top of page

ಬ್ಯಾಡ್ಮಿಂಟನ್ ಬಿಟ್ಟು ಟೆನಿಸ್‌ ಆಡಿದಿದ್ದರೆ ಹೆಚ್ಚಿನ ಯಶಸ್ಸು ಸಿಗುತ್ತಿತ್ತು: Saina Nehwal

  • Apr 4
  • 1 min read

ಬ್ಯಾಡ್ಮಿಂಟನ್​ ಎನ್ನುವುದು ಅಷ್ಟು ಸುಲಭದ ಆಟವಲ್ಲ. ಇಲ್ಲಿ ಉಸಿರು ತೆಗೆಯಲು ಕೂಡ ಕಷ್ಟಪಡಬೇಕು. ಇದು ಬ್ಯಾಡ್ಮಿಂಟನ್​ ಆಡಿದವರಿಗೆ ಮಾತ್ರ ಇದರ ಕಷ್ಟ ಅರಿವಾಗುತ್ತದೆ.


ree









ನವದೆಹಲಿ: ಬ್ಯಾಡ್ಮಿಂಟನ್ ಬಿಟ್ಟು ಟೆನಿಸ್‌ ಆಡಿದ್ದರೆ ಹೆಚ್ಚಿನ ಯಶಸ್ಸು ಸಿಗುತ್ತಿತ್ತು ಎಂದು ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಹೇಳಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ “ಅವಳ ಕಥೆ-ನನ್ನ ಕಥೆ’ ಉಪನ್ಯಾಸ ಸರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಸೈನಾ ನೆಹ್ವಾಲ್, ''ಬ್ಯಾಡ್ಮಿಂಟನ್​ ಆಡುವ ಬದಲು ಟೆನಿಸ್​ ಆಡುತ್ತಿದ್ದರೆ ಇನ್ನೂ ಹೆಚ್ಚಿನ ಯಶಸ್ಸು ಸಿಗುತ್ತಿತ್ತು.

ನನ್ನ ಪೋಷಕರು ಬ್ಯಾಡ್ಮಿಂಟನ್‌ಗೆ ಬದಲಾಗಿ ಟೆನಿಸ್‌ಗೆ ಸೇರಿಸುತ್ತಿದ್ದರೆ ಚೆನ್ನಾಗಿರುತ್ತಿತ್ತು ಎಂದು ಕೆಲವೊಮ್ಮೆ ನನಗೆ ಅನ್ನಿಸುತ್ತಿದೆ. ನಾನು ಬ್ಯಾಡ್ಮಿಂಟನ್​ ಬಿಟ್ಟು ಟೆನಿಸ್​ ಅಥವಾ ಕ್ರಿಕೆಟ್​ ಆಡುತ್ತಿದ್ದರೆ ನನ್ನ ಬಳಿ ಹೆಚ್ಚು ಹಣ ಮತ್ತು ಶಕ್ತಿ ಇರುತ್ತಿತ್ತು ಎಂದು ಹೇಳಿದ್ದಾರೆ.


ನಾನು ಯಾವುದಾದರೊಂದು ಟೂರ್ನಿಯಲ್ಲಿ ಸೋತರೆ ಸಾಕು ಎಲ್ಲ ಕಡೆಗಳಿಂದ ಟೀಕೆಗಳು ಬರುತ್ತದೆ. ಬ್ಯಾಡ್ಮಿಂಟನ್​ ಎನ್ನುವುದು ಅಷ್ಟು ಸುಲಭದ ಆಟವಲ್ಲ. ಇಲ್ಲಿ ಉಸಿರು ತೆಗೆಯಲು ಕೂಡ ಕಷ್ಟಪಡಬೇಕು. ಇದು ಬ್ಯಾಡ್ಮಿಂಟನ್​ ಆಡಿದವರಿಗೆ ಮಾತ್ರ ಇದರ ಕಷ್ಟ ಅರಿವಾಗುತ್ತದೆ. ನಾನು ಒಬ್ಬರ ಬಗ್ಗೆ ಟೀಕೆ ಮಾಡುವುದು ಸಲಭ. ಆದರೆ ಈ ಕಷ್ಟ ಏನೆಂಬುದು ಕ್ರೀಡಾಪಟುಗಳಿಗೆ ಮಾತ್ರ ತಿಳಿದಿರುತ್ತದೆ ಎಂದಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆರಂಭಿಸಿರುವ ಅವಳ ಕಥೆ-ನನ್ನ ಕಥೆ (ಹರ್‌ ಸ್ಟೋರಿ – ಮೈ ಸ್ಟೋರಿ) ಉಪ ನ್ಯಾಸ ಸರಣಿಯ ಸೈನಾ ಈ ಮಾತುಗಳನ್ನಾಡಿದ್ದಾರೆ. ಪದ್ಮ ಪ್ರಶಸ್ತಿ ಪುರಸ್ಕೃತ‌ ಎಲ್ಲ ಮಹಿಳಾ ಸಾಧಕರು ತಮ್ಮ ಕಥೆಗಳನ್ನು ಉಪನ್ಯಾಸದ ರೂಪದಲ್ಲಿ ಹೇಳಿಕೊಳ್ಳಲಿದ್ದಾರೆ. 2 ದಿನಗಳ ಹಿಂದಷ್ಟೇ ದ್ರೌಪದಿ ಮುರ್ಮು ಜತೆ ಸೈನಾ ಬ್ಯಾಡ್ಮಿಂಟನ್​ ಆಡಿದ ವಿಡಿಯೊ ವೈರಲ್​ ಆಗಿತ್ತು.

ಶಿವಶಂಕರಪ್ಪ ಹೇಳಿಕೆ ಖಂಡಿಸಿದ ಸೈನಾ

ನೆಹ್ವಾಲ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ “ಸಮಾಜದಲ್ಲಿ ಮಹಿಳೆ ಅಬಲೆ ಅಲ್ಲ ಸಬಲೆ. ಪುರುಷರಂತೆ ಎಲ್ಲಾ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂದು ಕಾಂಗ್ರೆಸ್​ ಅಭಿಯಾನವೊಂದನ್ನು ಆರಂಭಿಸಿತ್ತು. ಆದರೆ ಕರ್ನಾಟಕದ ಹಿರಿಯ ಕಾಂಗ್ರೆಸ್​ ನಾಯಕರೊಬ್ಬರು ಮಹಿಳೆಯರ ಬಗ್ಗೆ ಅತ್ಯಂತ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ. ಇದು ಕಾಂಗ್ರೆಸ್​ನ ನಿಜವಾದ ಮನಸ್ಥಿಯನ್ನು ತೋರಿಸುತ್ತದೆ’ ಎಂದು ಶಿವಶಂಕರಪ್ಪ ಹೇಳಿಯನ್ನು ಖಂಡಿಸಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page