top of page

ವಿದ್ಯುತ್ ದರ ಏರಿಕೆ: KERC ಗೆ ಪ್ರಸ್ತಾವನೆ ಸಲ್ಲಿಸಿದ ವಿದ್ಯುತ್ ವಿತರಣಾ ಕಂಪನಿಗಳು

  • Apr 8
  • 1 min read

ಕೆಇಆರ್ ಸಿ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದರೆ ಬೆಲೆ ಏರಿಕೆಯ ಹೊರೆ ಗ್ರಾಹಕರ ಮೇಲೆ ಬೀಳಲಿದೆ. ಪ್ರಸ್ತಾವನೆ ಕುರಿತು ಪ್ರತಿಕ್ರಿಯಿಸಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, ಇದು ಮಾಮೂಲಿ ಪ್ರಕ್ರಿಯೆ ಎಂದು ಹೇಳಿದ್ದಾರೆ.

ree









ಬೆಂಗಳೂರು: ವಿದ್ಯುತ್ ವಿತರಣಾ ಕಂಪನಿಗಳು (ಎಸ್ಕಾಮ್‌ಗಳು) ಶುಕ್ರವಾರ (ಡಿ.06) ರಂದು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಮುಂದಿನ ಮೂರು ವರ್ಷಗಳಿಗೆ ಅಂದಾಜು ಇರುವ ವಿದ್ಯುತ್ ದರ ಹೆಚ್ಚಳದ ಪ್ರಸ್ತಾವನೆಯನ್ನು ಸಲ್ಲಿಸಿವೆ.

ಬಹು-ವರ್ಷದ ಸುಂಕ (MYT) ವ್ಯವಸ್ಥೆಗೆ ಅಧಿಸೂಚನೆಯನ್ನು ಹೊರಡಿಸಿದ ನಂತರ KERC ದರ ಪರಿಷ್ಕರಣೆ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. MYT ವ್ಯವಸ್ಥೆಯ ಪ್ರಕಾರ, ಎಸ್ಕಾಂಗಳು 2025-26 ನೇ ಸಾಲಿಗೆ 67 ರಿಂದ 70 ಪೈಸೆ, 2026-27 ನೇ ಸಾಲಿಗೆ 70 ರಿಂದ 75 ಪೈಸೆ ಮತ್ತು 2027-28 ನೇ ಸಾಲಿಗೆ 85 ರಿಂದ 90 ಪೈಸೆ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ.


ಕೆಇಆರ್ ಸಿ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದರೆ ಬೆಲೆ ಏರಿಕೆಯ ಹೊರೆ ಗ್ರಾಹಕರ ಮೇಲೆ ಬೀಳಲಿದೆ. ಪ್ರಸ್ತಾವನೆ ಕುರಿತು ಪ್ರತಿಕ್ರಿಯಿಸಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, ಇದು ಮಾಮೂಲಿ ಪ್ರಕ್ರಿಯೆ. ಎಲ್ಲಾ ಭಾಗಿದಾರರನ್ನು ಕರೆಸಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ. ದರ ಏರಿಕೆ ಬಹುತೇಕ ಏಕರೂಪವಾಗಿರಲಿದೆ ಎಂದು ಕೆಇಆರ್ ಸಿ ಮೂಲಗಳು ತಿಳಿಸಿವೆ.

ತನ್ನ ದರ ಪರಿಷ್ಕರಣೆ ಅರ್ಜಿಯ ಪ್ರಸ್ತಾವನೆಯಲ್ಲಿ, ಬೆಸ್ಕಾಂಗೆ ಮುಂದಿನ ವರ್ಷದಲ್ಲಿ (2025-26) 2,572.69 ಕೋಟಿ ಆದಾಯದ ಕೊರತೆ ಉಂಟಾಗಲಿದೆ. ಇದನ್ನು ಹೋಗಲಾಡಿಸಲು 2025-26ನೇ ಸಾಲಿಗೆ 2025ರ ಜನವರಿಯಿಂದ ಜಾರಿಗೆ ಬರುವಂತೆ ಪ್ರತಿ ಯೂನಿಟ್‌ಗೆ 67 ಪೈಸೆ ಹೆಚ್ಚಿಸಬೇಕು ಎಂದು ಮನವಿ ಮಾಡಲಾಗಿದೆ.


ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಸೇರಿದಂತೆ ಎಲ್ಲಾ ಎಸ್ಕಾಂಗಳು ದರ ಹೆಚ್ಚಳದ ಪ್ರಸ್ತಾವನೆಯನ್ನು ಮಾತ್ರ ಸಲ್ಲಿಸಿವೆ. ಈ ನಿಟ್ಟಿನಲ್ಲಿ ಕೆಇಆರ್‌ಸಿ ಸಾರ್ವಜನಿಕರು, ಉದ್ಯಮಿಗಳು, ವ್ಯಾಪಾರಸ್ಥರು ಸೇರಿದಂತೆ ಎಲ್ಲಾ ವಿಭಾಗಗಳಿಂದ ವರದಿಗಳನ್ನು ಸ್ವೀಕರಿಸುತ್ತದೆ. ನಂತರ ಅಂತಿಮವಾಗಿ ದರ ಏರಿಕೆಯ ಅಂತಿಮ ಆದೇಶ ಹೊರಬೀಳಲಿದೆ.


Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page