top of page

ಬೀದರ್: ಬೆಳೆನಷ್ಟ, ಸಾಲಬಾಧೆ, ಬಾಲ್ಕಿಯಲ್ಲಿ ಮಹಾರಾಷ್ಟ್ರದ ರೈತ ಆತ್ಮಹತ್ಯೆ

  • Apr 8
  • 1 min read

ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಡಿಯೋನಿ ತಹಸಿಲ್‌ನ ಇಸ್ಮಾಲವಾಡಿ ಗ್ರಾಮದ ರೈತ ಅಲ್ಲಿಂದ ಸುಮಾರು 140 ಕಿಲೋ ಮೀಟರ್ ದೂರದಲ್ಲಿರುವ ಬೀದರ್ ಜಿಲ್ಲೆಯ ಭಾಲ್ಕಿಯ ಭಂಟ್ಬ್ರಾ ಗ್ರಾಮದಲ್ಲಿ ಆತ್ಮಹತ್ಯೆ

ree

ಬೀದರ್: ಬೆಳೆ ನಷ್ಟ, ಸಾಲಬಾಧೆಯಿಂದ ನೊಂದ ಮಹಾರಾಷ್ಟ್ರದ ರೈತನೋರ್ವ ನೆರೆಯ ಕರ್ನಾಟಕದ ಬೀದರ್ ಜಿಲ್ಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಮೃತನನ್ನು ಸೋಮಶ್ವೇರ್ ಖಂಡು ಮುಗಳೆ(33) ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಡಿಯೋನಿ ತಹಸಿಲ್‌ನ ಇಸ್ಮಾಲವಾಡಿ ಗ್ರಾಮದ ರೈತ ಅಲ್ಲಿಂದ ಸುಮಾರು 140 ಕಿಲೋ ಮೀಟರ್ ದೂರದಲ್ಲಿರುವ ಬೀದರ್ ಜಿಲ್ಲೆಯ ಭಾಲ್ಕಿಯ ಭಂಟ್ಬ್ರಾ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.


ಬೆಳೆ ನಷ್ಟ ಹಾಗೂ ಸಾಲಬಾಧೆಯಿಂದ ತುಂಬಾ ಹತಾಶೆಗೆ ಒಳಗಾಗಿದ್ದರು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ. ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿರುವ ಮುಗಳೆ ಎರಡು ಎಕರೆ ಜಮೀನಿನಲ್ಲಿ ಸೋಯಾಬೀನ್ ಬೆಳೆದಿದ್ದರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.


ಈ ಸಂಬಂಧ ಭಾಲ್ಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page