top of page

ಬೀದರ್: ATM ದರೋಡೆ ಪ್ರಕರಣ, ಆರೋಪಿಗಳ ಚಿತ್ರ ಬಿಡುಗಡೆ, ರೂ. 5 ಲಕ್ಷ ಬಹುಮಾನ ಘೋಷಿಸಿದ ಪೊಲೀಸರು

  • Apr 8
  • 1 min read

ಅಮನ್ ಕುಮಾರ್ ಮತ್ತು ಅಲೋಕ್ ಕುಮಾರ್ ಬಂಧನಕ್ಕೆ ಸುಳಿವು ನೀಡುವ ಯಾವುದೇ ವ್ಯಕ್ತಿಗೆ ರೂ. 5 ಲಕ್ಷ ನಗದು ಬಹುಮಾನ ನೀಡಲಾಗುವುದು, ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.

ree









ಬೆಂಗಳೂರು: ರಾಜ್ಯವನ್ನೆ ಬೆಚ್ಚಿ ಬಿಳಿಸಿದ್ದ ಬೀದರ್ ಎಟಿಎಂ ದರೋಡೆ ಹಾಗೂ ವ್ಯಾನ್ ಸಿಬ್ಬಂದಿಯನ್ನು ಗುಂಡಿಕ್ಕಿ ಕೊಂದ ಇಬ್ಬರು ದರೋಡೆಕೋರರ ಚಿತ್ರಗಳನ್ನು ಪೊಲೀಸರು ಶನಿವಾರ ಬಿಡುಗಡೆ ಮಾಡಿದ್ದಾರೆ. ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ರೂ. 5 ಲಕ್ಷ ನಗದು ಬಹುಮಾನ ಘೋಷಿಸಿದ್ದಾರೆ.

ದರೋಡೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ವೈಶಾಲಿ ಜಿಲ್ಲೆಯ ಫತೇಪುರ್ ಫುಲ್ವಾರಿಯಾ ನಿವಾಸಿ ಅಮನ್ ಕುಮಾರ್ ಮತ್ತು ಬಿಹಾರದ ವೈಶಾಲಿ ಜಿಲ್ಲೆಯ ಜನದಾಹಾ ಬಳಿಯ ಮಹಿಸೂರ್ ನಿವಾಸಿ ಅಲೋಕ್ ಕುಮಾರ್ ಅಕಾ ಅಶುತೋಷ್ ಅಕಾ ಅಂಬಾನಿ ಅವರು ಬೇಕಾಗಿದ್ದಾರೆ ಎಂದು ಕರ್ನಾಟಕ ಪೊಲೀಸರು ತಿಳಿಸಿದ್ದಾರೆ.

ಅಮನ್ ಕುಮಾರ್ ಮತ್ತು ಅಲೋಕ್ ಕುಮಾರ್ ಬಂಧನಕ್ಕೆ ಸುಳಿವು ನೀಡುವ ಯಾವುದೇ ವ್ಯಕ್ತಿಗೆ ರೂ. 5 ಲಕ್ಷ ನಗದು ಬಹುಮಾನ ನೀಡಲಾಗುವುದು, ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.ಡಿಐಜಿಪಿ ಕಲಬುರಗಿ (94808 00030), ಎಸ್ಪಿ ಬೀದರ್ (94808 03401) ಮತ್ತು ಡಿಎಸ್ಪಿ ಬೀದರ್ (94808 03420) ಸಂಖ್ಯೆಗೆ ಮಾಹಿತಿ ನೀಡುವಂತೆ ಪೊಲೀಸರು ಕೋರಿದ್ದಾರೆ. ಬೀದರ್ ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮುಖ್ಯ ಶಾಖೆಯ ಮುಂಭಾಗದಲ್ಲಿ ಜನವರಿ 16 ರಂದು ಹಗಲು ಹೊತ್ತಿನಲ್ಲಿ ಘಟನೆ ನಡೆದಿತ್ತು.

ಎಟಿಎಂ ವ್ಯಾನ್ ಹಿಂಬಾಲಿಸಿದ ದರೋಡೆಕೋರರು ಎಟಿಎಂ ಇರುವ ಬ್ಯಾಂಕ್ ಮುಂದೆ ಹಣದ ಟ್ರಂಕ್ ನ್ನು ವ್ಯಾನ್ ನಿಂದ ಕೆಳಗಿಳಿಸುತ್ತಿದ್ದಾಗ ದಾಳಿ ಮಾಡಿದ್ದರು. ಇಬ್ಬರು ಮುಸುಕುಧಾರಿ ದರೋಡೆಕೋರರು ಎಟಿಎಂ ವಾಹನ ಸಿಬ್ಬಂದಿ ಮೇಲೆ ಐದು ಸುತ್ತು ಗುಂಡು ಹಾರಿಸಿ, 93 ಲಕ್ಷ ರೂಪಾಯಿ ನಗದು ತುಂಬಿದ ಟ್ರಂಕ್‌ನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದರು.ಗುಂಡಿನ ದಾಳಿ ನಡೆಸುವ ಮುನ್ನ ದರೋಡೆಕೋರರು ಕಾವಲುಗಾರರ ಮೇಲೆ ಮೆಣಸಿನ ಪುಡಿ ಎರಚಿದ್ದರು. ದಾಳಿ ವೇಳೆ ಎಟಿಎಂ ವ್ಯಾನ್ ಗಾರ್ಡ್ ಗಿರಿ ವೆಂಕಟೇಶ್ ಗೆ ಗುಂಡು ತಗುಲಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಸಿಬ್ಬಂದಿ ಶಿವಕುಮಾರ್‌ಗೆ ಗಂಭೀರ ಗಾಯಗಳಾಗಿತ್ತು. ಎರಡು ದ್ವಿಚಕ್ರವಾಹನಗಳಲ್ಲಿ ಬಂದ ದರೋಡೆಕೋರರು ದಾಳಿ ನಡೆಸಿ ಹಣ ತುಂಬಿದ ಟ್ರಂಕ್ ತೆಗೆದುಕೊಂಡು ಪರಾರಿಯಾಗಿದ್ದರು.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page