top of page

ಬೀದರ್‌ : ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರಿಗೆ ಸಾರಿಗೆ ಇಲಾಖೆ ಅಧಿಕಾರಿಯೊಬ್ಬರು ಚಿಟಿಕೆ ಹೊಡೆದು ಅವಾಜ್‌ ಹಾಕಿರುವ ಘಟನೆ ಅ.29 ರಂದು ನಡೆದಿದ್ದು,

  • Apr 8
  • 1 min read

ಈ ವಿಡಿಯೋ ಈಗ ಎಲ್ಲೆಡೆ ವೈರಲ್‌ ಆಗಿದೆ. ಜೊತೆಗೆ, ಸಾರಿಗೆ ಅಧಿಕಾರಿ ಮಂಜುನಾಥ್‌ ಕೊರವಿ ಅವರ ಜೊತಗೆ, ಶಾಸಕರ ವಿರುದ್ದ ಲಂಚದ ಆರೋಪವನ್ನೂ ಹೊರೆಸಿದ್ದು ಈ ಪ್ರಕರಣ ಮತ್ತೊಂದು ಹಾದಿ ಹಿಡಿದಿದೆ.


ree









ಅ.29 ರಂದು ರಾತ್ರಿ 10 ಗಂಟೆ ಸುಮಾರಿಗೆ ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ ಅವರು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾಲ್ಕಿ ರಸ್ತೆ ಮೂಲಕ ತೆರಳುತ್ತಿದ್ದರು. ನೌಬಾದ್‌-ಲಾಲ್‌ಬಾಗ್‌ ಸಮೀಪ ರಸ್ತೆಯ ಎರಡೂ ಬದಿ ವಾಹನಗಳನ್ನು ತಡೆದು ನಿಲ್ಲಿಸಲಾಗಿತ್ತು. ಜನ ಕೂಡ ನಿಂತಿದ್ದರು. ಇದನ್ನು ಗಮನಿಸಿದ ಬೆಲ್ದಾಳೆ ಅವರು ಮಂಜುನಾಥ ಕೊರವಿ ಬಳಿ ತೆರಳಿ, 'ರಾತ್ರಿ ಹೊತ್ತು ಇಷ್ಟೊಂದು ವಾಹನಗಳನ್ನೇಕೆ ತಡೆದು ನಿಲ್ಲಿಸಿದ್ದೀರಿ. ಮಹಿಳೆಯರು, ಮಕ್ಕಳು ರಸ್ತೆಬದಿ ನಿಂತಿದ್ದಾರೆ. ಬೇಗ ಪರಿಶೀಲಿಸಿ ಕಳಿಸಿಕೊಡಬೇಕು. ಹೆಲ್ಮೆಟ್‌ ಇದ್ದರೂ ಬೈಕ್‌ ಸವಾರರನ್ನೇಕೆ ತಡೆದಿದ್ದೀರಿ? ಜನರಿಗೆ ತೊಂದರೆ ಕೊಡಬೇಡಿ' ಎಂದು ಹೇಳಿದ್ದರು. ಇದರಿಂದ ರೊಚ್ಚಿಗೆದ್ದಿದ್ದ ಕೊರವಿ, ನಾನು ಕೇವಲ ಅಧಿಕಾರಿ ಮಾತ್ರವಲ್ಲ ಎಲ್ಲಾ ಫೀಲ್ಡಿನಲ್ಲೂ ಇದೀನಿ ಎಂದು ಬೆದರಿಕೆ ಹಾಕಿದ್ದಲ್ಲದೇ ಶಾಸಕರಿಗೆ ಚಿಟಿಕಿ ಹೊಡೆದು ಅವಾಜ್‌ ಹಾಕಿದ್ದರು.

ಶಾಸಕರ ಹಿಂಬಾಲಕರು ಇದನ್ನು ವಿಡಿಯೋ ಮಾಡಿದ್ದರು. ಬಳಿಕ ಮಂಜುನಾಥ ಕೊರವಿ ಅವರನ್ನು ರಾಯಚೂರಿನ ಆರ್‌ಟಿಒ ಕಚೇರಿಗೆ ವರ್ಗಾವಣೆಗೊಳಿಸಿ ಸಾರಿಗೆ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು ಆದೇಶ ಹೊರಡಿಸಿದ್ದರು.

ಈ ವಿವಾದದ ಬಳಿಕ ಮಂಜುನಾಥ ಕೊರವಿ ಮತ್ತೊಂದು ವಿಡಿಯೋ ಮಾಡಿ ಶಾಸಕರ ವಿರುದ್ದ ಭ್ರಷ್ಟಾಚಾರದ ಆರೋಪ ಹೊರೆಸಿದ್ದಾರೆ. ಈ ಬಗ್ಗೆ ಸೂಕ್ತ ದಾಖಲೆ ನೀಡುವಂತೆಯೂ ಹೇಳಿಕೊಂಡಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page