು ಸಮಸ್ಯೆಯಿದೆ. ಇವೆಲ್ಲವನ್ನೂ ಅಂತ್ಯಗೊಳಿಸಬೇಕಾಗಿದೆ. ಈ ನೆರವು ನೀಡಿದ್ದವರನ್ನು ನಾವು ಮನೆಗೆ ಕಳುಹಿಸಿದ್ದೇವೆ. ಇನ್ನೂ ಅನೇಕ ಭಯಾನಕ ವಿಚಾರಗಳಿದ್ದು, ವಾಸ್ತವವಾಗಿ ಅಸಹ್ಯಕರವಾಗಿವೆ. ಆದರೆ ಅವೆಲ್ಲಾವನ್ನೂ ಹೇಳಲು ಈಗ ಆಗದು. ಆದರೆ ಈ ಎಲ್ಲಾ ಸಮಸ್ಯೆಗಳಿಗೆ ಈಗ ಅಂತ್ಯ ಹಾಡಿದ್ದೇವೆ ಎಂದರು.ನೇಪಾಳಕ್ಕೆ ಜೀವ ವೈವಿಧ್ಯತೆಗಾಗಿ $19 ಮಿಲಿಯನ್, ಏಷ್ಯಾದಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸಲು $47 ಮಿಲಿಯನ್ ನೀಡಲಾಗಿದೆ. ನಮ್ಮಲ್ಲಿಯೇ ಸಾಕಷ್ಟು ಸಮಸ್ಯೆಯಿದೆ. ಇವೆಲ್ಲವನ್ನೂ ಅಂತ್ಯಗೊಳಿಸಬೇಕಾಗಿದೆ. ಈ ನೆರವು ನೀಡಿದ್ದವರನ್ನು ನಾವು ಮನೆಗೆ ಕಳುಹಿಸಿದ್ದೇವೆ. ಇನ್ನೂ ಅನೇಕ ಭಯಾನಕ ವಿಚಾರಗಳಿದ್ದು, ವಾಸ್ತವವಾಗಿ ಅಸಹ್ಯಕರವಾಗಿವೆ. ಆದರೆ ಅವೆಲ್ಲಾವನ್ನೂ ಹೇಳಲು ಈಗ ಆಗದು. ಆದರೆ ಈ ಎಲ್ಲಾ ಸಮಸ್ಯೆಗಳಿಗೆ ಈಗ ಅಂತ್ಯ ಹಾಡಿದ್ದೇವೆ ಎಂದರು.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page