top of page

ಆಭರಣ ಕೊಳ್ಳುವವರಿಗೆ ಇಂದೇ ಒಳ್ಳೆ ದಿನ; ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ; ₹ 189 ಇಳಿಕೆ ಕಂಡ ಬೆಳ್ಳಿ!

  • Apr 8
  • 1 min read

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನ 7,940 ರೂಪಾಯಿಗೆ ಮಾರಾಟವಾಗುತ್ತಿದೆ.

ree

ನವದೆಹಲಿ: ದಿನದಿಂದ ದಿನಕ್ಕೆ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದು, ಚಿನ್ನಾಭರಣ ಖರೀದಿಸಿಬೇಕೆನ್ನುವ ಹಲವರ ಕನಸು ಕನಸಾಗಿಯೇ ಉಳಿದಿದೆ. ಈ ಬೆನ್ನಲ್ಲೇ ಇದೀಗ ಚಿನ್ನ ಖರೀದಿಗೆ ಕಾಲ ಕೂಡಿಬಂದಿದೆ. ಆಭರಣ ತಯಾರಕರು ಮತ್ತು ಚಿಲ್ಲರೆ ಮಾರಾಟಗಾರರಿಂದ ಬೇಡಿಕೆ ಕುಸಿತ ಕಂಡ ಪರಿಣಾಮವಾಗಿ ಇಲ್ಲಿನ ಚಿನಿವಾರಪೇಟೆಯಲ್ಲಿ ಬುಧವಾರ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ.

ಸದ್ಯ ಚಿನ್ನದ ಬೆಲೆ 10 ಗ್ರಾಂಗೆ 345 ರೂ.ಗಳಷ್ಟು ಕಡಿಮೆಯಾಗಿದ್ದು, 85,178 ರೂ.ಗೆ ಮಾರಾಟವಾಗಿದೆ.

ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX), ಬುಧವಾರ ಚಿನ್ನದ ಬೆಳೆಯಲ್ಲಿ ಇಳಿಕೆ ಕಂಡುಬಂದಿದೆ. 10 ಗ್ರಾಂ ಚಿನ್ನಕ್ಕೆ 345 ರೂ. ಅಥವಾ ಶೇ 0.4 ರಷ್ಟು ಕಡಿಮೆಯಾಗಿದ್ದು, 85,178 ರೂ.ಗೆ ಮಾರಾಟವಾಗಿದೆ. ಈ ಅವಧಿಯಲ್ಲಿ ಒಟ್ಟು 16,401 ಕೆಜಿ ಚಿನ್ನ ಮಾರಾಟವಾಗಿದೆ.

ದುರ್ಬಲ ಜಾಗತಿಕ ಸೂಚ್ಯಂಕಗಳು ಚಿನ್ನದ ಬೆಲೆ ಕುಸಿತಕ್ಕೆ ಕಾರಣವೆಂದು ವಿಶ್ಲೇಷಕರು ಹೇಳಿದ್ದಾರೆ. ಜಾಗತಿಕವಾಗಿ, ನ್ಯೂಯಾರ್ಕ್‌ನಲ್ಲಿ ಪ್ರತಿ ಔನ್ಸ್‌ಗೆ ಚಿನ್ನದ ದರ ಶೇ 0.18 ರಷ್ಟು ಕಡಿಮೆಯಾಗಿ 2,892.76 ಡಾಲರ್‌ಗೆ ತಲುಪಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ?

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನ 7,940 ರೂಪಾಯಿಗೆ ಮಾರಾಟವಾಗುತ್ತಿದೆ. 24 ಕ್ಯಾರೆಟ್‌ನ ಅಪರಂಜಿ ಚಿನ್ನದ ಬೆಲೆ 8,667 ರೂಪಾಯಿ ಇದೆ. 18 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನಕ್ಕೆ 6,497 ರೂಪಾಯಿ ಇದೆ.


ಬೆಳ್ಳಿ ಬೆಲೆಯಲ್ಲೂ ಇಳಿಕೆ

ಬುಧವಾರ ಪ್ರತಿ ಕಿಲೋಗ್ರಾಂ ಬೆಳ್ಳಿಗೆ 189 ರೂ. ಕಡಿಮೆಯಾಗಿದ್ದು, 94,379 ರೂ.ಗೆ ಮಾರಾಟವಾಗಿದೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page