top of page

ಗುಂಪುಗಾರಿಕೆಯಲ್ಲಿ ನನಗೆ ನಂಬಿಕೆ ಇಲ್ಲ, ಬಿಜೆಪಿಯೊಳಗಿನ ಆಂತರಿಕ ಕಚ್ಚಾಟ ದುರದೃಷ್ಟಕರ: ಬಸವರಾಜ ಬೊಮ್ಮಾಯಿ

  • Apr 8
  • 1 min read

ಪಕ್ಷದ ಹೈಕಮಾಂಡ್ ಶೀಘ್ರದಲ್ಲೇ ಕರ್ನಾಟಕ ಬಿಜೆಪಿಯಲ್ಲಿನ ಬೆಳವಣಿಗೆಗಳತ್ತ ಗಮನ ಹರಿಸಿ, ಎಲ್ಲ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಿ, ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಆಶಾವಾದ ವ್ಯಕ್ತಪಡಿಸಿದರು.

ree

ಬೆಂಗಳೂರು: ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟದ ಬಗ್ಗೆ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷದಲ್ಲಿನ ಬಣಗಳು ತಾಳ್ಮೆಯಿಂದ ವರ್ತಿಸಿ, ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಚರ್ಚೆಯ ಮೂಲಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಬೇಕು ಎಂದರು.

ಪಕ್ಷದ ಹೈಕಮಾಂಡ್ ಶೀಘ್ರದಲ್ಲೇ ಕರ್ನಾಟಕ ಬಿಜೆಪಿಯಲ್ಲಿನ ಬೆಳವಣಿಗೆಗಳತ್ತ ಗಮನ ಹರಿಸಿ, ಎಲ್ಲ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಿ, ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಆಶಾವಾದ ವ್ಯಕ್ತಪಡಿಸಿದರು.

'ಕಾಂಗ್ರೆಸ್ ಪಕ್ಷದ ದುರಾಡಳಿತದಿಂದಾಗಿ ರಾಜ್ಯದಲ್ಲಿ ಜನರು, ಅದರಲ್ಲೂ ವಿಶೇಷವಾಗಿ ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸಾಚಾರ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇದರ ವಿರುದ್ಧ ಸಮರ ಸಾರಬೇಕಿದ್ದ ವಿರೋಧ ಪಕ್ಷ ಬಿಜೆಪಿ ಆಂತರಿಕ ಕಚ್ಚಾಟದಲ್ಲಿ ತೊಡಗಿರುವುದು ದುರದೃಷ್ಟಕರ' ಎಂದು ಬೊಮ್ಮಾಯಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನನ್ನಾಗಿ ಬಿವೈ ವಿಜಯೇಂದ್ರ ಅವರನ್ನು 2023ರ ನವೆಂಬರ್‌ನಲ್ಲಿ ನೇಮಿಸಲಾಯಿತು. ವಿಜಯೇಂದ್ರ ಅವರನ್ನು ಬದಲಿಸಬೇಕೆಂದು ಬಿಜೆಪಿ ನಾಯಕರ ಗುಂಪೊಂದು ಸಾರ್ವಜನಿಕವಾಗಿಯೇ ಒತ್ತಾಯಿಸುತ್ತಿದ್ದು, ಪರ - ವಿರೋಧದ ಬಣಗಳಾಗಿ ಬದಲಾಗಿವೆ. ವಿಜಯೇಂದ್ರ ಅವರಿಗೆ ಪಕ್ಷದೊಳಗಿನ ಅಸಮಾಧಾನವನ್ನು ತಣಿಸಿ, ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ.


ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪಕ್ಷವು ರಾಷ್ಟ್ರದಾದ್ಯಂತ ದಕ್ಷ ಆಡಳಿತವನ್ನು ನೀಡುತ್ತಿದೆ. ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು, ಗುಂಪುಗಾರಿಕೆಯಲ್ಲಿ ನನಗೆ ನಂಬಿಕೆ ಇಲ್ಲ. ಹೀಗಾಗಿ, ನಾನು ಯಾವುದೇ ಒಂದು ಗುಂಪಿನ ಸಭೆ ಕರೆಯುವ ಪ್ರಶ್ನೆ ಉದ್ಭವಿಸುವುದಿಲ್ಲ. ಎಲ್ಲರನ್ನು ಒಟ್ಟಿಗೆ ಸೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿರುವ ಹಲವು ನಾಯಕರಲ್ಲಿ ನಾನು ಒಬ್ಬ ಎಂದು ಅವರು ಹೇಳಿದರು.

ಸದ್ಯ ದೆಹಲಿಯಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಮತ್ತು ಇತರ ನಾಯಕರು ಮಂಗಳವಾರ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂಬ ವರದಿಗಳ ನಂತರ ಈ ಸ್ಪಷ್ಟನೆ ಬಂದಿದೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಇತರ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಎರಡೂ ಕಡೆಯ ಸದಸ್ಯರು ತಾಳ್ಮೆಯಿಂದ ವರ್ತಿಸಬೇಕು ಮತ್ತು ಚರ್ಚೆಯ ಮೂಲಕ ತಮ್ಮ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳಬೇಕು. ಇದು ಸಾಧ್ಯವಾಗದಿದ್ದರೆ, ಅವರೆಲ್ಲರೂ ಕೇಂದ್ರ ನಾಯಕತ್ವದ ನಿರ್ಧಾರಕ್ಕೆ ಬದ್ಧರಾಗಿರಬೇಕು' ಎಂದು ಹೇಳಿದರು.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page