top of page

ಕೆನಡಾಕ್ಕೆ ಶಿಫ್ಟ್ ಆಗಬೇಡ ಎಂದಿದ್ದಕ್ಕೆ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ!

  • Apr 8
  • 1 min read

ಆಗ್ನೇಯ ದೆಹಲಿಯ ಬದರ್‌ಪುರ ಪ್ರದೇಶದ ಮೊಲಾರ್‌ಬಂದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.


ree









ನವದೆಹಲಿ: ಕೆಲಸಕ್ಕಾಗಿ ಕೆನಡಾಕ್ಕೆ ತೆರಳಲು ಅವಕಾಶ ನೀಡದ 50 ವರ್ಷದ ಹೆತ್ತ ತಾಯಿಯನ್ನು ಆಕೆಯ ಮಗನೇ ಚಾಕುವಿನಿಂದ ಇರಿದು ಕೊಂದಿದ್ದಾನೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ಆಗ್ನೇಯ ದೆಹಲಿಯ ಬದರ್‌ಪುರ ಪ್ರದೇಶದ ಮೊಲಾರ್‌ಬಂದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ನವೆಂಬರ್ 6 ರಂದು ಸಂಜೆ ತನ್ನ ತಾಯಿಯನ್ನು ಕೊಂದ ನಂತರ, ಆರೋಪಿ ಕೃಷ್ಣಕಾಂತ್(31) ತನ್ನ ತಂದೆ ಸುರ್ಜೀತ್ ಸಿಂಗ್(52)ಗೆ ಕರೆ ಮಾಡಿ ಮನೆಗೆ ಬರುವಂತೆ ಹೇಳಿದ್ದಾನೆ.


ಸಿಂಗ್ ಮನೆಗೆ ಬಂದಾಗ ಮಗ ಕೃಷ್ಣಕಾಂತ್ ತನ್ನನ್ನು "ಕ್ಷಮಿಸಿ"ವಂತೆ ಹೇಳಿದ್ದಾನೆ ಮತ್ತು ಮೇಲಕ್ಕೆ ಕರೆದುಕೊಂಡು ಹೋಗಿ ತಾನು ಮಾಡಿದ ಕೃತ್ಯವನ್ನು ತೋರಿಸಿದ್ದಾನೆ ಎಂದು ಪೊಲೀಸ್ ಉಪ ಆಯುಕ್ತ(ಆಗ್ನೇಯ) ರವಿಕುಮಾರ್ ಸಿಂಗ್ ತಿಳಿಸಿದ್ದಾರೆ.

ಸಿಂಗ್ ಮನೆಯ ಮೊದಲ ಮಹಡಿಗೆ ಹೋಗಿ ನೋಡಿದಾಗ, ತನ್ನ ಹೆಂಡತಿ ಗೀತಾ ದೇಹದ ಮೇಲೆ ಅನೇಕ ಇರಿತದ ಗಾಯಗಳೊಂದಿಗೆ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡಿದ್ದಾರೆ. ಈ ವೇಳೆ ಆರೋಪಿ ಮಗ ಓಡಿಹೋಗುವಲ್ಲಿ ಯಶಸ್ವಿಯಾದನು ಎಂದು ಅವರು ಹೇಳಿದ್ದಾರೆ.

ಸಿಂಗ್ ತಕ್ಷಣವೇ ಪತ್ನಿ ಗೀತಾಳನ್ನು ಅಪೋಲೋ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಂಗ್ ಅವರಿಗೆ ಇಬ್ಬರು ಪುತ್ರರಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ. ಅವರ ಕಿರಿಯ ಮಗ ಸಾಹಿಲ್ ಭೋಲಿ(27) ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಕೃಷ್ಣಕಾಂತ್ ನಿರುದ್ಯೋಗಿಯಾಗಿದ್ದು, ಮಾದಕ ವ್ಯಸನಿಯಾಗಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page