top of page

ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ: 10 ಸಾಮಾಜಿಕ ಮಾಧ್ಯಮ ಖಾತೆಗಳಿಗೆ ನಿರ್ಬಂಧ; ಯಾವುದೇ ಪಿತೂರಿ ಇಲ್ಲ- ವಿಮಾನಯಾನ ಸಚಿವ

ಸೈಬರ್, ವಾಯುಯಾನ ಭದ್ರತೆ ಮತ್ತು ಗುಪ್ತಚರ ಸಂಸ್ಥೆಗಳ ಜಂಟಿ ತಂಡವೊಂದನ್ನು ಈ ಖಾತೆಗಳನ್ನು ಪರಿಶೀಲಿಸಿದ್ದು, ಬುದ್ಧಿಹೀನ ಬೆದರಿಕೆ ಸಂದೇಶ ಮುಂದುವರೆಸಿದ್ದರಿಂದ ಈ ಖಾತೆಗಳನ್ನು ಅಮಾನತುಗೊಳಿಸಲು ಆದೇಶ ಹೊರಡಿಸಲಾಗಿದೆ.


ree









ನವದೆಹಲಿ: ಈ ವಾರ ಅನೇಕ ಭಾರತೀಯ ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆಯ ಸಂದೇಶ ಕಳುಹಿಸಿದ್ದ ಅರ್ಧ ಡಜನ್ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸೈಬರ್ ಭದ್ರತಾ ಏಜೆನ್ಸಿಗಳು ಅಮಾನತುಗೊಳಿಸಿವೆ ಅಥವಾ ನಿರ್ಬಂಧಿಸಿವೆ.

ಸೈಬರ್, ವಾಯುಯಾನ ಭದ್ರತೆ ಮತ್ತು ಗುಪ್ತಚರ ಸಂಸ್ಥೆಗಳ ಜಂಟಿ ತಂಡವೊಂದನ್ನು ಈ ಖಾತೆಗಳನ್ನು ಪರಿಶೀಲಿಸಿದ್ದು, ಬುದ್ಧಿಹೀನ ಬೆದರಿಕೆ ಸಂದೇಶ ಮುಂದುವರೆಸಿದ್ದರಿಂದ ಈ ಖಾತೆಗಳನ್ನು ಅಮಾನತುಗೊಳಿಸಲು ಆದೇಶ ಹೊರಡಿಸಲಾಗಿದೆ. ಈ ವೇಳೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ವಿಮಾನ ಸ್ಫೋಟಿಸುವ ಬೆದರಿಕೆ ಹಿಂದೆ ಯಾವುದೇ ಪಿತೂರಿ ಇಲ್ಲ ಎಂದು ಹೇಳಿದ್ದಾರೆ.

ಸುಮಾರು ಏಳು-ಎಂಟು ಸಾಮಾಜಿಕ ಮಾಧ್ಯಮ ಖಾತೆಗಳು, ಅವುಗಳಲ್ಲಿ ಹೆಚ್ಚಿನವು ಎಕ್ಸ್ ಗೆ ಸೇರಿದ್ದು, ಸೋಮವಾರದಿಂದ ಅವುಗಳನ್ನು ಅಮಾನತುಗೊಳಿಸಲಾಗಿದೆ ಅಥವಾ ನಿರ್ಬಂಧಿಸಲಾಗಿದೆ. ದೇಶಿಯ ಹಾಗೂ ಅಂತಾರಾಷ್ಟ್ರೀಯ ಮಾರ್ಗದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸೇರಿದ ವರ್ಚುಯಲ್ ಮೂಲಕ ಹುಸಿ ಬಾಂಬ್ ಮತ್ತು ಉಗ್ರರ ದಾಳಿ ಬೆದರಿಕೆ ಕಳುಹಿಸಲಾಗಿದೆ ಎಂದು ಮೂಲಗಳು ಹೇಳಿವೆ.

ವಿಮಾನಗಳಿಗೆ ಬಾಂಬ್ ಬೆದರಿಕೆ: ಛತ್ತೀಸ್‌ಗಢದ ಅಪ್ರಾಪ್ತ ಬಾಲಕ ಪೊಲೀಸ್ ವಶಕ್ಕೆ; ತಂದೆಯ ವಿಚಾರಣೆ


ಬಾಂಬ್ ಇಡಲಾಗಿದೆ. ರಕ್ತ ಎಲ್ಲೆಡೆ ಹರಡುತ್ತದೆ. ಸ್ಫೋಟಕ ಸಾಧನಗಳು, ಇದು ತಮಾಷೆಯಲ್ಲ ಮತ್ತು ನೀವೆಲ್ಲರೂ ಸಾಯುತ್ತೀರಿ ಎಂಬಂತಹ ಒಂದೇ ಪದ, ಸಾಲುಗಳನ್ನು ಬಹುತೇಕ ಸಾಮಾಜಿಕ ಮಾಧ್ಯಮಗಳಲ್ಲಿ ಬಂದಿರುವುದನ್ನು ಏಜೆನ್ಸಿಗಳು ಪತ್ತೆ ಹಚ್ಚಿವೆ.

ಇಂತಹ ಪ್ರತಿಯೊಂದು ನಕಲಿ ಬೆದರಿಕೆ ಸಂದೇಶ ಕುರಿತು ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಳ್ಳುವುದರ ಹೊರತಾಗಿ ಯಾವ್ ಆನ್ ಲೈನ್ ನಿಂದ ಇಂತಹ ಫೋಸ್ಟ್ ಮಾಡಲಾಗಿದೆ ಎಂಬುದನ್ನು ಪರಿಶೀಲಿಸಲು ಏಜೆನ್ಸಿಗಳು 'ಸೈಬರ್ ಗಸ್ತು' ಹೆಚ್ಚಿಸಿವೆ ಎಂದು ಮೂಲಗಳು ತಿಳಿಸಿವೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page