top of page

ಕೇರಳ: ಇದು ದೇಶದ ಮೊದಲ ಸಂಪೂರ್ಣ ಡಿಜಿಟಲ್ ಸಾಕ್ಷರತೆ ಸಾಧಿಸಿದ ಗ್ರಾಮ ಪಂಚಾಯಿತಿ!

ಕೇರಳದ ತಿರುವನಂತಪುರಂ ಜಿಲ್ಲೆಯ ಪುಲ್ಲಂಪಾರಾ ದೇಶದ ಮೊದಲ ಸಂಪೂರ್ಣ ಡಿಜಿಟಲ್ ಸಾಕ್ಷರತೆ ಸಾಧಿಸಿದ ಮೊದಲ ಗ್ರಾಮ ಪಂಚಾಯಿತಿಯಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬುಧವಾರ ಅಧಿಕೃತವಾಗಿ ಈ ವಿಷಯವನ್ನು ಪ್ರಕಟಿಸಿದ್ದಾರೆ.


ree








ತಿರುವನಂತಪುರಂ: ಕೇರಳದ ತಿರುವನಂತಪುರಂ ಜಿಲ್ಲೆಯ ಪುಲ್ಲಂಪಾರಾ ದೇಶದ ಮೊದಲ ಸಂಪೂರ್ಣ ಡಿಜಿಟಲ್ ಸಾಕ್ಷರತೆ ಸಾಧಿಸಿದ ಮೊದಲ ಗ್ರಾಮ ಪಂಚಾಯಿತಿಯಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬುಧವಾರ ಅಧಿಕೃತವಾಗಿ ಈ ವಿಷಯವನ್ನು ಪ್ರಕಟಿಸಿದ್ದಾರೆ. ಸರ್ಕಾರಿ ಸೇವೆಗಳನ್ನು ಪಡೆಯಲು ಸಾರ್ವಜನಿಕರಿಗೆ ಡಿಜಿಟಲ್ ಸಾಕ್ಷರತೆ ಪ್ರಮುಖವಾಗಿದೆ. ಜಾಗತಿಕ ಜ್ಞಾನದ ನೆಟ್ ವರ್ಕ್ ನೊಂದಿಗೆ ಸಂಪರ್ಕ ಕಲ್ಪಿಸಲಿದೆ ಎಂದು ಪಿಣರಾಯಿ ಹೇಳಿದ್ದಾರೆ. 

ಕೇರಳವನ್ನು ಜ್ಞಾನದ ಸೊಸೈಟಿಯನ್ನಾಗಿ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ. ಆದ್ದರಿಂದ ಜನರು ಜಗತ್ತಿನ ಯಾವುದೇ ಭಾಗದಿಂದ ಮಾಹಿತಿ ಪಡೆದು ಅದರ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ. ಆನ್ ಲೈನ್ ನಲ್ಲಿ 800ಕ್ಕೂ ಇತರ ಸರ್ಕಾರಿ ಸೇವೆಗಳು  ದೊರೆಯುವಂತೆ ಸರ್ಕಾರ ಮಾಡಿದ್ದು, ಡಿಜಿಟಲ್ ಸಾಕ್ಷರತೆ ಜನರು ಇದನ್ನು ಬಹುತೇಕವಾಗಿ ಬಳಸಿಕೊಳ್ಳಬಹುದಾಗಿದೆ. ಸರ್ಕಾರ ವಿವಿಧ ಹಂತಗಳಲ್ಲಿ ಡಿಜಿಟಲ್ ಮತ್ತು ಆನ್ ಲೈನ್ ಪ್ಲಾಟ್ ಪಾರ್ಮ್ ಮೂಲಕ ಸಂಪರ್ಕ ಒದಗಿಸಲು ಪ್ರಯತ್ನಿಸುತ್ತಿದೆ ಎಂದು ಅವರು ತಿಳಿಸಿದರು. 

ಸಾಮಾನ್ಯ ದರದಲ್ಲಿ ಜನರಿಗೆ ಇಂಟರ್ ನೆಟ್ ಸೇವೆಗಳನ್ನು ಒದಗಿಸಲಾಗುತ್ತಿದೆ. ಸಾರ್ವಜನಿಕರು ಇಂಟರ್ ನೆಟ್ ಮತ್ತಿತರ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲು ಸಿದ್ಧರಾಗಬೇಕು ಎಂದು ಅವರು ಕರೆ ನೀಡಿದರು, ಪುಲ್ಲಂಪಾರಾ ಗ್ರಾಮ ಪಂಚಾಯಿತಿಯಲ್ಲಿನ ದುರ್ಬಲ ವರ್ಗದ ಜನರಿಗೆ ಡಿಜಿಟಲ್ ಶಿಕ್ಷಣ ಒದಗಿಸಲು 2021ರ ಆಗಸ್ಟ್ 15 ರಂದು ಡಿಜಿ ಪುಲ್ಲಂಪಾರಾ ಯೋಜನೆಯನ್ನು ಆರಂಭಿಸಲಾಗಿತ್ತು. ಐದು ಎಂಜಿನಿಯರಿಂಗ್ ಕಾಲೇಜುಗಳ ಸ್ವಯಂ ಸೇವಕರು ಮತ್ತಿತರ ಸ್ವಯಂ ಸಹಾಯ ಗುಂಪುಗಳ ಸಹಯೋಗದಲ್ಲಿ ಈ ಯೋಜನೆಯನ್ನು ನಡೆಸಲಾಗುತ್ತಿದೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page