top of page

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಗೆ ಮಧ್ಯಂತರ ಜಾಮೀನು, ಸುಪ್ರೀಂಗೆ ಮೇಲ್ಮನವಿ- ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್

  • Apr 8
  • 1 min read

ದರ್ಶನ್ ಗೆ ನೀಡಿರುವ ಮಧ್ಯಂತರ ಜಾಮೀನನ್ನು ವಜಾಗೊಳಿಸುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುವ ರಾಜ್ಯ ಪೊಲೀಸರ ಪ್ರಸ್ತಾಪಕ್ಕೆ ಗೃಹ ಇಲಾಖೆ ಅನುಮತಿ ನೀಡಿದ್ದು, ಮುಂದಿನ ವಾರ ಅರ್ಜಿ ಸಲ್ಲಿಸಲಾಗುವುದು..

ree









ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಶುಕ್ರವಾರ ತಿಳಿಸಿದ್ದಾರೆ.

ದರ್ಶನ್ ಗೆ ನೀಡಿರುವ ಮಧ್ಯಂತರ ಜಾಮೀನನ್ನು ವಜಾಗೊಳಿಸುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುವ ರಾಜ್ಯ ಪೊಲೀಸರ ಪ್ರಸ್ತಾಪಕ್ಕೆ ಗೃಹ ಇಲಾಖೆ ಅನುಮತಿ ನೀಡಿದ್ದು, ಮುಂದಿನ ವಾರ ಅರ್ಜಿ ಸಲ್ಲಿಸಲಾಗುವುದು ಎಂದು ಅವರು ಹೇಳಿದ್ದಾರೆ.


ಕೊಲೆ ಪ್ರಕರಣದಲ್ಲಿ 131 ದಿನ ಜೈಲಿನಲ್ಲಿದ್ದ ನಟ ದರ್ಶನ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಹೈಕೋರ್ಟ್ ಆರು ವಾರಗಳ ಕಾಲ ಷರತ್ತುಬದ್ಧ ಜಾಮೀನು ನೀಡಿದ ನಂತರ ಅಕ್ಟೋಬರ್ 30 ರಂದು ಜೈಲಿನಿಂದ ಬಿಡುಗಡೆಯಾಗಿದ್ದರು.

ಅವರು ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದು, ಬೆಂಗಳೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಅವರು ಇನ್ನೂ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಟನಿಗೆ ಶಸ್ತ್ರಚಿಕಿತ್ಸೆ ಮಾಡದಿದ್ದರೆ ಪಾರ್ಶ್ವವಾಯು ಬರುವ ಸಾಧ್ಯತೆ ಇದೆ ಎಂದು ಜಾಮೀನು ಅರ್ಜಿ ವಿಚಾರಣೆ ವೇಳೆಯಲ್ಲಿ ದರ್ಶನ್ ಪರ ವಕೀಲರು ಹೇಳಿದ್ದರು.

ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು: ಹೈ ಕೋರ್ಟ್ ತೀರ್ಪು ಸ್ವಾಗತಾರ್ಹ- ಡಿಕೆ ಶಿವಕುಮಾರ್

ದರ್ಶನ್‌ಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಒಪ್ಪಿಗೆ ಸೂಚಿಸಿರುವುದಾಗಿ ಗೃಹ ಸಚಿವ ಜಿ.ಪರಮೇಶ್ವರ ಬುಧವಾರ ತಿಳಿಸಿದ್ದರು. ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ಬಯಸಿದರೆ, ಅವರು ಮುಂದುವರಿಯಬಹುದು ಎಂದು ಗೃಹ ಇಲಾಖೆಯ ಕಾರ್ಯದರ್ಶಿಗೆ ತಿಳಿಸಿದ್ದೇನೆ ಎಂದು ಅವರು ಹೇಳಿದ್ದರು.

ದರ್ಶನ್ ಗೆ ಜಾಮೀನು ದೊರೆಯಲು ಅವರು ತೀವ್ರ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಹೇಳಲಾಗಿತ್ತು. ಈ ನಿಟ್ಟಿನಲ್ಲಿ 2022-23 ರಿಂದ ಚಿಕಿತ್ಸೆ ಪಡೆಯುತ್ತಿರುವುದಾಗಿ ನ್ಯಾಯಾಲಯಕ್ಕೆ ಎಲ್ಲ ದಾಖಲೆಗಳನ್ನು ನೀಡಲಾಗಿತ್ತು. ಅವರ ಆಯ್ಕೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೈಕೋರ್ಟ್ ಅನುಮತಿ ನೀಡಿತ್ತು. ಏಳು ದಿನಗಳೊಳಗೆ ಅವರು ನಡೆಸುತ್ತಿರುವ ವೈದ್ಯಕೀಯ ಚಿಕಿತ್ಸೆಯ ವಿವರಗಳು ಮತ್ತು ವರದಿಯನ್ನು ಸಲ್ಲಿಸುವಂತೆ ತಿಳಿಸಲಾಗಿತ್ತು.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page