top of page

ಶಿರೂರು ಭೂಕುಸಿತ: ಅನಾಥ ನಾಯಿಗಳಿಗೆ ಆಸರೆಯಾಗಿ ಮಾನವೀಯತೆ ಮೆರೆದ ಉತ್ತರ ಕನ್ನಡ ಎಸ್ ಪಿ!

  • Apr 4
  • 1 min read

ದುರಂತದಿಂದ ಪವಾಡ ರೀತಿಯಲ್ಲಿ ಬದುಕುಳಿದ ಎರಡು ನಾಯಿಗಳು ಭಾರೀ ಮಳೆ ನಡುವೆ ಅವಶೇಷಗಳ ಮೇಲೆ ನಿಂತು ತನ್ನ ಪಾಲಕರಿಗಾಗಿ ಹುಡುಕಾಡುವ ದಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.


ree









ಕಾರವಾರ: ಜುಲೈನಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಸಂಭವಿಸಿದ್ದ ಭೂಕುಸಿತದಲ್ಲಿ ಪಾಲಕರನ್ನು ಕಳೆದುಕೊಂಡು ಅನಾಥವಾಗಿದ್ದ ನಾಯಿಗಳನ್ನು ಇದೀಗ ಉತ್ತರ ಕನ್ನಡ ಜಿಲ್ಲಾ ಪೊಲೀಸರು ದತ್ತು ತೆಗೆದುಕೊಂಡಿದ್ದಾರೆ.

ಗುಡ್ಡ ಕುಸಿತದಲ್ಲಿ ಹೋಟೆಲ್ ಮಾಲೀಕರಾದ ಲಕ್ಷ್ಮಣ್ ನಾಯ್ಕ್, ಅವರ ಪತ್ನಿ ಶಾಂತಿ, ಪುತ್ರಿ ಆವಂತಿಕಾ ಮತ್ತು ಪುತ್ರ ಸೌರಭ್ ಸಜೀವ ಸಮಾಧಿಯಾಗಿದ್ದರು. ದುರಂತದಿಂದ ಪವಾಡ ರೀತಿಯಲ್ಲಿ ಬದುಕುಳಿದ ಎರಡು ನಾಯಿಗಳು ಭಾರೀ ಮಳೆ ನಡುವೆ ಅವಶೇಷಗಳ ಮೇಲೆ ನಿಂತು ತನ್ನ ಪಾಲಕರಿಗಾಗಿ ಹುಡುಕಾಡುವ ದಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಎಸ್ಪಿ ನಾರಾಯಣ್ ಅವರು ಅವುಗಳನ್ನು ದತ್ತು ಪಡೆಯುವ ಮೂಲಕ ಆಸರೆಯಾಗಿದ್ದಾರೆ.


ಈ ಕುರಿತು ಮಾಹಿತಿ ಹಂಚಿಕೊಂಡಿರುವ ಎಸ್ಪಿ ನಾರಾಯಣ್, “ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಮತ್ತಿತರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿದಾಗ ನಾಯಿಗಳ ಪಾಲಕರು ಸಾವನ್ನಪ್ಪಿರುವುದು ತಿಳಿಯಿತು. ನಾಯಿಗಳನ್ನು ಲಕ್ಷ್ಮಣ್ ನಾಯ್ಕ್ ಬಹಳ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ನಾಯಿಗಳು ಹೋಟೆಲ್ ಬಿಟ್ಟು ಎಲ್ಲಿಯೂ ಬೇರೆ ಕಡೆಗೆ ಹೋಗದಿರುವ ಬಗ್ಗೆ ಅವರ ಸಂಬಂಧಿ ಪುರುಷೋತ್ತಮ್ ನಾಯ್ಕ್ ತಿಳಿಸಿದರು. ಮನೆಯವರ ಅಂತ್ಯ ಸಂಸ್ಕಾರ ಮಾಡಿದ ನಂತರವೂ ನಾಯಿಗಳು ಅಲ್ಲಿಂದ ಬೇರೆ ಕಡೆಗೆ ತೆರಳಿರಲಿಲ್ಲ. ಮತ್ತೆ ಕಾರ್ಯಾಚರಣೆಗೆ ಬಂದಾಗಲೂ ಅವುಗಳನ್ನು ಹೋಟೆಲ್ ಬಳಿ ಮಲಗಿದ್ದವು. ಅವುಗಳ ನಿಯತ್ತು ನನ್ನ ಮನಸ್ಸಿಗೆ ತಾಟಿತ್ತು. ಹೀಗಾಗಿ ದತ್ತು ಪಡೆಯಲು ನಿರ್ಧರಿಸಿದ್ದಾಗಿ ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಶ್ವಾನ ದಳ ಇರುವುದರಿಂದ ಅವುಗಳನ್ನು ಮೊದಲು ಕೆನಾಲ್ ನಲ್ಲಿ ಇರಿಸಲು ನಿರ್ಧರಿಸಲಾಗಿದೆ. ಪೊಲೀಸರಿಗೆ ನಾಯಿ ತರಬೇತುದಾರರಿದ್ದಾರೆ. ಪಶ್ಚಿಮ ವಲಯದ ಐಜಿಪಿ ಅವರೊಂದಿಗೆ ಮಾತನಾಡಿ ಅನುಮತಿ ಕೋರಿದ್ದೇನೆ. ಪೋಲೀಸ್ ಕ್ವಾರ್ಟರ್ಸ್‌ಗಳ ಕೆನಾಲ್ ಸಿದ್ಧಪಡಿಸಲಿದ್ದು,ಅವುಗಳು ಅಲ್ಲಿಯೇ ಇರಲಿವೆ ಎಂದು ಹೇಳಿದರು.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page