top of page

ಜಗತ್ತಿನ 3ನೇ Top Goal scorer, Football ದಂತಕತೆ Sunil Chhetri ನಿವೃತ್ತಿ

  • Apr 4
  • 1 min read

ಫುಟ್ಬಾಲ್ ಕ್ರೀಡಾಪಟು ಸುನಿಲ್ ಛೇಟ್ರಿ (Sunil Chhetri) ನಿವೃತ್ತಿ (Retirement) ಘೋಷಿಸಿದ್ದಾರೆ.


ree









ನವದೆಹಲಿ: ಫುಟ್ಬಾಲ್ ಕ್ರೀಡಾಪಟು ಸುನಿಲ್ ಛೇಟ್ರಿ (Sunil Chhetri) ನಿವೃತ್ತಿ (Retirement) ಘೋಷಿಸಿದ್ದಾರೆ. ಫಿಫಾ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯ (FIFA World Cup qualifying match) ಜೂ.06 ರಂದು ಕೋಲ್ಕತ್ತಾದಲ್ಲಿ ಕುವೈಟ್ ವಿರುದ್ಧ ನಡೆಯಲಿದ್ದು, ಈ ಪಂದ್ಯ ಸುನಿಲ್ ಛೇತ್ರಿಗೆ ಭಾರತದ ಪರ ಅಂತಾರಾಷ್ಟ್ರೀಯ ಫುಟ್ಬಾಲ್ ನಲ್ಲಿ ಕೊನೆಯ ಪಂದ್ಯವಾಗಲಿದೆ. 2 ದಶಕಗಳ ಕಾಲ ಅಂತಾರಾಷ್ಟ್ರೀಯ ಫುಟ್ಬಾಲ್ ಕ್ರೀಡೆಯಲ್ಲಿ ಛೇತ್ರಿ ಭಾರತದ ತಂಡವನ್ನು ಪ್ರತಿನಿಧಿಸಿ ತಮ್ಮ ಛಾಪು ಮೂಡಿಸಿದ್ದರು.


ಭಾರತ ಫುಟ್ಬಾಲ್ ತಂಡದ ನಾಯಕತ್ವವನ್ನು ದೀರ್ಘಾವಧಿ ಹೊಂದಿದ್ದ ಸುನಿಲ್ ಛೇತ್ರಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ನಿವೃತ್ತಿಯ ಬಗ್ಗೆ ಘೋಷಿಸಿದ್ದಾರೆ. ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಭಾರತ Group A ನಲ್ಲಿ ನಾಲ್ಕು ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ.

ಕಳೆದ 19 ವರ್ಷಗಳಲ್ಲಿ ನಾನು ನೆನಪಿಸಿಕೊಳ್ಳುವ ಭಾವನೆ ಕರ್ತವ್ಯ, ಒತ್ತಡ ಮತ್ತು ಅಪಾರ ಸಂತೋಷದ ಉತ್ತಮ ಸಂಯೋಜನೆಯಾಗಿದೆ, ”ಎಂದು 39 ವರ್ಷದ ಛೆಟ್ರಿ ನಿವೃತ್ತಿಯ ನಿರ್ಧಾರವನ್ನು ಪ್ರಕಟಿಸುವಾಗ ಹೇಳಿದ್ದಾರೆ.

ಲಿಯೋನೆಲ್ ಮೆಸ್ಸಿ ದಾಖಲೆ ಮುರಿದ ಸುನಿಲ್ ಚೆಟ್ರಿ!

"ನಾನು ರಾಷ್ಟ್ರೀಯ ತಂಡದೊಂದಿಗೆ ನಡೆಸುವ ಪ್ರತಿಯೊಂದು ತರಬೇತಿಯನ್ನು ಆನಂದಿಸಲು ಬಯಸುತ್ತೇನೆ. ಕುವೈತ್ ವಿರುದ್ಧದ ಪಂದ್ಯವು ಒತ್ತಡವನ್ನು ಬಯಸುತ್ತದೆ, ಮುಂದಿನ ಸುತ್ತಿಗೆ ಅರ್ಹತೆ ಪಡೆಯಲು ನಮಗೆ ಮೂರು ಅಂಕಗಳ ಅಗತ್ಯವಿದೆ. ಇದು ನಮಗೆ ಬಹಳ ಮುಖ್ಯವಾಗಿದೆ" ಎಂದು ನಾಯಕ ಸುನಿಲ್ ಛೇತ್ರಿ ಹೇಳಿದ್ದಾರೆ.

"ಆದರೆ ವಿಚಿತ್ರ ರೀತಿ ಎಂಬಂತೆ, ನಾನು ಒತ್ತಡವನ್ನು ಅನುಭವಿಸುವುದಿಲ್ಲ ಏಕೆಂದರೆ ರಾಷ್ಟ್ರೀಯ ತಂಡದೊಂದಿಗೆ ಈ 15-20 ದಿನಗಳು ಮತ್ತು ಕುವೈತ್ ವಿರುದ್ಧದ ಪಂದ್ಯ ನನಗೆ ಅಂತಾರಾಷ್ಟ್ರೀಯ ಫುಟ್ಬಾಲ್ ನಲ್ಲಿ ಕೊನೆಯ ಪಂದ್ಯವಾಗಿರಲಿದೆ" ಎಂದು ಅವರು ಹೇಳಿದರು.

ಭಾರತ ಫುಟ್‌ಬಾಲ್‌ ಟೀಂ ಕ್ಯಾಪ್ಟನ್ ಜನ್ಮದಿನ: ಹೆಮ್ಮೆ ಮೂಡಿಸುವ ಸುನಿಲ್ ಚೆಟ್ರಿ ಜೀವನದ 7 ಸಂಗತಿಗಳು

ಛೇಟ್ರಿ ಮಾರ್ಚ್‌ನಲ್ಲಿ ಭಾರತ ತಂಡದ ಪರ ತಮ್ಮ 150 ನೇ ಪಂದ್ಯವನ್ನು ಆಡಿದ್ದರು ಮತ್ತು ಗುವಾಹಟಿಯಲ್ಲಿ ಅಫ್ಘಾನಿಸ್ತಾನದ ವಿರುದ್ಧದ ಸಂದರ್ಭದಲ್ಲಿ ಗೋಲು ಗಳಿಸಿದ್ದರು. ಆದರೆ ಆ ಪಂದ್ಯದಲ್ಲಿ ಭಾರತ 1-2 ಅಂತರದಲ್ಲಿ ಸೋಲನುಭವಿಸಿತ್ತು.

2005ರಲ್ಲಿ ಪದಾರ್ಪಣೆ ಮಾಡಿದ್ದ ಛೆಟ್ರಿ ದೇಶಕ್ಕಾಗಿ 94 ಗೋಲು ಗಳಿಸಿದ್ದಾರೆ. ಅವರು ಭಾರತದ ಸಾರ್ವಕಾಲಿಕ ಟಾಪ್ ಸ್ಕೋರರ್ ಮತ್ತು ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರನಾಗಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ ಮತ್ತು ಲಿಯೋನೆಲ್ ಮೆಸ್ಸಿಯ ನಂತರ ಸಕ್ರಿಯ ಆಟಗಾರರಲ್ಲಿ ಗೋಲು ಗಳಿಸಿದವರ ಪಟ್ಟಿಯಲ್ಲಿ ಛೇಟ್ರಿ ಮೂರನೇ ಸ್ಥಾನದಲ್ಲಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page