top of page

ವಿಜಯಪುರ ವೈದ್ಯಕೀಯ ಕಾಲೇಜಿನಲ್ಲಿ ಕಾಶ್ಮೀರಿ ವಿದ್ಯಾರ್ಥಿಗೆ ರ‍್ಯಾಗಿಂಗ್; ಸಿಎಂ, ಪ್ರಧಾನಿಗೆ ಟ್ವೀಟ್

  • Apr 8
  • 1 min read

ಕಾಶ್ಮೀರದ ಅನಂತನಾಗ್ ಮೂಲದ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಹಮೀಮ್ ನಾಸೀರ್ ಹುಸೇನಿ ಅವರಿಗೆ ರ‍್ಯಾಗಿಂಗ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ree

ವಿಜಯಪುರ: ವಿಜಯಪುರದ ಹೊರವಲಯದಲ್ಲಿರುವ ಅಲ್-ಅಮೀನ್ ವೈದ್ಯಕೀಯ ಕಾಲೇಜಿನಲ್ಲಿ ಕಾಶ್ಮೀರ ಮೂಲದ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್ ಮಾಡಿ, ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಕಾಶ್ಮೀರದ ಅನಂತನಾಗ್ ಮೂಲದ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಹಮೀಮ್ ನಾಸೀರ್ ಹುಸೇನಿ ಅವರಿಗೆ ರ‍್ಯಾಗಿಂಗ್ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಲಾಗಿದೆ.

ಫೆಬ್ರವರಿ 18 ರಂದು ಹಮೀಮ್ ಅವರು ಕಾಲೇಜು ಆಟದ ಮೈದಾನದಲ್ಲಿ 2019 ಮತ್ತು 2022 ಬ್ಯಾಚ್ ವಿದ್ಯಾರ್ಥಿಗಳ ನಡುವಿನ ಕ್ರಿಕೆಟ್ ಪಂದ್ಯ ವೀಕ್ಷಿಸಲು ತೆರಳಿದ್ದ ವೇಳೆ ಸೀನಿಯರ್ಸ್ ಜತೆ ಗಲಾಟೆ ನಡೆದಿದೆ. ಬಳಿಕ ರಾತ್ರಿ ಹಾಸ್ಟೇಲ್​ನ ರೂಮಗೆ ಹಮೀಮ್ ಬಂದಾಗ 2019 ರ ಎಂಬಿಬಿಎಸ್ ವಿದ್ಯಾರ್ಥಿಗಳು, ಸೆಲ್ಯೂಟ್ ಮಾಡು, ಡಾನ್ಸ್ ಮಾಡು, ಹಾಡು ಹೇಳುವಂತೆ ರ‍್ಯಾಗಿಂಗ್ ಮಾಡಿದ್ದಾರೆ.


ನೀನು ಇನ್ನೂ ನಾಲ್ಕು ವರ್ಷ ಇಲ್ಲಿಯೇ ಇರಬೇಕು ಹೇಗೆ ಇರ್ತಿಯಾ ಹುಷಾರ್ ಎಂದು ಎಚ್ಚರಿಕೆ ಕೊಟ್ಟಿದ್ದಾರಂತೆ. ಈ ವಿಚಾರವನ್ನು ರ‍್ಯಾಗಿಂಗ್​ಗೆ ಒಳಗಾದ ವಿದ್ಯಾರ್ಥಿ ಹಮೀಮ್ ನಾಸೀರ್ ಹುಸೇನಿ ಅವರು ತಮ್ಮ ಎಕ್ಸ್ ಖಾತೆಯಿಂದ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಮ್ಮು ಕಾಶ್ಮೀರ ಮುಖ್ಯಮಂತ್ರಿ , ರಾಜ್ಯದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರಿಗೆ ಟ್ವೀಟ್ ಮಾಡಿದ್ದಾರೆ.

ಹಲ್ಲೆ ಮಾಡಿ ರ‍್ಯಾಗಿಂಗ್ ಮಾಡಿದ ಬಳಿಕ ಹಾಸ್ಟೇಲ್​ನಲ್ಲಿ ತನ್ನ ರೂಂ ಬಳಿ ಸೆಕ್ಯೂರಿಟಿ ಗಾರ್ಡ್ ನಿಯೋಜಿಸಲಾಗಿದೆ. ಸುರಕ್ಷತೆಗಾಗಿ ಸೆಕ್ಯುರಿಟಿ ಗಾರ್ಡ್ ನಿಯೋಜನೆ ಮಾಡಲಾಗಿದೆ ಎಂದು ಮೆಸೇಜ್ ಜೊತೆಗೆ ವಿಡಿಯೋ ಕೂಡ ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಧ್ಯಪ್ರವೇಶಿಸಿ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿಗಳ ಸಂಘ(ಜೆಕೆಎಸ್ಎ)ದ ರಾಷ್ಟ್ರೀಯ ಸಂಚಾಲಕರು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಗಳು ಈ ವಿಷಯದಲ್ಲಿ ವೈಯಕ್ತಿಕವಾಗಿ ಮಧ್ಯಪ್ರವೇಶಿಸಿ ಸಂತ್ರಸ್ತ ವಿದ್ಯಾರ್ಥಿಗೆ ತ್ವರಿತ ನ್ಯಾಯವನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page