top of page

ಬಸವರಾಜ ಹೊರಟ್ಟಿ ವಿರುದ್ಧ ಕೇಸ್ ದಾಖಲಿಸದ ಡಿಜಿಪಿ ಅಲೋಕ್ ಮೋಹನ್, ಎಸ್​ಪಿಗೆ ನೋಟಿಸ್

  • Apr 8
  • 1 min read

ಡಿಜಿಪಿ ಅಲೋಕ್ ಮೋಹನ್ ಮತ್ತು ಎಸ್‌ಪಿ ಗೋಪಾಲ ಬ್ಯಾಕೋಡ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, 12 ರಂದು ಎಸ್ಟಿ ಆಯೋಗದ ಮುಂದೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ree









ಬೆಂಗಳೂರು: ಅಧಿಕಾರ ದುರುಪಯೋಗಪಡಿಸಿಕೊಂಡ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರಾಕರಿಸಿದ ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ)ರಿಗೆ ಮತ್ತು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ನೋಟಿಸ್ ಜಾರಿ ಮಾಡಿದೆ.

ಬಸವರಾಜ ಹೊರಟ್ಟಿ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ಅಕ್ರಮ ಎಸಗಿದ್ದು, ಅವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಧಾರವಾಡದ ಅರುಣ್ ಹಿರೇಹಾಳ ಎಂಬುವವರು ನೀಡಿದ ದೂರಿನ ಮೇರೆಗೆ ನೋಟಿಸ್ ಜಾರಿ ಮಾಡಲಾಗಿದೆ.

ಎಸ್ ಸಿಎಸ್ ಟಿ ಡಿಜಿಪಿ ಅಲೋಕ್ ಮೋಹನ್ ಮತ್ತು ಎಸ್‌ಪಿ ಗೋಪಾಲ ಬ್ಯಾಕೋಡ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, 12 ರಂದು ಎಸ್ಟಿ ಆಯೋಗದ ಮುಂದೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.


ಬಸವರಾಜ ಹೊರಟ್ಟಿ ಅವರು ಚುನಾಯಿತ ಪ್ರತಿನಿಧಿಯಾಗಿದ್ದು, ಆರ್​. ಎನ್ ಪೂಜಾರ್ ಅವರು ಪರಿಶಿಷ್ಟ ಪಂಗಡದವರೆಂಬುವುದನ್ನು ತಿಳಿದು ಅವರ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು 2009ರಲ್ಲಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಧಾರವಾಡದ ಸರ್ವೋದಯ ಶಿಕ್ಷಣ ಟ್ರಸ್ಟ್ ಅನ್ನು ತಮ್ಮ ಹೆಸರಿಗೆ ನೋಂದಣಿ ಮಾಡಿಸಿದ್ದಾರೆ ಎಂದು ದೂರುದಾರ ಅರುಣ್ ಹಿರೇಹಾಳ ಆರೋಪಿಸಿದ್ದಾರೆ.

"ಈ ಕಾಯ್ದೆಯು ಕಾನೂನುಬಾಹಿರವಾಗಿದೆ ಮತ್ತು ಪರಿಶಿಷ್ಟ ಪಂಗಡಗಳನ್ನು ಆರ್ಥಿಕವಾಗಿ ಹೊರಗಿಡುವಿಕೆಗೆ ಕಾರಣವಾಗಿದೆ. ಇದು ಪರಿಶಿಷ್ಟ ಪಂಗಡಗಳು ಮತ್ತು ಇತರರನ್ನು ಶೋಷಣೆಗೆ ಒಳಪಡಿಸಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಟ್ರಸ್ಟ್‌ನ ಸೇವೆಗಳಿಂದ ಪ್ರಯೋಜನ ಪಡೆಯುವ ಅರ್ಹತೆ ಹೊಂದಿರುವ ಪರಿಶಿಷ್ಟ ಪಂಗಡಗಳಿಗೆ ಆರ್ಟಿಕಲ್ 14 ರ ಅಡಿಯಲ್ಲಿ ಎಲ್ಲಾ ಹಕ್ಕುಗಳನ್ನು ನಿರಾಕರಿಸಲಾಗಿದೆ" ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page