top of page

ಪರಿಷತ್ ನಲ್ಲಿ ನಾಲ್ಕು ಸ್ಥಾನ ತೆರವು: ಮೇಲ್ಮನೆಯಲ್ಲಿ ಕಾಂಗ್ರೆಸ್ ಗೆ ಮತ್ತಷ್ಟು ಬಲ; ಮಸೂದೆ ಪಾಸು ಮತ್ತಷ್ಟು ಸಲೀಸು!

  • Apr 8
  • 1 min read

ಸಿಪಿ ಯೋಗೇಶ್ವರ್ ಅವರ ಅನಿರೀಕ್ಷಿತ ರಾಜೀನಾಮೆ ಹಿನ್ನೆಲೆಯಲ್ಲಿ ಮೂರನೇ ಖಾಲಿ ಸ್ಥಾನ ಸೃಷ್ಟಿಸಿಯಾಗಿದೆ, ಇದರ ಜೊತೆಗೆ ಜೆಡಿಎಸ್ ಎಂಎಲ್ ಸಿ ತಿಪ್ಪೇಸ್ವಾಮಿ ಕೂಡ ಜನವರಿಯಲ್ಲಿ ನಿವೃತ್ತಿ ಹೊಂದಲಿದ್ದಾರೆ.

ree









ಬೆಂಗಳೂರು: ರಾಜ್ಯ ವಿಧಾನ ಪರಿಷತ್ ನಲ್ಲಿ ಅಧಿಕಾರದ ಸಮತೋಲನವನ್ನು ಮರುರೂಪಿಸಲು ಎರಡು ಖಾಲಿ ಸ್ಥಾನಗಳು ಸಿದ್ಧವಾಗಿವೆ. ಕಾಂಗ್ರೆಸ್ ಎಂಎಲ್ ಸಿಗಳಾದ ಪ್ರಕಾಶ್ ರಾಥೋಡ್ ಮತ್ತು ಯುಬಿ ವೆಂಕಟೇಶ್ ಅವರ ನಿವೃತ್ತಿಯಾಗುವ ಹಿನ್ನೆಲೆಯಲ್ಲಿ ಈ ಹುದ್ದೆಗಳು ಖಾಲಿಯಾಗಲಿವೆ. ಈ ಸ್ಥಾನಗಳನ್ನು ಪಡೆಯಲು ಎಲ್ಲಾ ಪಕ್ಷಗಳು ಸಜ್ಜುಗೊಂಡಿವೆ.

ಸಿಪಿ ಯೋಗೇಶ್ವರ್ ಅವರ ಅನಿರೀಕ್ಷಿತ ರಾಜೀನಾಮೆ ಹಿನ್ನೆಲೆಯಲ್ಲಿ ಮೂರನೇ ಖಾಲಿ ಸ್ಥಾನ ಸೃಷ್ಟಿಸಿಯಾಗಿದೆ, ಇದರ ಜೊತೆಗೆ ಜೆಡಿಎಸ್ ಎಂಎಲ್ ಸಿ ತಿಪ್ಪೇಸ್ವಾಮಿ ಕೂಡ ಜನವರಿಯಲ್ಲಿ ನಿವೃತ್ತಿ ಹೊಂದಲಿದ್ದಾರೆ. ಈ ಸನ್ನಿವೇಶದಿಂದ ನಾಮನಿರ್ದೇಶನಗಳ ಮೂಲಕ ಎಲ್ಲಾ ನಾಲ್ಕು ಖಾಲಿ ಸ್ಥಾನಗಳನ್ನು ತುಂಬುವ ಅಪರೂಪದ ಅವಕಾಶ ಕಾಂಗ್ರೆಸ್ ಪಕ್ಷಕ್ಕೆ ದೊರೆತಿದೆ. ಮೇ 2023 ರಲ್ಲಿ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಮೇಲ್ಮನೆಯನ್ನು ನಿಯಂತ್ರಿಸಲು ಕಾಂಗ್ರೆಸ್ ಗೆ ಮತ್ತಷ್ಟು ಬಲ ಬಂದಂತಾಗುತ್ತದೆ. ಈ ಬದಲಾವಣೆಯಿಂದ ಮೇಲ್ಮನೆಯಲ್ಲಿ ಕಾಂಗ್ರೆಸ್‌ಗೆ ಅಧ್ಯಕ್ಷ ಸ್ಥಾನವನ್ನು ದೊರೆಯುವುದು ಮಾತ್ರವಲ್ಲದೆ ಉಪ ಸಭಾಪತಿ ಸ್ಥಾನ ಸಿಗಲು ಅವಕಾಶ ನೀಡುತ್ತದೆ. ರಾಜ್ಯದಲ್ಲಿ ಪಕ್ಷವು ಬಹುಕಾಲದಿಂದ ಬಯಸುತ್ತಿರುವ ಮಹತ್ವದ ಅಧಿಕಾರ ಬದಲಾವಣೆ ಸನ್ನಿಹಿತವಾಗಿದೆ.

