top of page

ಕ್ರೀಡೆಯಲ್ಲೂ ಭಾರತ ವಿರೋಧಿ ಮನಸ್ಥಿತಿ: ಫೈನಲ್ ಪಂದ್ಯದ ವೇಳೆ ಚೀನಾ ಧ್ವಜ ಹಿಡಿದು ಪಾಕ್ ಹಾಕಿ ತಂಡ ಪ್ರೋತ್ಸಾಹ!

  • Apr 8
  • 1 min read

ಫೈನಲ್ ಪಂದ್ಯದವನ್ನು ವಿಕ್ಷೀಸಲು ಕ್ರೀಡಾಂಗಣದಲ್ಲಿ ಕುಳಿತಿದ್ದ ಪಾಕಿಸ್ತಾನ ಹಾಕಿ ತಂಡವು ಚೀನಾದ ಧ್ವಜವನ್ನು ಕೈಯಲ್ಲಿ ಹಿಡಿದಿತ್ತು. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.


ree









ಒಂದು ಕಾಲದಲ್ಲಿ ಪಾಕಿಸ್ತಾನ ಭಾರತದ ಭಾಗವೇ ಆಗಿತ್ತು. ಸ್ವತಂತ್ರ ಸಂಗ್ರಾಮದಲ್ಲಿ ಒಟ್ಟಿಗೆ ಬ್ರಿಟಿಷರನ್ನು ಎದುರಿಸಿದ್ದರು. ಆದರೆ ದೇಶ ವಿಭಜನೆಯ ನಂತರ ಶತ್ರುಗಳಂತಾಗಿವೆ. ಆದರೆ ಕ್ರೀಡೆ ವಿಚಾರದಲ್ಲಿ ಉಭಯ ದೇಶಗಳು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿದ ಘಟನೆಗಳು ಈ ಹಿಂದೆ ನಡೆದಿದ್ದವು. ಆದರೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಭಾರತ ಮತ್ತು ಚೀನಾ ನಡುವೆ ನಡೆಯುತ್ತಿತ್ತು. ಈ ವೇಳೆ ಇಂತಹದೊಂದು ಘಟನೆ ಕಂಡುಬಂದಿದೆ.

ಇದನ್ನು ನೋಡಿದ ಎಲ್ಲರಿಗೂ ಆಶ್ಚರ್ಯ ಉಂಟಾಗಿತ್ತು. ವಾಸ್ತವವಾಗಿ, ಫೈನಲ್ ಪಂದ್ಯದವನ್ನು ವಿಕ್ಷೀಸಲು ಕ್ರೀಡಾಂಗಣದಲ್ಲಿ ಕುಳಿತಿದ್ದ ಪಾಕಿಸ್ತಾನ ಹಾಕಿ ತಂಡವು ಚೀನಾದ ಧ್ವಜವನ್ನು ಕೈಯಲ್ಲಿ ಹಿಡಿದಿತ್ತು. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಇದರಿಂದ ಭಾರತೀಯ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.


ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ತಂಡ ಶೂಟೌಟ್‌ನಲ್ಲಿ 2-0 ಗೋಲುಗಳಿಂದ ಚೀನಾ ವಿರುದ್ಧ ಸೋಲು ಅನುಭವಿಸಬೇಕಾಯಿತು. ಅದರ ಹೊರತಾಗಿಯೂ, ಅವರು ಭಾರತದ ವಿರುದ್ಧ ಚೀನಾವನ್ನು ಬೆಂಬಲಿಸಿದ್ದಾರೆ. ಫೈನಲ್ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ದಕ್ಷಿಣ ಕೊರಿಯಾದೊಂದಿಗೆ ಕಂಚಿನ ಪದಕದ ಪಂದ್ಯವನ್ನು ಆಡಿತ್ತು. ಇದರಲ್ಲಿ ಅವರು ಕೊರಿಯಾವನ್ನು 5-2 ರಿಂದ ಸೋಲಿಸಿತ್ತು.

ಭಾರತ-ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಜಗಳ

ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ ನಡೆದಿತ್ತು. ಇದರಲ್ಲಿ ಭಾರತ 2-1 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿತು. ಈ ಪಂದ್ಯದಲ್ಲಿ ಉಭಯ ತಂಡಗಳ ನಡುವೆ ಜಗಳ ನಡೆದಿದೆ. ಪಾಕಿಸ್ತಾನದ ಆಟಗಾರ ಅಶ್ರಫ್ ಭಾರತದ ಜುಗರಾಜ್ ಸಿಂಗ್ ಅವರನ್ನು ಡಿ ಏರಿಯಾದಲ್ಲಿ ತಳ್ಳಿದರು. ಇದರಿಂದ ಜುಗರಾಜ್ ಬಿದ್ದು ನೋವಿನಿಂದ ನರಳುತ್ತಿದ್ದರು. ಇದಾದ ನಂತರ ಭಾರತ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಪಾಕ್ ಆಟಗಾರ ಅಶ್ರಫ್ ಎದುರು ಬಂದರು. ಪಾಕಿಸ್ತಾನದ ನಾಯಕ ರಾಣಾ ವಹೀದ್ ಜಗಳವನ್ನು ತಡೆಯಲು ಬಯಸಿದ್ದರು. ಆದರೆ ಇದಾದ ಬಳಿಕ ಜರ್ಮನ್‌ಪ್ರೀತ್ ಸಿಂಗ್ ಪಾಕ್ ಆಟಗಾರರ ಜತೆ ಕಣಕ್ಕಿಳಿದಿದ್ದರು. ಈ ಘರ್ಷಣೆಯಲ್ಲಿ ಅಂಪೈರ್ ನೆರವಿಗೆ ಬರಬೇಕಾಯಿತು.


Comentarios


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page