top of page

ನ್ಯೂಜಿಲೆಂಡ್ ಟೆಸ್ಟ್ ಸೋಲು: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮಾತ್ರವಲ್ಲ, ಗಂಭೀರ್ ಗೂ ಗಂಡಾಂತರ

  • Apr 8
  • 1 min read

ಮುಂಬೈ: ನ್ಯೂಜಿಲೆಂಡ್ ವಿರುದ್ಧ ಐತಿಹಾಸಿಕ ಟೆಸ್ಟ್ ಸರಣಿ ಸೋಲಿನ ಬಳಿಕ ಟೀಂ ಇಂಡಿಯಾದಲ್ಲಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮಾತ್ರವಲ್ಲ, ಗೌತಮ್ ಗಂಭೀರ್ ಗೂ ಗಂಡಾಂತರ ಕಾದಿದೆ.


ree












ಟೆಸ್ಟ್ ಸರಣಿ ಸೋಲಿನ ಬಳಿಕ ಗಂಭೀರ್ ಕೋಚ್ ಸ್ಥಾನದಿಂದ ಕಿತ್ತೊಗೆಯಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ.

ಸದ್ಯಕ್ಕೆ ಇದು ಗಂಭೀರ್ ಕೋಚ್ ಆದ ಆರಂಭಿಕ ಅವಧಿಯಾಗಿದ್ದರಿಂದ ಅವರನ್ನು ವಜಾಗೊಳಿಸುವ ಸಾಧ್ಯತೆಯಂತೂ ಇಲ್ಲ. ಆದರೆ ಅವರಿಗಿದ್ದ ಕೆಲವೊಂದು ಪರಮಾಧಿಕಾರಗಳನ್ನು ಕಿತ್ತೊಗೆಯುವ ಸಾಧ್ಯತೆಯಿದೆ.


ಗೌತಮ್ ಗಂಭೀರ್ ಗೆ ತಂಡದ ಆಯ್ಕೆ ವಿಚಾರದಲ್ಲಿ ಇದ್ದ ಪರಮಾಧಿಕಾರಕ್ಕೆ ಕತ್ತರಿ ಬೀಳುವ ಸಾಧ್ಯತೆಯಿದೆ. ಗೌತಮ್ ಗಂಭೀರ್ ಬೇಡಿಕೆಯಿಟ್ಟಿದ್ದ ಸಹಾಯಕ ಸಿಬ್ಬಂದಿಗಳು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನೂ ನೀಡಿಯೂ ತಂಡ ವಿಫಲವಾಗಿರುವುದಕ್ಕೆ ಬಿಸಿಸಿಐ ಅಸಮಾಧಾನಗೊಂಡಿದೆ ಎನ್ನಲಾಗಿದೆ.


ಹೀಗಾಗಿ ಈಗ ಈ ಸೋಲಿನ ಬಗ್ಗೆ ಮತ್ತು ಮುಂದಿನ ಸರಣಿಗಳ ಯೋಜನೆಗಳ ಬಗ್ಗೆ ಗಂಭೀರ್ ಜೊತೆ ಬಿಸಿಸಿಐ ಚರ್ಚೆ ನಡೆಸುವ ಸಾಧ್ಯತೆಯಿದೆ. ಇದರಿಂದಾಗಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಆಯ್ಕೆ ಸಮಿತಿಯ ನಿರ್ಧಾರದಂತೇ ತಂಡದ ಆಯ್ಕೆ ನಡೆಯಲಿದೆ. ಈ ಸರಣಿ ಗಂಭೀರ್ ಪಾಲಿಗೂ ಮಾಡು ಇಲ್ಲವೇ ಮಡಿ ಸರಣಿಯಾಗಲಿದೆ.

Comentarii


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page