top of page

ವೈವಾಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಪತಿಗೆ ವಿನಾಯಿತಿ; ವಿಚಾರಣೆ ಮುಂದೂಡಿದ CJI ಚಂದ್ರಚೂಡ್ ಪೀಠ!

  • Apr 4
  • 1 min read

ಪತಿ ತನ್ನ ಅಪ್ರಾಪ್ತ ವಯಸ್ಕಳಲ್ಲದ ಹೆಂಡತಿಯನ್ನು ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಲು ಒತ್ತಾಯಿಸಿದರೆ ಅದು ಅಪರಾಧವಲ್ಲ ಎಂದು ವಿನಾಯಿತಿ ನೀಡುತ್ತದೆ.


ree









ನವದೆಹಲಿ: ವೈವಾಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಗಂಡಂದಿರಿಗೆ ವಿನಾಯಿತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಬುಧವಾರ ನಾಲ್ಕು ವಾರಗಳ ಕಾಲ ಅಂದರೆ ನವೆಂಬರ್ 10ಕ್ಕೆ ಮುಂದೂಡಿದ್ದಾರೆ.

ದೀಪಾವಳಿ ರಜೆಗೆ ಸುಪ್ರೀಂ ಕೋರ್ಟ್ ಮುಚ್ಚುವ ಮೊದಲು ವಿಚಾರಣೆ ಮುಕ್ತಾಯಗೊಳ್ಳದಿದ್ದರೆ ವಿಚಾರಣೆಯನ್ನು ಪೂರ್ಣಗೊಳಿಸಲು ಮತ್ತು ತೀರ್ಪು ನೀಡಲು ಸಾಧ್ಯವಾಗುವುದಿಲ್ಲ ಎಂದು ಸಿಜೆಐ ಚಂದ್ರಚೂಡ್ ಇದೇ ವೇಳೆ ಹೇಳಿದರು.

ಅಂತೆಯೇ ಈ ವಿಚಾರದಲ್ಲಿ ಸಲ್ಲಿಕೆ ಮಾಡಲು ಸಂಬಂಧಪಟ್ಟ ಎಲ್ಲ ವಕೀಲರಿಗೆ ಕಾಲಾವಕಾಶ ನೀಡಬೇಕು ಎಂದು ನ್ಯಾಯಮೂರ್ತಿ ಚಂದ್ರಚೂಡ್ ಅಭಿಪ್ರಾಯಪಟ್ಟರು.

ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ನಾಲ್ಕು ವಾರಗಳ ನಂತರ ಮತ್ತೊಂದು ಪೀಠದಿಂದ ವಿಚಾರಣೆಗೆ ಅರ್ಜಿಗಳನ್ನು ನಿಗದಿಪಡಿಸಿತು. ಇದು ಅಕ್ಟೋಬರ್ 17 ರಂದು ವಿಚಾರಣೆಯನ್ನು ಪ್ರಾರಂಭಿಸಿತ್ತು.


ಭಾರತೀಯ ದಂಡ ಸಂಹಿತೆ (IPC) ಮತ್ತು ಭಾರತೀಯ ನ್ಯಾಯ ಸಂಹಿತಾ (BNS) ಅತ್ಯಾಚಾರದ ಅಪರಾಧಕ್ಕಾಗಿ ಪತಿಗೆ ಕಾನೂನು ಕ್ರಮದಿಂದ ವಿನಾಯಿತಿ ನೀಡುತ್ತದೆ. ಪತಿ ತನ್ನ ಅಪ್ರಾಪ್ತ ವಯಸ್ಕಳಲ್ಲದ ಹೆಂಡತಿಯನ್ನು ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಲು ಒತ್ತಾಯಿಸಿದರೆ ಅದು ಅಪರಾಧವಲ್ಲ ಎಂದು ವಿನಾಯಿತಿ ನೀಡುತ್ತದೆ.

IPC ಯ ಸೆಕ್ಷನ್ 375 ರ ವಿನಾಯಿತಿ ಷರತ್ತಿನ ಅಡಿಯಲ್ಲಿ, ಪುರುಷನು ತನ್ನ ಹೆಂಡತಿಯೊಂದಿಗೆ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆಗಳಲ್ಲಿ ತೊಡಗಿದಾಗ ಆಕೆ ಅಪ್ರಾಪ್ತಳಾಗಿಲ್ಲದೇ ಹೋದರೆ ಅದು ಅತ್ಯಾಚಾರವಲ್ಲ ಎಂದು ಹೇಳುತ್ತದೆ.


ವೈವಾಹಿಕ ಅತ್ಯಾಚಾರ ಅಪರಾಧೀಕರಣ: ಕೇಂದ್ರ ಸರ್ಕಾರದ ವಿರೋಧ! ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ


ಹೊಸ ಕಾನೂನಿನ ಅಡಿಯಲ್ಲಿಯೂ ಸಹ, ಸೆಕ್ಷನ್ 63 (2) ಸಹ ಅತ್ಯಾಚಾರಕ್ಕೆ ವಿನಾಯಿತಿ ನೀಡುತ್ತದೆ. ಹೆಂಡತಿ ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನವನವಳಾಗದೇ ಇದ್ದರೆ ಪುರುಷನು ತನ್ನ ಸ್ವಂತ ಹೆಂಡತಿಯೊಂದಿಗೆ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆಗಳು ನಡೆಸಿದರೆ ಅದು ಅತ್ಯಾಚಾರವಲ್ಲ ಎಂದು ಹೇಳುತ್ತದೆ"

ವೇಗವಾಗಿ ಬೆಳೆಯುತ್ತಿರುವ ಮತ್ತು ನಿರಂತರವಾಗಿ ಬದಲಾಗುತ್ತಿರುವ ಸಾಮಾಜಿಕ ಮತ್ತು ಕೌಟುಂಬಿಕ ರಚನೆಯಲ್ಲಿ, ತಿದ್ದುಪಡಿ ಮಾಡಲಾದ ನಿಬಂಧನೆಗಳ ದುರುಪಯೋಗವನ್ನು ತಳ್ಳಿಹಾಕಲಾಗುವುದಿಲ್ಲ. ಏಕೆಂದರೆ ಒಪ್ಪಿಗೆ ಇದೆಯೇ ಅಥವಾ ಇಲ್ಲವೇ ಎಂಬುದನ್ನು ಸಾಬೀತುಪಡಿಸಲು ವ್ಯಕ್ತಿಗೆ ಕಷ್ಟವಾಗುತ್ತದೆ ಎಂದು ಕೇಂದ್ರ ಸರ್ಕಾರ ನ್ಯಾಯಪೀಠಕ್ಕೆ ಹೇಳಿದೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page