top of page

ಪಕ್ಷದ ನಡೆಗೆ ತೀವ್ರ ಅಸಮಾಧಾನ: BJP ತೊರೆಯಲು ಹಾಸನದ ಯುವ ಮುಖಂಡ Preetham Gowda ಮುಂದು!?

  • Apr 8
  • 1 min read

ಮೂರೂ ಪಕ್ಷಗಳಲ್ಲಿ ಆಂತರಿಕ ಭಿರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಪಕ್ಷಾಂತರ ಪರ್ವ ನಡೆಯುವ ಲಕ್ಷಣಗಳು ನಿಚ್ಚಳವಾಗುತ್ತಿದೆ.

ree

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಪಕ್ಷಾಂತರ ಪರ್ವ ನಡೆಯುವ ಲಕ್ಷಣಗಳು ನಿಚ್ಚಳವಾಗುತ್ತಿದೆ.

ಮೂರೂ ಪಕ್ಷಗಳಲ್ಲಿ ಆಂತರಿಕ ಭಿರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಪಕ್ಷಾಂತರ ಪರ್ವ ನಡೆಯುವ ಲಕ್ಷಣಗಳು ನಿಚ್ಚಳವಾಗುತ್ತಿದೆ.

ಮೂರೂ ಪಕ್ಷಗಳಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು ತಲೆದೋರಿದ್ದರೂ ಶಾಸಕರು, ಸ್ಥಳೀಯ ನಾಯಕರು ಪರಿಸ್ಥಿತಿಯ ಅನುಗುಣವಾಗಿ ತಮ್ಮ ಭವಿಷ್ಯವನ್ನು ಭದ್ರಗೊಳಿಸಿಕೊಳ್ಳುವುದರತ್ತ ಗಮನ ಹರಿಸುತ್ತಿದ್ದಾರೆ.

ಭಿನ್ನಾಭಿಪ್ರಾಯಗಳು ತಲೆದೋರಿದ್ದರೂ ಶಾಸಕರು, ಸ್ಥಳೀಯ ನಾಯಕರು ಪರಿಸ್ಥಿತಿಯ ಅನುಗುಣವಾಗಿ ತಮ್ಮ ಭವಿಷ್ಯವನ್ನು ಭದ್ರಗೊಳಿಸಿಕೊಳ್ಳುವುದರತ್ತ ಗಮನ ಹರಿಸುತ್ತಿದ್ದಾರೆ.


ಒಂದೆಡೆ ಬಿಜೆಪಿ ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಸಂದರ್ಭಕ್ಕಾಗಿ ಕಾಯುತ್ತಿದ್ದರೆ, ಕಾಂಗ್ರೆಸ್ ಪಕ್ಷ ಜೆಡಿಎಸ್-ಬಿಜೆಪಿಗಳಿಂದ ನಾಯಕರನ್ನು ತನ್ನ ಪಕ್ಷಕ್ಕೆ ಸೇರಿಸಿಕೊಳ್ಳಲು ತೆರೆಮರೆಯಲ್ಲಿ ಕಾರ್ಯತಂತ್ರ ರೂಪಿಸುತ್ತಿದೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಚಿಂತನೆ ನಡೆಸುತ್ತಿರುವ ನಾಯಕರ ಪಟ್ಟಿಯಲ್ಲಿ ಹಾಸನ ಮಾಜಿ ಶಾಸಕ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಹೆಸರು ಕೇಳಿಬರುತ್ತಿರುವುದು ಅಚ್ಚರಿ ಮೂಡಿಸಿದೆ.


ಪ್ರೀತಂ ಗೌಡ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರುವ ಬಗ್ಗೆ ಸ್ವತಃ ಪ್ರೀತಂ ಗೌಡ ಅವರ ಆಪ್ತರೊಬ್ಬರು ಹಂಚಿಕೊಂಡಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿಯಾದಾಗಿನಿಂದಲೂ ಪ್ರೀತಂ ಗೌಡ ಬಿಜೆಪಿಯಲ್ಲಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನಗೊಂಡಿದ್ದರು. ಈಗ ಕಾಂಗ್ರೆಸ್ ಸೇರಲು ಪ್ರೀತಂ ಗೌಡ ಮುಂದಾಗಿದ್ದಾರೆ. ಈ ಮಾಹಿತಿಗೆ ಪೂರಕವೆಂಬಂತೆ ಪಕ್ಷದಿಂದ ಈಗಾಗಲೇ ಪ್ರೀತಂ ಗೌಡ ಅಂತರ ಕಾಯ್ದುಕೊಳ್ಳಲು ಆರಂಭಿಸಿದ್ದಾರೆ. ಇತ್ತೀಚೆಗೆ ಬಿಜೆಪಿಯ ಯಾವುದೇ ಕಾರ್ಯಕ್ರಮದಲ್ಲೂ ಪ್ರೀತಂ ಗೌಡ ಭಾಗಿಯಾಗುತ್ತಿಲ್ಲ. ತಮ್ಮದೇ ಕಾರ್ಯಕರ್ತರ ಸಂಘಟನೆಯನ್ನು ಪ್ರೀತಂ ಗೌಡ ಹೊಂದಿದ್ದು ಅವರೊಂದಿಗೆ ಕಾಂಗ್ರೆಸ್ ಸೇರಲಿದ್ದಾರೆ.

ಹಾಸನ ಜೆಡಿಎಸ್ ನ ಭದ್ರಕೋಟೆಯಾಗಿದ್ದು ಕಾಂಗ್ರೆಸ್ ತನ್ನ ಸಂಘಟನೆಯನ್ನು ಅಲ್ಲಿ ಬಲಪಡಿಸಲು ಯತ್ನಿಸುತ್ತಿದೆ. ಪ್ರೀತಂ ಗೌಡ ಅವರು ಕಾಂಗ್ರೆಸ್ ಗೆ ಸೇರ್ಪಡೆಗೊಂಡರೆ ಅದು ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page