top of page

ಕಿರಣ್ ರಿಜಿಜು ವಿರುದ್ಧ ಟಿಎಂಸಿ ಹಕ್ಕುಚ್ಯುತಿ ನೋಟಿಸ್, 60 ವಿಪಕ್ಷ ಸಂಸದರಿಂದ ಸಹಿ

  • Apr 8
  • 1 min read

ಸಾಗರಿಕಾ ಘೋಷ್ ಅವರ ನೋಟಿಸ್‌ಗೆ ಪ್ರತಿಪಕ್ಷಗಳ 60 ನಾಯಕರು ಸಹಿ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ree

ನವದೆಹಲಿ: ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರ ವಿರುದ್ಧ ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯೆ ಸಾಗರಿಕಾ ಘೋಷ್ ಅವರು ಗುರುವಾರ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ.

ಸಾಗರಿಕಾ ಘೋಷ್ ಅವರ ನೋಟಿಸ್‌ಗೆ ಪ್ರತಿಪಕ್ಷಗಳ 60 ನಾಯಕರು ಸಹಿ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

"ನಿನ್ನೆ ಸದನದಲ್ಲಿ ಪ್ರತಿಪಕ್ಷಗಳನ್ನು ಉದ್ದೇಶಿಸಿ ಮಾತನಾಡಿದ ಕಿರಣ್ ರಿಜಿಜು, ನೀವೆಲ್ಲರೂ ಈ ಸದನದಲ್ಲಿರಲು ಯೋಗ್ಯರಲ್ಲ ಎಂದು ಹೇಳಿದ್ದರು.


ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸಂಸತ್ತಿನ ಕಲಾಪ ಸುಗಮವಾಗಿ ನಡೆಯಲು ತಮ್ಮ ಕೈಲಾದಷ್ಟು ಪ್ರಯತ್ನಿಸುವ ಬದಲು ಪ್ರತಿಪಕ್ಷಗಳನ್ನು ಪದೇ ಪದೇ ಅವಮಾನಿಸಿದ್ದಾರೆ’’ ಎಂದು ಘೋಷ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

"ರಿಜಿಜು ಅವರು ವಿರೋಧ ಪಕ್ಷದ ಸದಸ್ಯರನ್ನು ಅವಮಾನಿಸಿದ್ದಾರೆ ಮತ್ತು ಸಂಸತ್ತಿನ ಒಳಗೆ ಮತ್ತು ಹೊರಗೆ ಅಸಂಸದೀಯ ಪದಗಳನ್ನು ಬಳಸಿ ನಿಂದಿಸಿದ್ದಾರೆ. ಇದು ಅವರು ಹೊಂದಿರುವ ಉನ್ನತ ಹುದ್ದೆಗೆ ಗೌರವ ತರುವುದಿಲ್ಲ ಮತ್ತು ಅವರ ಸ್ಥಾನದ ಸಂಪೂರ್ಣ ದುರುಪಯೋಗವಾಗಿದೆ" ಎಂದು ರಾಜ್ಯಸಭೆಯಲ್ಲಿ TMC ಯ ಉಪನಾಯಕಿ ಹೇಳಿದ್ದಾರೆ.

ಕಿರಣ್ ರಿಜಿಜು ಅವರು ತಮ್ಮ ಕಚೇರಿಯನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಮತ್ತು ಅಸಂಸದೀಯ ಭಾಷೆ ಬಳಸಿದ್ದಕ್ಕಾಗಿ ನಾನು ಅವರ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ನೋಟಿಸ್ ನೀಡಿದ್ದೇನೆ ಎಂದು ಘೋಷ್ ತಿಳಿಸಿದ್ದಾರೆ.

ಈ ಪ್ರಸ್ತಾವನೆಗೆ ಎಲ್ಲಾ ವಿರೋಧ ಪಕ್ಷಗಳ ಹಿರಿಯ ನಾಯಕರು ಸಹಿ ಹಾಕಿದ್ದಾರೆ ಎಂದು ಅವರು ಹೇಳಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page