ನಾಲ್ಕು ಪ್ರಮುಖ ಖಾಲಿ ಹುದ್ದೆಗಳು ಸಂಭಾವ್ಯ ಅಧಿಕಾರ ಬದಲಾವಣೆಗೆ ಬಾಗಿಲು ತೆರೆದಿರುವುದರಿಂದ ಕಾಂಗ್ರೆಸ್ ಮೇಲ್ಮನೆಯ ಮೇಲೆ ನಿಯಂತ್ರಣ ಸಾಧಿಸುತ್ತದೆ. ಬಹುಮತದೊಂದಿಗೆ, ಕಾಂಗ್ರೆಸ್ ಈ ಅವಧಿಗೆ ಮೊದಲ ಬಾರಿಗೆ ಪರಿಷತ್ ಅಧ್ಯಕ್ಷ ಸ್ಥಾನವನ್ನು ಪಡೆದುಕೊಳ್ಳಬಹುದು ಹಾಗೂ ವಿಧಾನಸಭೆಯ ಉಳಿದ ಅವಧಿಗೆ ಮೇಲ್ಮನೆಯಲ್ಲಿ ತನ್ನ ಪ್ರಾಬಲ್ಯವನ್ನು ಭದ್ರಪಡಿಸಿಕೊಳ್ಳಬಹುದು. ಆದರೆ ಪರಿಷತ್ ಅಧ್ಯಕ್ಷ ಮತ್ತು ಉಪ ಅಧ್ಯಕ್ಷರಾಗಿ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಈ ಬಹುಮತವು ನಮಗೆ ದೊಡ್ಡ ಪರಿಹಾರವಾಗಿದೆ. ಹಿಂದೆ, ನಮಗೆ ಸಂಖ್ಯಾಬಲದ ಕೊರತೆ ಇದ್ದಾಗ, ವಿರೋಧ ಪಕ್ಷಗಳು ಉದ್ದೇಶಪೂರ್ವಕವಾಗಿ ನಮ್ಮ ಪ್ರಮುಖ ಮಸೂದೆಗಳನ್ನು ತಡೆಹಿಡಿಯುತ್ತಿದ್ದವು ಎಂದು ಮೇಲ್ಮನೆಯ ಕಾಂಗ್ರೆಸ್ ನಾಯಕ ಎನ್‌ಎಸ್ ಬೋಸ್ ರಾಜು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಗೆ ತಿಳಿಸಿದ್ದಾರೆ.


ಪ್ರಸ್ತುತ, 75 ಸದಸ್ಯ ಬಲದ ಮೇಲ್ಮನೆಯಲ್ಲಿ ಕಾಂಗ್ರೆಸ್ 36 ಸ್ಥಾನಗಳನ್ನು ಹೊಂದಿದ್ದು, ಬಿಜೆಪಿ 29 ಸ್ಥಾನ ಮತ್ತು ಜೆಡಿಎಸ್ 8 ಸ್ಥಾನಗಳನ್ನು ಹೊಂದಿದೆ. ಅಂದರೆ ವಿರೋಧ ಪಕ್ಷವು 37 ಸ್ಥಾನಗಳ ಅಲ್ಪ ಬಹುಮತವನ್ನು ಹೊಂದಿದೆ. ಆದಾಗ್ಯೂ, ಕಾಂಗ್ರೆಸ್ ನಿಯಂತ್ರಣವನ್ನು ಪಡೆಯಲು ಕೆಲವೇ ಕೆಲವು ಸಂಖ್ಯೆಗಳ ಅಗತ್ಯವಿದೆ. ಬಜೆಟ್ ಅಧಿವೇಶನದ ವೇಳೆಗೆ ಕಾಂಗ್ರೆಸ್ ಪರವಾಗಿ ಬದಲಾಗುವ ನಿರೀಕ್ಷೆಯಿದೆ. ರಾಜ್ಯಪಾಲರು ಕಾಂಗ್ರೆಸ್‌ನ ನಾಲ್ವರು ನಾಮನಿರ್ದೇಶಿತರನ್ನು ಅನುಮೋದಿಸಿ ಅವರನ್ನು ನೇಮಿಸಿದ ನಂತರ, ಫೆಬ್ರವರಿ 2025 ರಲ್ಲಿ ಬಜೆಟ್ ಅಧಿವೇಶನದಲ್ಲಿ ಪಕ್ಷವು ತನ್ನ ಬಹುಮತವನ್ನು ಸಾಬೀತುಪಡಿಸಬೇಕಾಗುತ್ತದೆ, ಹೀಗಾಗಿ ಈ ಅಧಿವೇಶನ ಕಾಂಗ್ರೆಸ್ ಪಾಲಿಗೆ ನಿರ್ಣಾಯಕವಾಗಲಿದೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page