top of page

ಕರ್ನಾಟಕದಲ್ಲಿ ಪುಷ್ಪಾ 2 ಓಟಕ್ಕೆ ಲಗಾಮು: ಮಧ್ಯರಾತ್ರಿ ಶೋಗಳು ದಿಢೀರ್ ರದ್ದು!

  • Apr 8
  • 1 min read

ತೆಲುಗಿನ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ 2 ಚಿತ್ರ ನಾಳೆ ವಿಶ್ವದಾದ್ಯಂತ 12,500ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಇನ್ನು ಅಭಿಮಾನಿಗಳಿಗಾಗಿ ದಿನಾಂಕ 5ನೇ ತಾರೀಕಿನ ಮುಂಜಾನೆ 3 ಗಂಟೆಗೆ ಶೋಗಳನ್ನು ಆಯೋಜಿಸಲಾಗುತ್ತಿತ್ತು. ಆದರೆ ಇದಕ್ಕೆ ಇದೀಗ ಬ್ರೇಕ್ ಬಿದ್ದಿದೆ.

ree









ತೆಲುಗಿನ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ 2 ಚಿತ್ರ ನಾಳೆ ವಿಶ್ವದಾದ್ಯಂತ 12,500ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಇನ್ನು ಅಭಿಮಾನಿಗಳಿಗಾಗಿ ದಿನಾಂಕ 5ನೇ ತಾರೀಕಿನ ಮುಂಜಾನೆ 3 ಗಂಟೆಗೆ ಶೋಗಳನ್ನು ಆಯೋಜಿಸಲಾಗುತ್ತಿತ್ತು. ಆದರೆ ಇದಕ್ಕೆ ಇದೀಗ ಬ್ರೇಕ್ ಬಿದ್ದಿದೆ.


ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು ರಾಜ್ಯದಲ್ಲಿ ಚಲನಚಿತ್ರ ಪ್ರದರ್ಶನದ ನಿಯಮಗಳ ಪ್ರಕಾರ, ಕರ್ನಾಟಕ ರಾಜ್ಯದ ಚಿತ್ರಮಂದಿರಗಳಲ್ಲಿ ಮುಂಜಾನೆ 6 ಗಂಟೆ ಒಳಗೆ ಯಾವುದೇ ಚಿತ್ರಮಂದಿರಗಳಲ್ಲಿ ಚಿತ್ರಗಳನ್ನು ಪ್ರದರ್ಶಿಸುವಂತಿಲ್ಲ ಎಂಬ ಸರ್ಕಾರದ ಆದೇಶವಿದ್ದರೂ ಸಹ ಕರ್ನಾಟಕದ ಕೆಲ ಚಿತ್ರಮಂದಿರಗಳಲ್ಲಿ ಅವದಿಗೂ ಮುನ್ನ ಚಿತ್ರ ಪ್ರದರ್ಶನಗೊಳ್ಳುತ್ತಿರುವುದು ಕಾನೂನು ಬಾಹಿರವಾಗಿರುತ್ತದೆ.

ದಯಮಾಡಿ ಯಾವ ಚಿತ್ರಮಂದಿರಗಳು ಸರ್ಕಾರದ ಆದೇಶವನ್ನು ಉಲ್ಲಂಘಿಸುತ್ತಿದೆಯೋ ಅಂತಹ ಚಿತ್ರಮಂದಿರಗಳ ವಿರುದ್ದ ಹಾಗೆಯೇ ಚಿತ್ರಮಂದಿರಗಳಲ್ಲಿ ಟಿಕೆಟ್ ದರವು ಮನಸೋ ಇಚ್ಛೆ (500 ರೂ. 1000 ರೂ. 1500 ರೂ.) ಏರಿಸಿ ಸಾರ್ವಜನಿಕರಿಂದ ಪಡೆಯುತ್ತಿರುವಂತಹ ಚಿತ್ರಮಂದಿರಗಳ ವಿರುದ್ಧ ತಕ್ಷಣ ಕಾನೂನು ರೀತಿಯ ಕ್ರಮಕೈಗೊಂಡು ಮುಂಬರುವ ಪ್ರಾದೇಶಿಕ ಭಾಷೆಯ ಚಿತ್ರಗಳಿಗೂ ಅನುಕೂಲ ಮಾಡಿ ಕನ್ನಡ ಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿ ಎಂದು ಕೆಎಫ್ ಪಿಎ ಅಧ್ಯಕ್ಷ ಉಮೇಶ್ ಬಣಕಾರ್ ನೇತೃತ್ವದ ತಂಡ ಮನವಿ ಮಾಡಿತ್ತು.


ಈ ಮನವಿ ಬೆನ್ನಲ್ಲೆ ಇದೀಗ ಚಿತ್ರಮಂದಿರಗಳು ಮಧ್ಯರಾತ್ರಿ 3 ಗಂಟೆಗೆ 4 ಗಂಟೆಗೆ ಇದ್ದ ಶೋಗಳನ್ನು ರದ್ದು ಮಾಡಿದ್ದು 6.30ರ ಶೋಗಳು ಪ್ರದರ್ಶನಗೊಳ್ಳಲಿವೆ. ಇನ್ನು ಪಿವಿಆರ್, ಐನಾಕ್ಸ್ ಹೊರತು ಪಡಿಸಿ ಸಿಂಗಲ್ ಸ್ಕ್ರೀನ್ ಗಳಲ್ಲಿ 200 ರೂಪಾಯಿ ಟಿಕೆಟ್ ದರ ಇದ್ದರೆ, ಪಿವಿಆರ್ ಐನಾಕ್ಸ್ ನಲ್ಲಿ 300 ರೂಪಾಯಿಯಿಂದ 1,500 ರೂಪಾಯಿವರೆಗೂ ಟಿಕೆಟ್ ದರವಿದೆ.

KFPA ಮನವಿ ಬೆನ್ನಲ್ಲೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಕಾನೂನು ಬಾಹಿರವಾಗಿ 5-12-24 ರ ಮುಂಜಾನೆ 3 ಗಂಟೆಗೆ ಶೋಗಳನ್ನು ಆಯೋಜಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಅಲ್ಲದೆ ಚಿತ್ರಮಂದಿರಗಳ ಪರವಾನಗಿಯನ್ನು ರದ್ದುಪಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.


Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page