top of page

ಸಂಸತ್ ನಲ್ಲಿ ಮೆಟ್ರೋ ಪ್ರಯಾಣ ದರ ಏರಿಕೆ ವಿಷಯ ಪ್ರಸ್ತಾಪಿಸಿದ Tejasvi Surya; ಹೊರೆಯಾಗದಂತೆ ದರ ನಿಗದಿಗೆ ಮನವಿ

  • Apr 8
  • 1 min read

ನಮ್ಮ ಮೆಟ್ರೋನಲ್ಲಿ ಕಡಿಮೆ ಅಂತರದ ಸ್ಥಳಗಳಿಗೆ ಪ್ರಯಾಣಿಸುವವರಿಗೂ ಶೇ.100 ರಷ್ಟು ಪ್ರಯಾಣ ದರ ಏರಿಕೆಯಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ree

ಬೆಂಗಳೂರು ಮೆಟ್ರೋ ದರದಲ್ಲಿ ಭಾರಿ ಪ್ರಮಾಣದ ಏರಿಕೆ ಸಂಸತ್ ನಲ್ಲಿಯೂ ಪ್ರತಿಧ್ವನಿಸಿದೆ.

ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಂಸದ ತೇಜಸ್ವಿ ಸೂರ್ಯ ಮೆಟ್ರೋ ದರಲ್ಲಿ ಭಾರಿ ಏರಿಕೆಯಾಗಿರುವುದರಿಂದ ಮಧ್ಯಮ ವರ್ಗಕ್ಕೆ ಉಂಟಾಗುತ್ತಿರುವ ಅನಾನುಕೂಲದ ಬಗ್ಗೆ ಸರ್ಕಾರದ ಗಮನ ಸೆಳೆದರು. ನಮ್ಮ ಮೆಟ್ರೋನಲ್ಲಿ ಕಡಿಮೆ ಅಂತರದ ಸ್ಥಳಗಳಿಗೆ ಪ್ರಯಾಣಿಸುವವರಿಗೂ ಶೇ.100 ರಷ್ಟು ಪ್ರಯಾಣ ದರ ಏರಿಕೆಯಾಗಿದೆ.

ಇದರಿಂದಾಗಿ ಮೆಟ್ರೋ ಪ್ರಯಾಣ ದುಬಾರಿಯಾಗಿದ್ದು ನಗರಕ್ಕೆ ಸುಸ್ಥಿರ ಸಾರ್ವಜನಿಕ ಸಾರಿಗೆ ಪರಿಹಾರವಾಗಿರುವ ಮೂಲ ಉದ್ದೇಶಕ್ಕೇ ಧಕ್ಕೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ದರ ರಚನೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದೇ ವಿಷಯವಾಗಿ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನೂ ತೇಜಸ್ವಿ ಸೂರ್ಯ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಮ್ಮ ಮೆಟ್ರೋ ಪ್ರಯಾಣ ದರದ ಏರಿಕೆಗೆ ರಾಜ್ಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗತೊಡಗಿದೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page