top of page

ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್ ನಲ್ಲಿ ಕೋವಿಡ್-19; ಕನಿಷ್ಠ 100 ಪ್ರಕರಣಗಳಿವೆ- ಪರ್ವತಾರೋಹಿಗಳ ಮಾರ್ಗದರ್ಶಿ

ಮೌಂಟ್ ಎವರೆಸ್ಟ್ ನಲ್ಲೂ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು 100 ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಎವರೆಸ್ಟ್ ಪರ್ವತಾರೋಹಿಗಳ ಮಾರ್ಗದರ್ಶಿಯೊಬ್ಬರು ಹೇಳಿದ್ದಾರೆ.


ree








ಕಠ್ಮಂಡು: ಮೌಂಟ್ ಎವರೆಸ್ಟ್ ನಲ್ಲೂ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು 100 ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಎವರೆಸ್ಟ್ ಪರ್ವತಾರೋಹಿಗಳ ಮಾರ್ಗದರ್ಶಿಯೊಬ್ಬರು ಹೇಳಿದ್ದಾರೆ. ಪರ್ವತಾರೋಹಿಗಳು ಹಾಗೂ ಸಿಬ್ಬಂದಿಗಳ ಪೈಕಿ 100 ಮಂದಿಗೆ ಕೋವಿಡ್-19 ಸೋಂಕು ತಗುಲಿದೆ ಎಂಬ ಮಾಹಿತಿ ಬಹಿರಂಗಗೊಂಡಿದೆ.

ವಿಶ್ವದ ಅತಿ ಎತ್ತರದ ಪರ್ವತದಲ್ಲಿ ಕೋವಿಡ್-19 ಕ್ಲಸ್ಟರ್ ಇಲ್ಲ ಎಂದು ನೇಪಾಳ ವಾದಿಸುತ್ತಿತ್ತು, ಈ ನಡುವೆ ಕೋವಿಡ್-19 ಪ್ರಕರಣಗಳು ಮೌಂಟ್ ಎವರೆಸ್ಟ್ ನಲ್ಲಿ ಪತ್ತೆಯಾಗಿರುವುದನ್ನು ಪರ್ವತಾರೋಹಿಗಳ ಮಾರ್ಗದರ್ಶಿಗಳು ಬಹಿರಂಗಪಡಿಸಿದ್ದಾರೆ.

ಆಸ್ಟ್ರಿಯಾದ ಲುಕಾಸ್ ಫರ್ಟೆನ್‌ಬಾಚ್, ಕೊರೋನಾ ಭೀತಿಯಿಂದ ಎವರೆಸ್ಟ್ ಪರ್ವತಾರೋಹಣವನ್ನು ಸ್ಥಗಿತಗೊಳಿಸಿದ್ದು, ತಮ್ಮ ವಿದೇಶಿ ಮಾರ್ಗದರ್ಶಕರೊಬ್ಬರು 6 ನೇಪಾಳಿ ಶಿರ್ಪಾ ಮಾರ್ಗದರ್ಶಿಗಳು ಕೊರೋನಾ ಸೋಂಕಿಗೆ ಒಳಗಾಗಿದ್ದಾರೆಂದು ಮಾಹಿತಿ ನೀಡಿದ್ದಾರೆ.

ಬೇಸ್ ಕ್ಯಾಂಪ್ ನಲ್ಲಿ 100 ಜನರಿಗೆ ಕೋವಿಡ್-19 ಸೋಂಕು ತಗುಲಿದೆ. ಒಟ್ಟಾರೆ ಇದು 150-200 ಇರಬಹುದು ಎಂದು ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿರುವ ಅಸೋಸಿಯೇಟೆಡ್ ಪ್ರೆಸ್ ಗೆ ಲುಕಾಸ್ ಫರ್ಟೆನ್‌ಬಾಚ್ ಹೇಳಿದ್ದಾರೆ.

ಈ ಋತುವಿನಲ್ಲಿ 408 ವಿದೇಶಿ ಪರ್ವತಾರೋಹಿಗಳಿಗೆ ಎವರೆಸ್ಟ್ ಪರ್ವತ ಆರೋಹಣಕ್ಕೆ ಅನುಮತಿ ನೀಡಲಾಗಿತ್ತು, ಈ ಪೈಕಿ ಕೆಲವು ನೂರು ಮಂದಿ ಮಾರ್ಗದರ್ಶಕರು, ಸಹಾಯಕ ಸಿಬ್ಬಂದಿಗಳಿದ್ದು, ಏಪ್ರಿಲ್ ನಿಂದಲೂ ಬೇಸ್ ಕ್ಯಾಂಪ್ ನಲ್ಲೇ ಇದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page