top of page

ಹಿಂದೂಗಳ ಮೇಲಿನ ದಾಳಿ ನಡುವೆ ಬಾಂಗ್ಲಾ-ಭಾರತ ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆ

  • Apr 8
  • 1 min read

ಆಗಸ್ಟ್ 2024 ರಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ನಂತರ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹದಗೆಟ್ಟಿದೆ

ree

ಢಾಕಾ: ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ಪುನರಾವರ್ತಿತ ದಾಳಿಗಳ ಮಧ್ಯೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸೋಮವಾರ ತಮ್ಮ ಬಾಂಗ್ಲಾದೇಶದ ವಿದೇಶಾಂಗ ಕಾರ್ಯದರ್ಶಿ ಮೊಹಮ್ಮದ್ ಜಾಶಿಮ್ ಉದ್ದೀನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಆಗಸ್ಟ್ 2024 ರಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ನಂತರ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹದಗೆಟ್ಟಿದೆ.

ಬಾಂಗ್ಲಾದೇಶದ ಹಿಂದೂ ಸನ್ಯಾಸಿ ಚಿನ್ಮೋಯ್ ಕೃಷ್ಣ ದಾಸ್ ಅವರ ಇತ್ತೀಚಿನ ಬಂಧನವು ಉಭಯ ದೇಶಗಳಲ್ಲಿ ಪ್ರತಿಭಟನೆಗೆ ಕಾರಣವಾಗಿದ್ದು, ಬಾಂಗ್ಲಾದೇಶದಲ್ಲಿ ಹಲವು ಹಿಂದೂಗಳ ವಿರುದ್ಧ ದಾಳಿಯನ್ನು ಪ್ರಚೋದಿಸಿದೆ.


ಹಿಂದೂಗಳ ಮೇಲಿನ ದಾಳಿಯನ್ನು ಭಾರತ ಖಂಡಿಸಿದ್ದು, ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಮಿಸ್ರಿ ಭಾರತೀಯ ವಾಯುಪಡೆಯ ಜೆಟ್‌ನಲ್ಲಿ ಢಾಕಾ ತಲುಪಿದರು ಮತ್ತು ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯದ ಹಿರಿಯ ಅಧಿಕಾರಿ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಈ ವೇಳೆ ಭಾರತೀಯ ಹೈಕಮಿಷನರ್ ಪ್ರಣಯ್ ವರ್ಮಾ ಕೂಡ ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು.


ಬಾಂಗ್ಲಾದೇಶದ ಸಹವರ್ತಿ ಮೊಹಮ್ಮದ್ ಜಾಶಿಮ್ ಉದ್ದೀನ್ ಅವರೊಂದಿಗಿನ ವ್ಯಾಪಕ ಮಾತುಕತೆಯ ನಂತರ ಮಿಸ್ತಿ ವಿದೇಶಾಂಗ ಸಚಿವ ಮೊಹಮ್ಮದ್ ತೌಹಿದ್ ಹೊಸೈನ್ ಅವರನ್ನು ಭೇಟಿಯಾಗಲಿದ್ದಾರೆ. ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯಸ್ಥ ಅಥವಾ ಮುಖ್ಯ ಸಲಹೆಗಾರ ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರ ಭೇಟಿಗೂ ಸಹ ನಿರ್ಧರಿಸಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page