top of page

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಹೈಕೋರ್ಟ್ ಬಿಗ್ ರಿಲೀಫ್, ಶಿಕ್ಷೆ ಅಮಾನತು

  • Apr 8
  • 1 min read

ಹೈಕೋರ್ಟ್​ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಆದೇಶಿಸಿದೆ.


ree









ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಹೈಕೋರ್ಟ್ ಬುಧವಾರ ಬಿಗ್ ರಿಲೀಫ್ ನೀಡಿದೆ.

ವಿಶೇಷ ಕೋರ್ಟ್ ವಿಧಿಸಿದ್ದ ಜೈಲು ಶಿಕ್ಷೆ ಪ್ರಶ್ನಿಸಿ ಸತೀಶ್ ಸೈಲ್ ಹಾಗೂ ಇತರ ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಆದೇಶಿಸಿದೆ.

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್​, ಆರೋಪಿಗಳಿಗೆ ಒಟ್ಟು ಆರು ಪ್ರಕರಣಗಳಲ್ಲಿ ಶಿಕ್ಷೆ ಹಾಗೂ ದಂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಜನ ಪ್ರತಿನಿಧಿಗಳ ಕೋರ್ಟ್​ ನೀಡಿದ್ದ ಶಿಕ್ಷೆಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.


ಆರು ವಾರದಲ್ಲಿ ದಂಡದ ಮೊತ್ತದ ಶೇ. 25ರಷ್ಟನ್ನು ವಿಚಾರಣಾಧೀನ ನ್ಯಾಯಾಲಯದಲ್ಲಿ ಠೇವಣಿ ಇಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, ದಂಡದ ಮೊತ್ತವನ್ನು ವಿಚಾರಣಾಧೀನ ನ್ಯಾಯಾಲಯದಲ್ಲಿ ಠೇವಣಿ ಇಡುವ ಷರತ್ತಿಗೆ ಒಳಪಟ್ಟು ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ಹೈಕೋರ್ಟ್‌ ಅಮಾನತುಗೊಳಿಸಿದೆ.

ಹೈಕೋರ್ಟ್ ಶಿಕ್ಷೆ ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಇತರೆ ಅಪರಾಧಿಗಳು ನಾಳೆ(ನವೆಂಬರ್ 14) ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page