top of page

ರಕ್ತಸಿಕ್ತವಾಯ್ತು Party Time: ಕ್ಷುಲಕ್ಕ ಕಾರಣಕ್ಕೆ ಶುರುವಾದ ಜಗಳದಲ್ಲಿ ಆಪ್ತ ಸ್ನೇಹಿತನ ಕಿವಿಯನ್ನು ಕಚ್ಚಿ ನುಂಗಿದ ಭೂಪ!

  • Apr 8
  • 1 min read

ವಾದ ವಿಕೋಪಕ್ಕೆ ತಿರುಗಿದ್ದು ವಿಕಾಸ್ ಮೆನನ್ ವ್ಯಾಘ್ರನಾಗಿದ್ದಾನೆ. ಕೋಪದಲ್ಲಿ ವಿಕಾಸ್, ಶ್ರವಣ್ ಲಿಖಾನ ಕಿವಿಯ ಒಂದು ಭಾಗವನ್ನು ಬಾಯಿಯಿಂದ ಕಚ್ಚಿದ್ದಾನೆ.

ree

ಮುಂಬೈ: ಮಹಾರಾಷ್ಟ್ರದ ಥಾಣೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಥಾಣೆಯ ಪಟ್ಲಿಪಾಡ ಪ್ರದೇಶದಲ್ಲಿ ವ್ಯಕ್ತಿಯೋರ್ವ ತನ್ನ ಸ್ನೇಹಿತನ ಕಿವಿಯ ಒಂದು ಭಾಗವನ್ನು ಕಚ್ಚಿ ನುಂಗಿದ್ದಾನೆ. ದೂರು ಬಂದ ಬೆನ್ನಲ್ಲೇ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಆರೋಪಿಯನ್ನು ಬಂಧಿಸಿಲ್ಲ.

ಈ ಘಟನೆ ಪಾರ್ಟಿಯ ಸಮಯದಲ್ಲಿ ನಡೆದಿದೆ. ಪಾರ್ಟಿಗಾಗಿ 37 ವರ್ಷದ ಶ್ರವಣ್ ಲೇಖಾ ಮತ್ತು 32 ವರ್ಷದ ವಿಕಾಸ್ ಮೆನನ್ ಮತ್ತು ಅವರ ಇತರ ಸ್ನೇಹಿತರು ಸೇರಿದ್ದರು. ಮೊದಲಿಗೆ ಎಲ್ಲವೂ ಚೆನ್ನಾಗಿ ನಡೆಯುತ್ತಿತ್ತು. ಆದರೆ ಇದ್ದಕ್ಕಿದ್ದಂತೆ ಇಬ್ಬರ ನಡುವೆ ಯಾವುದೋ ವಿಷಯದ ಬಗ್ಗೆ ಚರ್ಚೆ ಶುರುವಾಯಿತು. ವಾದ ವಿಕೋಪಕ್ಕೆ ತಿರುಗಿದ್ದು ವಿಕಾಸ್ ಮೆನನ್ ವ್ಯಾಘ್ರನಾಗಿದ್ದಾನೆ. ಕೋಪದಲ್ಲಿ ವಿಕಾಸ್, ಶ್ರವಣ್ ಲಿಖಾನ ಕಿವಿಯ ಒಂದು ಭಾಗವನ್ನು ಬಾಯಿಯಿಂದ ಕಚ್ಚಿದ್ದಾನೆ. ಜಗಳ ಇಲ್ಲಿಗೆ ಮುಗಿಯಲಿಲ್ಲ. ಕೋಪದಿಂದ ನಿಯಂತ್ರಣ ತಪ್ಪಿದ ವಿಕಾಸ್ ಮೆನನ್, ತನ್ನ ಕತ್ತರಿಸಿದ ಕಿವಿಯ ತುಂಡನ್ನು ಸಹ ನುಂಗಿದ್ದಾನೆ. ಈ ಅನಿರೀಕ್ಷಿತ ದಾಳಿಯಿಂದ ಪಾರ್ಟಿಯಲ್ಲಿದ್ದ ಇತರ ಜನರು ಕೂಡ ಆಘಾತಕ್ಕೊಳಗಾದರು. ಗಾಯಗೊಂಡ ಶ್ರವಣ್ ಲೇಖಾ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು.


ಈ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಕಾರ್ಯಪ್ರವೃತ್ತರಾದ ಕಾಸರ್ವಾಡವಲಿ ಠಾಣೆ ಪೊಲೀಸರು ವಿಕಾಸ್ ಮೆನನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸ್ವಯಂಪ್ರೇರಣೆಯಿಂದ ಗಂಭೀರ ಗಾಯಗೊಳಿಸಿದ್ದಕ್ಕಾಗಿ ಭಾರತೀಯ ದಂಡ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 117(2)ರ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಸ್ತುತ, ಪೊಲೀಸರು ಇಡೀ ವಿಷಯವನ್ನು ಆಳವಾಗಿ ತನಿಖೆ ನಡೆಸುತ್ತಿದ್ದಾರೆ ಮತ್ತು ಜಗಳದ ಹಿಂದಿನ ನಿಜವಾದ ಕಾರಣ ಏನೆಂದು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಆರೋಪಿ ವಿಕಾಸ್ ಮೆನನ್ ನನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ಆದರೆ ಪೊಲೀಸರು ಅವನನ್ನು ಶೀಘ್ರದಲ್ಲೇ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page