top of page

ನನ್ನ ಹಣ ನನಗೆ ಕೊಡಿಸಿ: ಬಾಂಗ್ಲಾ ಕ್ರಿಕೆಟ್ ಮಂಡಳಿ ಮುಂದೆ ಗೋಗರೆದ ಶಾಹಿದ್ ಅಫ್ರಿದಿ; BCBಗೆ ದೂರು!

  • Apr 8
  • 1 min read

ಈ ಇಡೀ ವಿಷಯ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ (ಬಿಪಿಎಲ್ 2025) ಗೆ ಸಂಬಂಧಿಸಿದೆ. ವಾಸ್ತವವಾಗಿ, ಇತ್ತೀಚೆಗೆ ನಡೆದ ಬಾಂಗ್ಲಾದೇಶ ಟಿ-20 ಲೀಗ್‌ನಲ್ಲಿ, ಶಾಹಿದ್ ಚಿತ್ತಗಾಂಗ್ ಕಿಂಗ್ಸ್ ತಂಡದ ಮಾರ್ಗದರ್ಶಕ ಮತ್ತು ಬ್ರಾಂಡ್ ರಾಯಭಾರಿಯಾಗಿದ್ದರು.

ree

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಹಣದ ವಿಷಯವಾಗಿ ಅಲೆದಾಡುವಂತಾಗಿದೆ. ಈಗ ಪರಿಸ್ಥಿತಿ ಎಷ್ಟರ ಮಟ್ಟಿಗೆ ತಲುಪಿದೆ ಎಂದರೆ ಅವರು ಪ್ರಧಾನಿ ಮೊಹಮ್ಮದ್ ಯೂನಸ್ ಗೆ ದೂರು ನೀಡುವ ಸಾಧ್ಯತೆಯೂ ಇದೆ. ಶಾಹಿದ್ ಅಫ್ರಿದಿಯಂತಹ ಶ್ರೇಷ್ಠ ಆಟಗಾರ ಹಣಕ್ಕಾಗಿ ಪ್ರಧಾನಿಯ ಬಳಿ ದೂರು ನೀಡುವ ಬಗ್ಗೆ ಯೋಚಿಸಬೇಕಾದ ಪರಿಸ್ಥಿತಿ ಏನಾಯಿತು? ಇಲ್ಲಿದೆ ಮಾಹಿತಿ...

ಈ ಇಡೀ ವಿಷಯ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ (ಬಿಪಿಎಲ್ 2025) ಗೆ ಸಂಬಂಧಿಸಿದೆ. ವಾಸ್ತವವಾಗಿ, ಇತ್ತೀಚೆಗೆ ನಡೆದ ಬಾಂಗ್ಲಾದೇಶ ಟಿ-20 ಲೀಗ್‌ನಲ್ಲಿ, ಶಾಹಿದ್ ಚಿತ್ತಗಾಂಗ್ ಕಿಂಗ್ಸ್ ತಂಡದ ಮಾರ್ಗದರ್ಶಕ ಮತ್ತು ಬ್ರಾಂಡ್ ರಾಯಭಾರಿಯಾಗಿದ್ದರು. ಇದಕ್ಕಾಗಿ ಅವರಿಗೆ 1 ಲಕ್ಷ ಡಾಲರ್ (ಭಾರತೀಯ ಕರೆನ್ಸಿಯಲ್ಲಿ 87,33,155 ರೂ.) ಸಿಗಬೇಕಿತ್ತು. ಆದರೆ ಇಲ್ಲಿಯವರೆಗೆ ಅವರಿಗೆ ಆ ಮೊತ್ತ ಸಿಕ್ಕಿಲ್ಲ. ಬಿಡಿನ್ಯೂಸ್ 24 ವರದಿಯ ಪ್ರಕಾರ, ಅಫ್ರಿದಿಗೆ ಕೇವಲ 19 ಸಾವಿರ ಡಾಲರ್ (ರೂ. 16,59,368) ನೀಡಲಾಗಿದೆ. ಉಳಿದ ಹಣ ಕೊಡದೆ ಸತಾಯಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಮಾಜಿ ಕ್ರಿಕೆಟಿಗ ಚಿತ್ತಗಾಂಗ್ ಕಿಂಗ್ಸ್ ಬಗ್ಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (BCB) ಅಧ್ಯಕ್ಷರಿಗೂ ದೂರು ನೀಡಿದ್ದಾರೆ.


ಬಿಸಿಬಿ ಅಧ್ಯಕ್ಷರಿಗೆ ದೂರು ನೀಡಿದ ನಂತರವೂ ಸಮಸ್ಯೆ ಬಗೆಹರಿಯದಿದ್ದರೆ, ಶಾಹಿದ್ ಅಫ್ರಿದಿ ಪ್ರಧಾನಿ ಅಥವಾ ಬಾಂಗ್ಲಾದೇಶ ಸರ್ಕಾರದ ಮುಖ್ಯ ಸಲಹೆಗಾರರಿಗೆ ದೂರು ನೀಡಬಹುದು. ಆದರೆ ಈ ಸಂದರ್ಭದಲ್ಲಿ, ಚಿತ್ತಗಾಂಗ್ ಕಿಂಗ್ಸ್ ತಂಡದ ಮಾಲೀಕ ಸಮೀರ್ ಖಾದರ್ ಚೌಧರಿ, ಆಫ್ರಿದಿ ಅವರಿಗೆ ಅವರ ಹಣವನ್ನು ನೀಡಲಾಗುವುದು ಎಂದು ಹೇಳಿದ್ದಾರೆ. ಸಮೀರ್ ಪ್ರಕಾರ, ಶಾಹಿದ್‌ಗೆ ಈಗಾಗಲೇ 21 ಸಾವಿರ ಡಾಲರ್ (ರೂ. 18,34,336) ನೀಡಲಾಗಿದೆ, ಉಳಿದ ಮೊತ್ತವನ್ನು ಶೀಘ್ರದಲ್ಲೇ ನೀಡುವಂತೆ ಎಂದರು.


ಶಾಹಿದ್ ಅಫ್ರಿದಿ ಅವರ ಮಾರ್ಗದರ್ಶನದಲ್ಲಿ ಚಿತ್ತಗಾಂಗ್ ಕಿಂಗ್ಸ್ ಬಿಪಿಎಲ್ 2025 ರಲ್ಲಿ ಅದ್ಭುತ ಪ್ರದರ್ಶನ ನೀಡಿತು. ಅವರು ಈ ಋತುವಿನ ರನ್ನರ್ ಅಪ್ ಆಗಿದ್ದರು. ಫೆಬ್ರವರಿ 7 ರಂದು ಚಿತ್ತಗಾಂಗ್ ಕಿಂಗ್ಸ್ ಮತ್ತು ಫಾರ್ಚೂನ್ ಬಾರಿಶಾಲ್ ನಡುವೆ ಪ್ರಶಸ್ತಿ ಪಂದ್ಯ ನಡೆಯಿತು. ಫೈನಲ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಕಿಂಗ್ಸ್ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಫಾರ್ಚೂನ್ ಬಾರಿಶಾಲ್ ತಂಡ 19.3 ಓವರ್‌ಗಳಲ್ಲಿ 195 ರನ್ ಗಳಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಬರಿಶಾಲ್ ಪರ ನಾಯಕ ತಮೀಮ್ ಇಕ್ಬಾಲ್ 29 ಎಸೆತಗಳಲ್ಲಿ 54 ರನ್ ಗಳಿಸಿ ಸ್ಫೋಟಕ ಆಟವಾಡಿದರು.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page