top of page

ಮಡಿಕೇರಿ: ದೈಹಿಕ ಶಿಕ್ಷಕರಿಲ್ಲದಿದ್ದರೂ ರಾಷ್ಟ್ರೀಯ ಫುಟ್ಬಾಲ್ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದ KPS ವಿದ್ಯಾರ್ಥಿಗಳು

  • Apr 4
  • 1 min read

ಕೆಪಿಎಸ್ ನ ಒಟ್ಟು ಏಳು ವಿದ್ಯಾರ್ಥಿಗಳು ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಮತ್ತು ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ರಾಷ್ಟ್ರೀಯ ಪಂದ್ಯಗಳನ್ನು ಆಡಲಿದ್ದಾರೆ.


ree









ಮಡಿಕೇರಿ: ದೈಹಿಕ ತರಬೇತುದಾರರು ಇಲ್ಲದಿದ್ದರೂ ನೆಲ್ಲಿಹುದಿಕೇರಿಯ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು 14 ವರ್ಷದೊಳಗಿನವರ ಫುಟ್ಬಾಲ್ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಕೆಪಿಎಸ್ ನ ಒಟ್ಟು ಏಳು ವಿದ್ಯಾರ್ಥಿಗಳು ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಮತ್ತು ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ರಾಷ್ಟ್ರೀಯ ಪಂದ್ಯಗಳನ್ನು ಆಡಲಿದ್ದಾರೆ.

ಹಿಂದೆ ಇದ್ದ ದೈಹಿಕ ತರಬೇತುದಾರರು ಎರಡು ವರ್ಷಗಳ ಹಿಂದೆ ವರ್ಗಾವಣೆಯಾದರು, ಅವರ ವರ್ಗಾವಣೆ ನಂತ ಹುದ್ದೆ ಭರ್ತಿಯಾಗದೆ ಉಳಿದಿದೆ. ಹೀಗಿದ್ದರೂ ಕೆಪಿಎಸ್ ನೆಲ್ಲಿಹುದಿಕೇರಿ ಶಾಲೆಯಲ್ಲಿ 14 ವರ್ಷದೊಳಗಿನವರ ಫುಟ್ ಬಾಲ್ ತಂಡ ಪ್ರತಿನಿತ್ಯ ಅಭ್ಯಾಸ ಮಾಡುತ್ತಿತ್ತ ಎಂದು ಮೂಲಗಳು ತಿಳಿಸಿವೆ. ಕ್ಯಾಪ್ಟನ್ ಮೊಹಮ್ಮದ್ ಶಿಹಾಲ್ ನೇತೃತ್ವದ 11 ವಿದ್ಯಾರ್ಥಿಗಳ ತಂಡವು ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬದಿಂದ ಬಂದಿದೆ. ಆದಾಗ್ಯೂ, ಪಟ್ಟುಬಿಡದ ಅಭ್ಯಾಸದಿಂದ ಅವರಿಗೆ ಉತ್ತಮ ಅವಕಾಶ ತಂದಕೊಟ್ಟಿದೆ. ಈ ತಂಡದಿಂದ ಏಳು ಮಂದಿ ಈಗ ರಾಷ್ಟ್ರೀಯ ಪಂದ್ಯಗಳನ್ನು ಆಡಲಿದ್ದಾರೆ.

ನಮ್ಮ ಶಾಲೆಯ ತಂಡವು ವಲಯ, ತಾಲೂಕು, ಜಿಲ್ಲೆ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಅರ್ಹತೆ ಪಡೆದಿದೆ. ಕಲ್ಬುರ್ಗಿ, ಬೆಳಗಾವಿ, ದಕ್ಷಿಣ ಕನ್ನಡ ಮತ್ತು ಇತರ ತಂಡಗಳ ವಿರುದ್ಧ ಜಯಗಳಿಸಿದ ಅವರ ಆಟವು ಗಮನಾರ್ಹವಾಗಿತ್ತು ಎಂದು ಸಂಸ್ಥೆ ಶಿಕ್ಷಕರಾಗಿರುವ ಆದರೆ ಚಾಂಪಿಯನ್‌ಶಿಪ್‌ನಲ್ಲಿ ತಂಡದ ವ್ಯವಸ್ಥಾಪಕರಾಗಿರುವ ಶಶಿಕುಮಾರ್ ವಿವರಿಸಿದರು. ರಾಜ್ಯಮಟ್ಟದಲ್ಲಿ ಕೆಪಿಎಸ್ ನೆಲ್ಲಿಹುದಿಕೇರಿ ತಂಡ ಬೆಂಗಳೂರು ವಿರುದ್ಧ ಸೋಲನುಭವಿಸಿತು. ಆದರೆ, ಕೆಪಿಎಸ್ ನೆಲ್ಲಿಹುದಿಕೇರಿ ಪ್ರಥಮ ರನ್ನರ್ ಅಪ್ ಆಗಿದ್ದು, ತಂಡದಿಂದ ಒಟ್ಟು ಏಳು ವಿದ್ಯಾರ್ಥಿಗಳು ರಾಜ್ಯ ತಂಡವನ್ನು ಸೇರಿ ಮಹಾರಾಷ್ಟ್ರದಲ್ಲಿ ನಡೆಯಲಿರುವ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ರಾಷ್ಟ್ರೀಯ ಫುಟ್ ಬಾಲ್ ಚಾಂಪಿಯನ್ ಷಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page