top of page

ಭಾರತಕ್ಕೆ ಟೆಸ್ಲಾ ಪ್ರವೇಶ ಅಸಾಧ್ಯ, ಅದರಿಂದ ಅಮೆರಿಕಕ್ಕೆ ಅನ್ಯಾಯವಾಗುತ್ತದೆ: ಡೊನಾಲ್ಡ್ ಟ್ರಂಪ್

  • Apr 8
  • 1 min read

ಸುಂಕ ಹೆಚ್ಚಳ ಬಗ್ಗೆ ಡೊನಾಲ್ಡ್ ಟ್ರಂಪ್ ಕ್ರಮದ ಮಧ್ಯೆ ಈ ಹೇಳಿಕೆ ನೀಡಿದ್ದಾರೆ. ಫೆಬ್ರವರಿ 13 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ಶ್ವೇತಭವನದಲ್ಲಿ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತ ನಡೆಸುವ ಮೊದಲು, ಅಮೆರಿಕ ಅಧ್ಯಕ್ಷರು ಪರಸ್ಪರ ಸುಂಕಗಳನ್ನು ಘೋಷಿಸಿದ್ದರು.

ree

ವಾಷಿಂಗ್ಟನ್: ಎಲೋನ್ ಮಸ್ಕ್ ಅವರ ಟೆಸ್ಲಾ ಕಂಪನಿಯು ಭಾರತದಲ್ಲಿ ಸುಂಕಗಳನ್ನು ತಪ್ಪಿಸಲು ಕಾರ್ಖಾನೆಯನ್ನು ನಿರ್ಮಿಸಿದರೆ, ಅದು ಅಮೆರಿಕಕ್ಕೆ ಅನ್ಯಾಯವಾಗುತ್ತದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಸುಂಕ ಹೆಚ್ಚಳ ಬಗ್ಗೆ ಡೊನಾಲ್ಡ್ ಟ್ರಂಪ್ ಕ್ರಮದ ಮಧ್ಯೆ ಈ ಹೇಳಿಕೆ ನೀಡಿದ್ದಾರೆ. ಫೆಬ್ರವರಿ 13 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ಶ್ವೇತಭವನದಲ್ಲಿ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತ ನಡೆಸುವ ಮೊದಲು, ಅಮೆರಿಕ ಅಧ್ಯಕ್ಷರು ಪರಸ್ಪರ ಸುಂಕಗಳನ್ನು ಘೋಷಿಸಿದ್ದರು.

ಫಾಕ್ಸ್ ನ್ಯೂಸ್‌ನ ಸೀನ್ ಹ್ಯಾನಿಟಿ ಅವರೊಂದಿಗಿನ ಇತ್ತೀಚಿನ ಸಂದರ್ಶನದಲ್ಲಿ ಮಾತನಾಡುವ ವೇಳೆ ಡೊನಾಲ್ಡ್ ಟ್ರಂಪ್, ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಸುಂಕಗಳನ್ನು ವಿಧಿಸುತ್ತದೆ ಎಂದು ಹೇಳಿದ್ದರು. ಭಾರತದಲ್ಲಿ ಕಾರನ್ನು ಮಾರಾಟ ಮಾಡುವುದು ಮಸ್ಕ್ ಅವರಿಗೆ ಅಸಾಧ್ಯ ಎಂದಿದ್ದರು.


ಜಗತ್ತಿನ ಪ್ರತಿಯೊಂದು ದೇಶವು ನಮ್ಮಿಂದ ಲಾಭ ಮಾಡಿಕೊಳ್ಳುತ್ತಿವೆ. ಸುಂಕದ ಮೂಲಕ ಮಾಡುತ್ತಿದ್ದಾರೆ. ಪ್ರಾಯೋಗಿಕವಾಗಿ ಹೇಳುವುದಾದರೆ ಭಾರತದಲ್ಲಿ ಕಾರು ಮಾರಾಟ ಮಾಡಲು ಸಾಧ್ಯವಿಲ್ಲ ಎಂದರು. ಮಸ್ಕ್ ಭಾರತದಲ್ಲಿ ಕಾರ್ಖಾನೆಯನ್ನು ನಿರ್ಮಿಸಿದರೆ, ಅದು ಸರಿ, ಆದರೆ ಅದು ನಮಗೆ ಅನ್ಯಾಯವಾಗಿದೆ. ಇದು ತುಂಬಾ ಅನ್ಯಾಯವಾಗಿದೆ" ಎಂದು ಟ್ರಂಪ್ ಸಂದರ್ಶನದಲ್ಲಿ ಹೇಳಿದರು.ನಮಗೆ ಅನ್ಯಾಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸರ್ಕಾರಿ ದಕ್ಷತೆಯ ಇಲಾಖೆಯ ಮುಖ್ಯಸ್ಥರಾಗಿರುವ ಮಸ್ಕ್ ಕೂಡ ಸಂದರ್ಶನದ ಸಮಯದಲ್ಲಿ ಹಾಜರಿದ್ದರು. ಕೆಲವು ದಿನಗಳ ಹಿಂದೆ, ಎಲೆಕ್ಟ್ರಿಕ್ ಕಾರು ತಯಾರಕ ಟೆಸ್ಲಾ ಭಾರತದಲ್ಲಿ ವ್ಯಾಪಾರ ಕಾರ್ಯಾಚರಣೆ ವಿಶ್ಲೇಷಕ ಮತ್ತು ಗ್ರಾಹಕ ಬೆಂಬಲ ತಜ್ಞ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ತೆರೆಯಿತು. ಈ ಕ್ರಮವನ್ನು ಕಂಪನಿಯು ದೇಶಕ್ಕೆ ಪ್ರವೇಶವೆಂದು ನೋಡುತ್ತದೆ.

ಕಂಪನಿಯ ವೆಬ್‌ಸೈಟ್‌ನಲ್ಲಿರುವ ಉದ್ಯೋಗ ಪೋಸ್ಟಿಂಗ್‌ಗಳ ಪ್ರಕಾರ, ಹುದ್ದೆಗಳು 'ಮುಂಬೈ ಸಬರ್ಬನ್' ಪ್ರದೇಶಕ್ಕೆ ಆಗಿದೆ. ನಾನು ಮೋದಿಯವರ ಜೊತೆ ಇತ್ತೀಚೆಗೆ ಮಾತನಾಡುವ ವೇಳೆ ನೀವು ಶೇಕಡಾ 100ರಷ್ಟು ಸುಂಕ ವಿಧಿಸಿದರೆ ನಾವು ಕೂಡ ಅಷ್ಟೇ ವಿಧಿಸುತ್ತೇವೆ ಎಂದು ಹೇಳಿದ್ದೆ. ಅದಕ್ಕೆ ಮಸ್ಕ್ ಅವರು ಆಟೋ ಆಮದು ಸುಂಕ ಶೇಕಡಾ 100ರಷ್ಟು, ಅದು ಸರಿಯಾದದ್ದು ಎಂದರು.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page